ಆಪರೇಷನ್ ಟೆರರಿಸ್ಟ್ - 2017: ಸೈನಿಕರಿಗೆ ಗುಂಡಿಗೆ 200 ಉಗ್ರರ ಬಲಿ
ಶ್ರೀನಗರ, ನವೆಂಬರ್ 30: ಕಳೆದ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 200 ಉಗ್ರರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ ವಾಯಿದ್, "ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ, ಸಿಆರ್ ಪಿಎಫ್, ಸಿಎಪಿಎಫ್ ಮತ್ತು ಜನರ ಪ್ರಯತ್ನದಿಂದಾಗಿ 2017ರಲ್ಲಿ 200ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ," ಎಂದು ಹೇಳಿದ್ದಾರೆ.

ಬುದ್ಗಾಮ್ ಮತ್ತು ಬಾರಾಮುಲ್ಲಾದಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ ಗಳಲ್ಲಿ ಐವರು ಉಗ್ರರು ಸಾವಿಗೀಡಾದ ಬೆನ್ನಿಗೆ ವಾಯಿದ್ ಈ ಟ್ವೀಟ್ ಮಾಡಿದ್ದಾರೆ.
ಅಧಿಕೃತ ದಾಖಲೆಗಳ ಪ್ರಕಾರ 2017ರ ಜನವರಿ 1ರಿಂದ ಇಲ್ಲಿಯವರೆಗೆ 200 ಉಗ್ರರನ್ನು ಕೊಲ್ಲಲಾಗಿದೆ. ಇದು 2010ರ ನಂತರ ವರ್ಷವೊಂದರಲ್ಲಿ ಬಲಿಯಾದ ಉಗ್ರರ ಅತೀ ದೊಡ್ಡ ಸಂಖ್ಯೆಯಾಗಿದೆ.
2010ರಲ್ಲಿ 270 ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾದರೆ ನಂತರದ ದಿನಗಳಲ್ಲಿ ಈ ಸಂಖ್ಯೆ 100ಕ್ಕೆ ಇಳಿದಿತ್ತು. ಇದಾದ ಬಳಿಕ 2016ರಲ್ಲಿ 165 ಉಗ್ರರು ಹತ್ಯೆಯಾಗಿದ್ದರು.
ಇದೇ ವೇಳೆ ಉಗ್ರರ ದಾಳಿಗೆ ಹೆಚ್ಚಿನ ಸಾರ್ವಜನಿಕರೂ ಈ ವರ್ಷ ಬಲಿಯಾಗಿದ್ದಾರೆ. ಕಳೆದ ವರ್ಷ 14 ಸಾರ್ವಜನಿಕರು ಉಗ್ರರ ದಾಳಿಗೆ ಬಲಿಯಾಗಿದ್ದರೆ ಈ ವರ್ಷ 54 ಜನರು ಸಾವಿಗೀಡಾಗಿದ್ದಾರೆ.
ಇನ್ನು 77 ಸೈನಿಕರೂ ಈ ವರ್ಷ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಕಳೆದ ವರ್ಷ 88 ಸೈನಿಕರು ಬಲಿಯಾಗಿದ್ದರು. ಹಾಗಾಗಿ ಈ ವರ್ಷ ಸೈನಿಕರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications