ದಾಲಿಶ್ ಅಲಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಆಕ್ರೋಶ, ಎಚ್ಚರಿಕೆ ಕೊಟ್ಟ ಸ್ಪೀಕರ್
ಗುರುವಾರ ಸಂಸತ್ತಿನಲ್ಲಿ ಸಂಸದ ದಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಮೇಶ್ ಬಿಧುರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಮೇಶ್ ಬಿಧುರಿ ಅವರಿಗೆ ಎಚ್ಚರಿಕೆ ನೀಡಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ದಾಖಲೆಗಳಿಂದ ಕೂಡ ರಮೇಶ್ ಬಿಧುರಿ ಅವರ ಹೇಳಿಕೆಗಳನ್ನು ಅಳಿಸಲಾಗಿದೆ.
"ಚಂದ್ರಯಾನದ ಯಶಸ್ಸಿನ" ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಬಿಎಸ್ಪಿ ಸಂಸದ ದಾನಿಶ್ ಅಲಿ ವಿರುದ್ಧ ರಮೇಶ್ ಬಿಧುರಿ ಅವರು ಬಳಸಿದ ಆಕ್ಷೇಪಾರ್ಹ ಪದಗಳ ಬಗ್ಗೆ ಬಿರ್ಲಾ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾನಿಶ್ ಅಲಿ ಅವರ ಬಗ್ಗೆ ಭಯೋತ್ಪಾದಕ, ಆತಂಕವಾದಿ ಎಂದು ಕರೆದಿದ್ದರು.

ಇಂತಹ ವರ್ತನೆಯನ್ನು ಪುನರಾವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಬಿಧುರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೀಡಿಯೋವೊಂದರಲ್ಲಿ, ರಮೇಶ್ ಬಿಧುರಿ ಅವರು ದಾನಿಶ್ ಅಲಿ ವಿರುದ್ಧ ಪದೇ ಪದೇ ನಿಂದನೆ ಮಾಡುವುದನ್ನು ಕಾಣಬಹುದು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಷಾದ
ವಿರೋಧ ಪಕ್ಷದ ನಾಯಕರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ವಾಗ್ದಾಳಿ ನಡೆಸಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಂತೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸದನದಲ್ಲಿ ವಿಷಾದ ವ್ಯಕ್ತಪಡಿಸಿದರು. "ಸದಸ್ಯರು ಮಾಡಿದ ಟೀಕೆಗಳಿಂದ ಪ್ರತಿಪಕ್ಷಗಳಿಗೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಅನೇಕ ವಿರೋಧ ಪಕ್ಷಗಳು ರಕ್ಷಣಾ ಸಚಿವರ ಕ್ಷಮೆ ಸಾಕಾಗುವುದಿಲ್ಲ, ರಮೇಶ್ ಬಿಧುರಿ ಅವರನ್ನು ಅಮಾನತುಗೊಳಿಸಬೇಕು ಎಂದು ಹೇಳಿದರು.
"ಇದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ರಾಜನಾಥ್ ಸಿಂಗ್ ಅವರ ಕ್ಷಮೆಯಾಚನೆ ಸ್ವೀಕಾರಾರ್ಹವಲ್ಲ ಮತ್ತು ಪೂರ್ಣ ಮನಸಿನಿಂದ ಕ್ಷಮೇ ಕೇಳಿಲ್ಲ. ಇದು ಸಂಸತ್ತಿಗೆ ಮಾಡಿದ ಅವಮಾನ, ಬಿಧುರಿ ಹೇಳಿಕೆ ಪ್ರತಿಯೊಬ್ಬ ಭಾರತೀಯನಿಗೂ ಅವಮಾನವಾಗಿದೆ ಅವರ ವಿರುದ್ಧ ಕಠಿಣ ಕ್ರಮ ತೆಗೆದೆಕೊಳ್ಳಬೇಕು" ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.
ಆಮ್ ಆದ್ಮಿ ಪಕ್ಷವು (ಎಎಪಿ) ವೀಡಿಯೊವನ್ನು ಹಂಚಿಕೊಂಡಿದ್ದು "ಬಿಜೆಪಿ ದೆಹಲಿ ಸಂಸದ ಇನ್ನೊಬ್ಬ ಮುಸ್ಲಿಂ ಸಂಸದರನ್ನು ಸಂಸತ್ತಿನಲ್ಲಿ ಸ್ಪೀಕರ್ ಮುಂದೆ ಈ ಮಾತುಗಳಿಂದ ಕರೆಯುತ್ತಿದ್ದಾರೆ ಇದು ಬಿಜೆಪಿಯ ಸಂಸ್ಕೃತಿಯೇ?" ಸಂಸತ್ತಿನ ಇತಿಹಾಸದಲ್ಲಿ ಇದು ಕರಾಳ ದಿನ ಎಂದು ಹೇಳಿದೆ.
ಆರ್ಜೆಡಿ ಸಂಸದ ಮನೋಜ್ ಝಾ ಅವರು ಸಂಸತ್ತಿನಲ್ಲಿ ಬಿಜೆಪಿ ಸಂಸದರು ಬಳಸಿದ ಕೋಮುವಾದದ ನಿಂದನೆ ಬೇಸರ ತಂದಿದೆ ಎಂದು ಹೇಳಿದರು. "ನನಗೆ ಬೇಸರವಾಯಿತು, ಆದರೆ ಆಶ್ಚರ್ಯವಾಗಲಿಲ್ಲ. ಇದು ಪ್ರಧಾನಿಯವರ 'ವಸುಧೈವ ಕುಟುಂಬಕಂ' ವಾಕ್ಯದ ಸತ್ಯ. ಸಂಸತ್ತಿನಲ್ಲಿ ಸಂಸದರಿಗೆ ಇಂತಹ ಪದಗಳನ್ನು ಬಳಸಿದರೆ, ಮುಸ್ಲಿಮರು, ದಲಿತರ ವಿರುದ್ಧ ಯಾವ ರೀತಿಯ ಭಾಷೆಗೆ ನ್ಯಾಯಸಮ್ಮತತೆಯನ್ನು ನೀಡಲಾಗಿದೆ ಎಂದು ನಾವು ಯೋಚಿಸಬೇಕಾಗಿದೆ. ಇಲ್ಲಿಯವರೆಗೆ, ರಮೇಶ್ ಬಿಧುರಿ ಬಗ್ಗೆ ಪ್ರಧಾನಿ ಒಂದು ಮಾತನ್ನೂ ಹೇಳಿಲ್ಲ" ಎಂದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications