ಜಮ್ಮು & ಕಾಶ್ಮೀರ ಚೀನಾದ ಭಾಗ ಎಂದು ತೋರಿಸಿದ ಟ್ವಿಟ್ಟರ್ ವಿರುದ್ಧ ಆಕ್ರೋಶ
ನವದೆಹಲಿ, ಅಕ್ಟೋಬರ್ 19: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಚೀನಾದ ಭಾಗ ಎಂದು ತೋರಿಸುವ ಮೂಲಕ ಯಡವಟ್ಟು ಮಾಡಿದ ಟ್ವಿಟ್ಟರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದು ತಾಂತ್ರಿಕ ಸಮಸ್ಯೆಯಿಂದ ಆದ ಲೋಪ ಎಂದು ಟ್ವಿಟ್ಟರ್ ಸ್ಪಷ್ಟೀಕರಣ ನೀಡಿದೆ.
ಲಡಾಖ್ ರಾಜಧಾನಿ ಲೇಹ್ನಲ್ಲಿ ಯುದ್ಧ ಸ್ಮಾರಕವೊಂದರಲ್ಲಿ ಪತ್ರಕರ್ತರೊಬ್ಬರು ನೇರ ಪ್ರಸಾರ ಆರಂಭಿಸಿದಾಗ ಆ ಪ್ರದೇಶವು ಚೀನಾದಲ್ಲಿದೆ ಎಂದು ಟ್ವಿಟ್ಟರ್ ತೋರಿಸಿತ್ತು. ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಹುತಾತ್ಮರ ಸ್ಮರಣಾರ್ಥ ಸ್ಥಾಪಿಸಲಾಗಿರುವ 'ಹಾಲ್ ಆಫ್ ಫೇಮ್' ಸ್ಮಾರಕದಲ್ಲಿ ಲೇಖಕ ಹಾಗೂ ರಾಷ್ಟ್ರೀಯ ಭದ್ರತಾ ವಿಶ್ಲೇಷಕ ನಿತಿನ್ ಗೋಖಲೆ ಟ್ವಿಟ್ಟರ್ನಲ್ಲಿ ಲೈವ್ ಪ್ರಸಾರ ನಡೆಸಿದ್ದರು. ಆ ವಿಡಿಯೋದ ಟ್ಯಾಗ್ನಲ್ಲಿ 'ಜಮ್ಮು ಮತ್ತು ಕಾಶ್ಮೀರ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ' ಎಂದು ತೋರಿಸಿದೆ.
ಕೂಡಲೇ ಇದನ್ನು ಗಮನಿಸಿದ ನಿತಿನ್ ಹಾಗೂ ಇತರೆ ಬಳಕೆದಾರರು ಟ್ವಿಟ್ಟರ್ ಸಂಸ್ಥೆ ಹಾಗೂ ಟ್ವಿಟ್ಟರ್ ಇಂಡಿಯಾವನ್ನು ಟ್ಯಾಗ್ ಮಾಡಿ ತಪ್ಪನ್ನು ತೋರಿಸಿದ್ದಾರೆ. ಈ ಘಟನೆ ಭಾರತದ ಟ್ವಿಟ್ಟರ್ ಬಳಕೆದಾರರ ಆಕ್ರೋಶಕ್ಕೆ ಕಾರಣವಾಗಿದೆ.

ಇತರೆ ಟ್ವಿಟ್ಟರ್ ಬಳಕೆದಾರರು ಇದೇ ಸಂದರ್ಭದಲ್ಲಿ ಫೋಟೊಗಳನ್ನು ಅಪ್ಲೋಡ್ ಮಾಡುವ ಹಾಗೂ ಲೈವ್ ಪ್ರಸಾರ ಮಾಡುವ ಮೂಲಕ ಲೇಹ್ ಅನ್ನು ಟ್ಯಾಗ್ ಮಾಡಲು ಪ್ರಯತ್ನಿಸಿದಾಗಲೂ ಅದು ಚೀನಾದ ಪ್ರದೇಶವೆಂದೇ ತೋರಿಸಿದೆ. ಹಾಲ್ ಆಫ್ ಫೇಮ್ ಸ್ಥಳವು ಚೀನಾದ ಭಾಗವೆಂದು ಟ್ವಿಟ್ಟರ್ ಪ್ರದರ್ಶಿಸಿದೆ.
ಇದಕ್ಕೆ ತಡವಾಗಿ ಪ್ರತಿಕ್ರಿಯೆ ನೀಡಿರುವ ಟ್ವಿಟ್ಟರ್, ಈ ಸಮಸ್ಯೆ ತಾಂತ್ರಿಕ ದೋಷದಿಂದ ಸಂಭವಿಸಿದೆ. ನಮ್ಮ ತಂಡ ಇದರ ಬಗ್ಗೆ ತನಿಖೆ ನಡೆಸುತ್ತಿದೆ. ಈ ಸಮಸ್ಯೆ ಬಗ್ಗೆ ನಮಗೆ ಭಾನುವಾರವೇ ಗೊತ್ತಾಗಿರುವುದು ಎಂದು ಹೇಳಿದೆ. ಆದರೆ ಟ್ವಿಟ್ಟರ್ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕ್ಸಿಯೋಮಿ ಫೋನ್ಗಳಲ್ಲಿ ಅರುಣಾಚಲ ಪ್ರದೇಶದ ಹವಾಮಾನ ವರದಿ ತೋರಿಸದೆ ಇರುವುದು ಅಸಮಾಧಾನಕ್ಕೆ ಕಾರಣವಾಗಿತ್ತು. ಅರುಣಾಚಲ ಪ್ರದೇಶದ ಹೆಸರನ್ನು ಕ್ಸಿಯೋಮಿ ಮೊಬೈಲ್ ಪ್ರದರ್ಶಿಸುತ್ತಿರಲಿಲ್ಲ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications