ಉತ್ತರ ಭಾರತದಲ್ಲಿ ಹಂದಿಜ್ವರಕ್ಕೆ 40 ಜನ ಬಲಿ
ನವದೆಹಲಿ, ಜ, 18: ಮರೆಯಾಗಿದ್ದ ಮಹಾಮಾರಿ ಹಂದಿ ಜ್ವರ ಮತ್ತೆ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ದೇಶಾದ್ಯಂತ ಒಟ್ಟು 250ಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಈಗಾಗಲೇ 40 ಜನರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ.
ದೆಹಲಿ, ರಾಜಸ್ಥಾನ, ಹರ್ಯಾಣದಲ್ಲಿ ರೋಗ ಆತಂಕ ಸೃಷ್ಟಿಸಿದೆ. ಆಂಧ್ರ ಪ್ರದೇಶದಲ್ಲೂ ರೋಗ ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.[ರೋಗಿಗಳಿಗೆ ಆಸ್ಪತ್ರೆ ಆವರಣದಲ್ಲೇ ಬೆಳೆದ ಸಾವಯವ ಆಹಾರ]

ರೋಗಪತ್ತೆ ಪರೀಕ್ಷೆಗಾಗಿ ಕೇಂದ್ರ ಹೆಚ್ಚುವರಿ ನಾಲ್ಕು ಲ್ಯಾಬೊರೇಟರಿ ತೆರೆದಿದೆ. ಹಂದಿ ಜ್ವರ ತಡೆಗೆ ಅಗತ್ಯವಿರುವ ಔಷಧಿಗಳನ್ನು ಎಲ್ಲೆಡೆ ಪೂರೈಸಲಾಗಿದೆ ಎಂದು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಕಾಏಕಿ ದೇಶದಲ್ಲಿ ಉಷ್ಣತೆ ತಗ್ಗಿದ್ದು ಜ್ವರ ಹರಡುವಿಕೆಗೆ ಕಾರಣವಾಗಿದೆ. ಆಸ್ತಮ, ಹೃದಯ ಸಂಬಂಧಿ ತೊಂದರೆ ಮತ್ತು ಕಿಡ್ನಿ ಸಮಸ್ಯೆ ಇರುವವರುನ್ನು ಹೆಚ್ಚಾಗಿ ಕಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಹಂದಿಜ್ವರ ಬಂದಾಗಿನ ಲಕ್ಷಣಗಳೇನು?
* ಜ್ವರ, ಕೆಮ್ಮು, ಗಂಟಲು ನೋವು, ಮೈಕೈ ನೋವು, ತಲೆ ನೋವು, ಚಳಿ, ಸುಸ್ತು
* ವಾಂತಿ-ಭೇದಿಯೂ ಆಗಬಹುದು.
* ನ್ಯುಮೋನಿಯಾ ಮತ್ತು ಶ್ವಾಸಕೋಶದ ವಿಫಲತೆಯಿಂದ ಸಾವು ಸಂಭವಿಸಬಹುದು.
ಹರಡುವುದು ಹೇಗೆ?
ಸೊಂಕಿತರು ಕೆಮ್ಮಿದ್ದಾಗ ಮತ್ತು ಸೀನಿದಾಗ ವೈರಸ್ ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ಕೆಲವು ಸಲ ವೈರಸ್ ತಗುಲಿರುವ ವಸ್ತುವನ್ನು ಮುಟ್ಟಿ ಅದೆ ಕೈಯನ್ನು ಬಾಯಿ ಅಥವ ಮೂಗಿನ ಹತ್ತಿರ ಇಟ್ಟು ಕೊಂಡರೂ ಸೋಂಕು ತಗುಲಬಹುದು. ಒಟ್ಟಡಿನಲ್ಲಿ ಇದೊಂದು ಸಾಂಕ್ರಾಮಿಕ ರೋಗ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications