ತಿಹಾರ್ ಜೈಲಿನಲ್ಲಿ ಪಿ.ಚಿದಂಬರಂಗೆ ಏನೇನೆಲ್ಲಾ ವ್ಯವಸ್ಥೆ
ನವದೆಹಲಿ, ಸೆಪ್ಟೆಂಬರ್ 05: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಅವರನ್ನು ತಿಹಾರ್ ಜೈಲಿಗೆ ಕೊಂಡೊಯ್ಯಲಾಗಿದೆ.
ಪಿ.ಚಿದಂಬರಂ ಅವರಿಗೆ ಕೆಲವು ವಿಶೇಷ ವ್ಯವಸ್ಥೆಗಳನ್ನು ತಿಹಾರ್ ಜೈಲಿನಲ್ಲಿ ಮಾಡಲಾಗಿದೆ. ಚಿದಂಬರಂ ಅವರು ತಿಹಾರ್ ಜೈಲಿನ ವಾರ್ಡ್ 9 ರ ಜೈಲು ಸಂಖ್ಯೆ 7 ರಲ್ಲಿ ಕಳೆಯಲಿದ್ದಾರೆ. ಇದೇ ವಾರ್ಡ್ನಲ್ಲಿ ಸುಮಾರು 600-700 ಸಂಖ್ಯೆಯಲ್ಲಿ ಖೈದಿಗಳಿದ್ದಾರೆ.
ಪಿ.ಚಿದಂಬರಂ ಅವರಿಗೆ ಜೆಡ್ ಸೆಕ್ಯುರಿಟಿ ಇದ್ದ ವ್ಯಕ್ತಿಯಾಗಿದ್ದ ಕಾರಣ ಹಾಗೂ ಅವರ ಆರೋಗ್ಯದ ದೃಷ್ಟಿಯಿಂದಾಗಿ ಅವರಿಗೆ ಕೆಲವು ವಿಶೇಷ ವ್ಯವಸ್ಥೆಗಳನ್ನು ನೀಡಲು ನ್ಯಾಯಾಲಯದಲ್ಲಿ ಕೇಳಲಾಗಿತ್ತು. ಅದರಂತೆ ನ್ಯಾಯಾಲಯ ಸಹ ಕೆಲವು ವಿಶೇಷ ವ್ಯವಸ್ಥೆಗಳನ್ನು ನೀಡಲು ಸಮ್ಮತಿಸಿದೆ.

ಪಿ.ಚಿದಂಬರಂ ಅವರಿಗೆ ವಿದೇಶಿ ಮಾದರಿಯ ಟಾಯ್ಲೆಟ್ ನೀಡಲಾಗಿದೆ. ಅವರಿಗೆ ವಿಶೇಷ ಕೋಣೆಯ ವ್ಯವಸ್ಥೆ ಮಾಡಲಾಗಿದೆ. ಕೋಣೆಯಲ್ಲಿ ಮಂಚವನ್ನು ಹಾಕಲಾಗಿದೆ. ಇತರ ಖೈದಿಗಳಿಗೆ ಈ ವ್ಯವಸ್ಥೆಗಳಿಲ್ಲ. ಇದರ ಜೊತೆಗೆ ಅವರಿಗೆ ವಿಶೇಷ ಭದ್ರತೆ ನೀಡಲಾಗಿದೆ. ಜೊತೆಗೆ ನಿಗದಿತ ಆರೋಗ್ಯ ತಪಾಸಣೆಯನ್ನೂ ನೀಡಲಾಗುತ್ತಿದೆ.
ಪಿ.ಚಿದಂಬರಂ ಅವರಿಗೆ ಇತರ ಖೈದಿಗಳಂತೆ ದಾಲ್-ರೋಟಿ ನೀಡಲಾಗುತ್ತದೆ, ಅವರು ಸಹ ಇತರ ಖೈದಿಗಳಂತೆ ಬೆಳಿಗಿನ ಪ್ರಾರ್ಥನೆಯಲ್ಲಿ ಭಾಗವಹಿಸಬೇಕಾಗುತ್ತದೆ. ಜೈಲು ವಿಭಾಗದ ಡಿಜಿ ಸಂದೀಪ್ ಘೋಯಲ್ ಮಾತನಾಡಿ, ಚಿದಂಬರಂ ಅವರನ್ನೂ ಸಹ ಇತರೆ ಖೈದಿಗಳಂತೆಯೇ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.
ಸಿಬಿಐ ವಿಶೇಷ ಕೋರ್ಟ್ ಇಂದು ಪಿ.ಚಿದಂಬರಂ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಸೆಪ್ಟೆಂಬರ್ 19 ರ ವರೆಗೆ ಅವರು ತಿಹಾರ್ ಜೈಲಿನಲ್ಲೇ ಕಳೆಯಬೇಕಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications