ಚೀನಾದಿಂದ ಸಚಿವ ಜೈಶಂಕರ್ ಪುತ್ರನಿಗೆ ಕೋಟಿ ಕೋಟಿ ಕಾಸು!
ನವದೆಹಲಿ, ಡಿಸೆಂಬರ್ 19: ಭಾರತ-ಚೀನಾ ಗಡಿಯಲ್ಲಿ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ವಿರುದ್ಧ ಕಾಂಗ್ರೆಸ್ ಆರೋಪಗಳ ವಾಗ್ಬಾಣ ಬಿಡುತ್ತಿದೆ.
ಚೀನಾದ ಆಕ್ರಮಣಗಳ ವಿಷಯದ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರದ ಮೌನಕ್ಕೆ ಕಾರಣವೇನು ಎಂಬುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಪುತ್ರನಿಗೆ ಚೀನಾದಿಂದ ನಿಧಿ ಬರುತ್ತಿದೆ ಎಂದು ಗುರಿಯಾಗಿಸಿ ದಾಳಿ ನಡೆಸಿದೆ.
ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಯ ನಡುವೆ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ, ಜೈಶಂಕರ್ ಅವರ ಪುತ್ರ ಧ್ರುವ ಜೈಶಂಕರ್ ಅವರು ಕೆಲಸ ಮಾಡುವ ಅಬ್ಸರ್ವರ್ ರಿಸರ್ಚ್ ಫೌಂಡೇಶನ್ (ಒಆರ್ಎಫ್)ಗೆ ಚೀನಾದಿಂದ ಹಣ ಬಂದಿದೆ ಎಂದು ಆರೋಪಿಸಿದರು.

ಜೈಶಂಕರ್ ಪುತ್ರನ ಕಂಪನಿಗೆ ಚೀನಾದಿಂದ ಕಾಸು
"ಇಂದು ಒಂದು ಮಾಹಿತಿಯನ್ನು ಬಹಿರಂಗಪಡಿಸುವುದು ಮುಖ್ಯವಾಗಿದೆ. ವಿದೇಶಾಂಗ ಸಚಿವರ ಪುತ್ರನ ನೇತೃತ್ವದ ಯುಎಸ್ಎ ಘಟಕದ ಪ್ರತಿಷ್ಠಾನವು ಚೀನಾ ರಾಯಭಾರ ಕಚೇರಿಯಿಂದ ಒಂದಲ್ಲ, ಎರಡಲ್ಲ, ಮೂರು ಬಾರಿ ಹಣವನ್ನು ಪಡೆದುಕೊಂಡಿದೆ. ಇದು ಇತ್ತೀಚೆಗೆ ನಡೆದಿದೆ. ಈ ನಿಧಿಯನ್ನು ಏಕೆ ಸ್ವೀಕರಿಸಲಾಗಿದೆ? ಏನು ಕಾರಣ? ಚೀನಾದ ಬಗ್ಗೆ ಭಾರತ ಸರ್ಕಾರ ಪದೇ ಪದೇ ಮೌನ ವಹಿಸಲು ಕಾರಣವೇನು?", ಎಂದು ಖೇರಾ ಪ್ರಶ್ನಿಸಿದರು.
"ಇಂಡಿಯಾ ಫೌಂಡೇಶನ್ ಅದರೊಂದಿಗೆ ಸಂಘದಿಂದ ಸಾಕಷ್ಟು ಜನರನ್ನು ಹೊಂದಿದೆ. ಫೌಂಡೇಶನ್ ಏಕೆ ಆಗಾಗ್ಗೆ ಚೀನಾಕ್ಕೆ ಭೇಟಿ ನೀಡುತ್ತದೆ? ಚೀನಾದೊಂದಿಗೆ ಅದು ಯಾವ ಸಂಬಂಧವನ್ನು ಹೊಂದಿದೆ?", ಎಂದು ಖೇರಾ ಪ್ರಶ್ನಿಸಿದರು.

ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಕಾರ್ಯವೈಖರಿ
1990ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಬೆಂಬಲದೊಂದಿಗೆ ಬಹು-ಶಿಸ್ತಿನ ಥಿಂಕ್-ಥ್ಯಾಂಕ್ ಅನ್ನು ಸ್ಥಾಪಿಸಲಾಯಿತು. ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಈಗ ಭಾರತದ ರಾಜತಾಂತ್ರಿಕ ಮತ್ತು ವಿದೇಶಾಂಗ ನೀತಿ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ. ಅವರ ತಂದೆ ವಿದೇಶಾಂಗ ಸಚಿವರಾಗಿ ನೇಮಕಗೊಂಡ ಕೂಡಲೇ ಧ್ರುವ ಜೈಶಂಕರ್ 2019ರಲ್ಲಿ ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಅದರ ಯುಎಸ್ ಇನಿಷಿಯೇಟಿವ್ ಡೈರೆಕ್ಟರ್ ಆಗಿ ನೇಮಕಗೊಂಡರು. ಇಂಡಿಯಾ ಫೌಂಡೇಶನ್ ಇದೇ ರೀತಿಯ ನೀತಿ ಸಂಶೋಧನಾ ಕೇಂದ್ರವಾಗಿದ್ದು, ಅದು "ಭಾರತೀಯ ರಾಜಕೀಯದ ಸಮಸ್ಯೆಗಳು, ಸವಾಲುಗಳು ಮತ್ತು ಅವಕಾಶಗಳ ಮೇಲೆ ಕೇಂದ್ರೀಕರಿಸುತ್ತದೆ."

ಮೋದಿ ಮಾತಿನ ಕುರಿತು ಕಾಂಗ್ರೆಸ್ ಪ್ರಶ್ನೆ
'ನಮ್ಮ ಗಡಿಯನ್ನು ಯಾರೂ ಪ್ರವೇಶಿಸಿಲ್ಲ, ನಮ್ಮ ಪ್ರದೇಶದೊಳಗೆ ಯಾರೂ ಇಲ್ಲ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಈ ಕ್ಲೀನ್ ಚಿಟ್ನಿಂದಾಗಿ ನಮ್ಮ ಮೌಲ್ಯ ಕುಸಿದಿದೆ,'' ಎಂದು ಜೈರಾಮ್ ರಮೇಶ್ ಆರೋಪಿಸಿದರು. ಇದರ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು. ಈ ಬಗ್ಗೆ ಪ್ರಧಾನಿ ಉತ್ತರ ನೀಡಬೇಕು, ಪ್ರತಿಪಕ್ಷಗಳೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆ ನಡೆಯಬೇಕು. ಇದಕ್ಕೆ ಉತ್ತರವನ್ನು ಪ್ರಧಾನಿ ನೀಡಬೇಕೇ ಹೊರತು ರಕ್ಷಣಾ ಸಚಿವರು ಅಥವಾ ವಿದೇಶಾಂಗ ಸಚಿವರಲ್ಲ. ಹಲವು ಮಾಜಿ ಪ್ರಧಾನಿಗಳು ಸಂಸತ್ತಿನಲ್ಲಿ ಉತ್ತರ ನೀಡಿದ್ದಾರೆ. ಆದರೆ ಈ ಚರ್ಚೆಯಿಂದ ಓಡಿ ಹೋಗುವ ಮೊದಲ ಪ್ರಧಾನಿ ಮೋದಿ, ಚೀನಾ ಎಂಬ ಪದವನ್ನೇ ಹೇಳುವುದಿಲ್ಲ ಎಂದು ಜೈರಾಮ್ ರಮೇಶ್ ಹೇಳಿದರು.

ಚೀನಾದಿಂದ ಬಿಜೆಪಿ ನಾಯಕರ ಕಂಪನಿಗಳಿಗೆ ಕಾಸು
ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾದೊಂದಿಗೆ ತರಬೇತಿಗಾಗಿ ಬಿಜೆಪಿ ನಾಯಕರು ಈ ಹಿಂದೆ ಚೀನಾಕ್ಕೆ ಪ್ರಯಾಣಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಹೇಳಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಂಬಂಧ ಹೊಂದಿರುವ ವಿವೇಕಾನಂದ ಇಂಟರ್ನ್ಯಾಶನಲ್ ಫೌಂಡೇಶನ್ನಂತಹ ಸಂಸ್ಥೆಗಳು ಚೀನಾದೊಂದಿಗೆ ಯಾವ ಸಂಬಂಧವನ್ನು ಹೊಂದಿವೆ ಎಂದು ಅವರು ಪ್ರಶ್ನಿಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಪುತ್ರನ ಒಂದು ಘಟಕದ ಮುಖ್ಯಸ್ಥರಾಗಿರುವ ಚಿಂತಕರ ಚಾವಡಿಯು ಚೀನಾ ರಾಯಭಾರ ಕಚೇರಿಯಿಂದ ಮೂರು ಬಾರಿ ದೇಣಿಗೆ ಪಡೆದಿದೆ ಎಂದು ಆರೋಪಿಸಿದರು. ಈ ಸಮಸ್ಯೆಗಳಿಂದಾಗಿ ಸರ್ಕಾರವು ಈ ವಿಷಯದಲ್ಲಿ ಮೌನವಾಗಿದೆಯೇ ಎಂದು ಕೇಳಿದರು ಮತ್ತು ಇದೆಲ್ಲವೂ "ರಹಸ್ಯ" ಎಂದು ಬಹಿರಂಗಪಡಿಸಬೇಕು ಎಂದು ಹೇಳಿದರು.
ಅದೇ ರೀತಿ ಕಾಂಗ್ರೆಸ್ ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜೀವ್ ಗಾಂಧಿ ಫೌಂಡೇಶನ್ (ಆರ್ಜಿಎಫ್)ನ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್ಸಿಆರ್ಎ) ನೋಂದಣಿಯನ್ನು ಚೀನಾ ರಾಯಭಾರ ಕಚೇರಿಯಿಂದ 1.35 ಕೋಟಿ ರೂಪಾಯಿ ಪಡೆದಿದೆ ಎಂದು ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications