ಗಂಗೆಯಲ್ಲಿ ತೇಲಿದ ನೂರಾರು ಶವಗಳು, ತನಿಖೆಗೆ ಆದೇಶ

ಲಕ್ನೋ, ಜ.14: ಗಂಗಾ ನದಿ ಸ್ವಚ್ಛಗೊಳಿಸಲು ಪತ್ಯೇಕ ಸಚಿವರನ್ನು ನೇಮಿಸಿದ ಮೋದಿ ಸರ್ಕಾರಕ್ಕೆ ಆಘಾತಕಾರಿ ಸುದ್ದಿ ಬಂದಿದೆ.

ಉತ್ತರ ಪ್ರದೇಶದ ಕಾನ್ಪುರ ಉನ್ನಾವೊ ಜಿಲ್ಲೆಗಳ ನಡುವಿನ ಪ್ರದೇಶದ ಪರಿಯಾರ್ ಬಳಿ ಗಂಗಾನದಿಯಲ್ಲಿ ಅರೆಬರೆ ಕೊಳೆತ ಸ್ಥಿತಿಯಲ್ಲಿರುವ ನೂರಕ್ಕೂ ಹೆಚ್ಚು ಮೃತ ದೇಹಗಳು ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಬುಧವಾರ ಸಫಿಯಾರ್ ಪ್ರದೇಶದಲ್ಲಿ ಬುಧವಾರ ನಗರ ಪಾಲಿಕೆಯವರು 50 ಹೆಣ ಎತ್ತಿ ಇನ್ನು ನಮ್ಮ ಕೈಲಿಯಲ್ಲಿ ಆಗುವುದಿಲ್ಲ ಎಂದಿದ್ದಾರೆ. [ದೇಣಿಗೆ ನೀಡಿ, ತೆರಿಗೆ ಲಾಭ ಪಡೆಯಿರಿ]

ಮೋಕ್ಷ ಪ್ರಾಪ್ತಿಗಾಗಿ ಈ ಮೃತ ದೇಹಗಳನ್ನು ನದಿಯ ಮಧ್ಯ ಭಾಗಕ್ಕೆ ತೆಗೆದುಕೊಂಡು ಹೋಗಿ ಮುಳುಗಿಸುವುದು ಬಹುಕಾಲದಿಂದ ನಡೆದುಕೊಂಡು ಬಂದಿದೆ. ಇಂಥ ಹೆಣಗಳೇ ಇಲ್ಲಿ ತೇಲುತ್ತಿರಬಹುದು ಎಂದು ಜಿಲ್ಲಾಡಳಿತ ಅಭಿಪ್ರಾಯಪಟ್ಟಿದೆ.

Over 100 bodies found in Ganga; probe ordered

ಅದರೆ, ನಾಗರಿಕರ ಒತ್ತಾಯದ ಮೇರೆಗೆ ಜಿಲ್ಲಾಧಿಕಾರಿ ಸೌಮ್ಯ ಅಗರವಾಲ್ ಅವರು ತನಿಖೆಗೆ ಆದೇಶಿಸಿದ್ದಾರೆ.ಕಾನ್ಪುರ-ಉನ್ನಾವೊ ಜಿಲ್ಲಾಡಳಿತಗಳು, ಮೃತ ದೇಹಗಳ ಸಾಮೂಹಿಕ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡುತ್ತಿವೆ. ಉಭಯ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ನದಿ ತೀರದಲ್ಲಿ ಬೀಡುಬಿಟ್ಟಿದ್ದಾರೆ.

ಸಂಪೂರ್ಣವಾಗಿ ಕೊಳೆತಿರುವ ಹೆಣಗಳ ಶವಪರೀಕ್ಷೆ ಸಾಧ್ಯವಿಲ್ಲದ ಕಾರಣ, ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಡಿಎನ್ ಎ ಪರೀಕ್ಷೆಗೆ ಕಳಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಗೀತಾ ಯಾದವ್ ಹೇಳಿದ್ದಾರೆ.

ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಗಂಗಾ ನದಿ ಶುದ್ಧೀಕರಣ ಯೋಜನೆ ಹಿಂದೆ ಬಿದ್ದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿತ್ತು. ಇದಕ್ಕೂ ಮುನ್ನ ಮೊದಲ ಹಂತದಲ್ಲಿ ಪವಿತ್ರ ನದಿಯ ತೀರದಲ್ಲಿರುವ 118 ನಗರ, ಪಟ್ಟಣಗಳನ್ನು ಗುರುತಿಸಲಾಗಿದ್ದು ಒಳಚರಂಡಿ ನಿರ್ಮಾಣನ ಸ್ವಚ್ಛತೆಗೆ ಆದ್ಯತೆ ಮುಂತಾದ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ನೀಲನಕ್ಷೆ ಪ್ರಕಟಿಸಿತ್ತು. [ಗಂಗಾ ಶುದ್ಧೀಕರಣ ನೀಲನಕ್ಷೆಯಲ್ಲೇನಿದೆ?] (ಪಿಟಿಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+