1,700ಕ್ಕೂ ಅಧಿಕ ವಲಸೆ ಪಕ್ಷಿಗಳ ನಿಗೂಢ ಸಾವು
ಶಿಮ್ಲಾ, ಜನವರಿ 5: ಹಿಮಾಚಲ ಪ್ರದೇಶದ ಪ್ರಸಿದ್ಧ ಪೊಂಗ್ ಡಮ್ ಪಕ್ಷಿಧಾಮದಲ್ಲಿ 1,700ಕ್ಕೂ ಅಧಿಕ ವಲಸೆ ಹಕ್ಕಿಗಳು ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದು, ಅಧಿಕಾರಿಗಳನ್ನು ತೀವ್ರ ಚಿಂತೆಗೀಡು ಮಾಡಿದೆ. ಧಮೇಟಾ ಮತ್ತು ನಗ್ರೋಟಾ ಸುರಿಯಾನ್ ಅರಣ್ಯ ವಿಭಾಗಗಳಲ್ಲಿನ ಜಗ್ಮೋಲಿ ಮತ್ತು ಗುಗ್ಲಡಾ ಪ್ರದೇಶಗಳಲ್ಲಿ ಹೆಚ್ಚಿನ ಪಕ್ಷಿಗಳು ಮೃತಪಟ್ಟಿವೆ.
ವಿವಿಧ ಭಾಗಗಳಲ್ಲಿ ಸತ್ತು ಬಿದ್ದ ಪಕ್ಷಿಗಳ 15 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಸಾವಿಗೆ ನಿಖರ ಕಾರಣ ಏನಿರಬಹುದು ಎಂದು ತಿಳಿಯುವ ಸಲುವಾಗಿ ಉತ್ತರ ಪ್ರದೇಶದ ಬರೇಲಿಯಲ್ಲಿನ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ, ಜಲಂಧರ್ನಲ್ಲಿನ ಉತ್ತರ ಪ್ರಾದೇಶಿಕ ಕಾಯಿಲೆ ಪತ್ತೆ ಪ್ರಯೋಗಾಲಯ (ಎನ್ಆರ್ಡಿಡಿಎಲ್) ಮತ್ತು ಭೋಪಾಲ್ನಲ್ಲಿರುವ ಅಧಿಕ ಭದ್ರತೆ ಪ್ರಾಣಿ ಕಾಯಿಲೆ ಪ್ರಯೋಗಾಲಯಗಳಿಗೆ (ಎಚ್ಎಸ್ಎಡಿಎಲ್) ಅವುಗಳನ್ನು ರವಾನಿಸಲಾಗಿದೆ ಎಂದು ಹಮಿರ್ಪುರದ ಉಪ ವಿಭಾಗೀಯ ವನ್ಯಜೀವಿ ಸಂರಕ್ಷಣಾಧಿಕಾರಿ ರಾಹುಲ್ ರೊಹಾನೆ ತಿಳಿಸಿದ್ದಾರೆ.
'ಇನ್ನು ಒಂದೆರಡು ದಿನಗಳಲ್ಲಿ ನಾವು ವೈರಾಣು, ಬ್ಯಾಕ್ಟೀರಿಯಾ ಮತ್ತು ರೋಗಕಾರಕಗಳ ಕುರಿತಾದ ಫಲಿತಾಂಶವನ್ನು ನಿರೀಕ್ಷಿಸಿದ್ದೇವೆ. ಅಲ್ಲಿಯವರೆಗೂ ಈ ಪಕ್ಷಿಗಳು ಹಕ್ಕಿ ಜ್ವರದಿಂದ ಮೃತಪಟ್ಟಿವೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಾಯುತ್ತಿರುವುದನ್ನು ನೋಡಿದರೆ ಹಕ್ಕಿ ಜ್ವರವೇ ಇದಕ್ಕೆ ಕಾರಣ ಎಂಬ ಶಂಕೆ ಇದೆ' ಎಂದು ಅವರು ಹೇಳಿದ್ದಾರೆ.

ಸಾವಿಗೀಡಾದ ವಲಸಿಗ ಪಕ್ಷಿಗಳ ಪೈಕಿ ಶೇ 95ರಷ್ಟು ಸೈಬೀರಿಯಾ ಮತ್ತು ಮಂಗೋಲಿಯಾದಿಂದ ಬಂದ ಬಾರ್ ಹೆಡೆಡ್ ಗೀಸ್ ಪಕ್ಷಿಗಳಾಗಿವೆ. ಪ್ರತಿ ವರ್ಷ ಈ ಅವಧಿಯಲ್ಲಿ 1.15-1.20 ಲಕ್ಷದಷ್ಟು ಪಕ್ಷಿಗಳು ಪೊಂಗ್ ಡಮ್ ಪಕ್ಷಿಧಾಮಕ್ಕೆ ವಲಸೆ ಬರುತ್ತವೆ. ನಾಲ್ಕು ತಿಂಗಳವರೆಗೆ ಇಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ.
ಮುನ್ನೆಚ್ಚರಿಕೆ ಸೃಷ್ಟಿಯಿಂದ ಪಕ್ಷಿಧಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಆದೇಶದವರೆಗೂ ಎಲ್ಲ ಪ್ರವಾಸಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications