Padma Shri Awards: ಕರ್ನಾಟಕದ ವೆಂಕಪ್ಪ ಅಂಬಾಜಿ ಸೇರಿ ರಾಜ್ಯದ ಆರು ಮಂದಿಗೆ ಪದ್ಮಶ್ರೀ ಪ್ರಶಸ್ತಿ
ಗಣರಾಜ್ಯೋತ್ಸವ ಪ್ರಶಸ್ತಿಗೆ ಮುನ್ನ ಕೇಂದ್ರ ಸರ್ಕಾರ ಶನಿವಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವವರ ಹೆಸರನ್ನು ಪ್ರಕಟಿಸಿದೆ. ಕರ್ನಾಟಕದ ಮೂವರು ಸೇರಿ ಹಲವು ಸಾಧಕರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಒಲಿದಿದೆ. ಗೋವಾದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ 100 ವರ್ಷದ ಗೋವಾ ಸ್ವಾತಂತ್ರ್ಯ ಹೋರಾಟಗಾರ್ತಿ ಲಿಬಿಯಾ ಲೋಬೊ ಸರ್ದೇಸಾಯಿ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕದ ಜಾನಪದ ಗಾಯಕರಾದ ವೆಂಕಪ್ಪ ಅಂಬಾಜಿ ಅವರಿಗೂ ಪ್ರಶಸ್ತಿ ಸಿಕ್ಕಿದೆ.
ಬಾಗಲಕೋಟೆ ನಿವಾಸಿಯಾಗಿರುವ ವೆಂಕಪ್ಪ ಅಂಬಾಜಿ ಸುಗಟೇಕರ್ ಜಾನಪದ ಗಾಯಕರಾಗಿದ್ದು, 1,000 ಕ್ಕೂ ಹೆಚ್ಚು ಗೋಂಧಳಿ ಹಾಡುಗಳನ್ನು ಹಾಡಿದ್ದಾರೆ. ಸಾವಿರಾರು ಜನವರಿಗೆ ಉಚಿತವಾಗಿ ಹಾಡುಗಾರಿಕೆಯನ್ನು ಹೇಳಿಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಮನ್ ಕಿ ಬಾತ್ನಲ್ಲಿ ಶ್ಲಾಘಿಸಿದ್ದರು. ಈಗ ಅವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದುಬಂದಿದೆ.

ಕಲಬುರಗಿ ಮೂಲದ ಕ್ಯಾನ್ಸರ್ ರೋಗ ತಜ್ಞೆ ವಿಜಯಲಕ್ಷ್ಮಿ ದೇಶಮನೆ ಅವರಿಗೂ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಪ್ರಸಿದ್ಧವಾಗಿದ್ದಾರೆ. ಸ್ತನ ಕ್ಯಾನ್ಸರ್ ಕುರಿತಂತೆ ಹಲವು ಸಂಶೋಧನೆಗಳನ್ನು ನಡೆಸಿದ್ದಾರೆ. 4 ದಶಕಗಳಿಂದ ಅವರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಅವರು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ
ಅಳಿದು ಹೋಗುತ್ತಿರುವ ಜಾನಪದ ಕಲೆಯಾಗಿರುವ ತೊಗಲು ಗೊಂಬೆಯಾಟದ ಮೂಲಕವೇ ಹೆಸರು ಮಾಡಿರುವ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಭೀಮವ್ವರನ್ನು ಮೊದಲ ಮಹಿಳಾ ಗೊಂಬೆಯಾಟಗಾರ್ತಿ ಎಂದು ಗುರುತಿಸಲಾಗಿದೆ. 96 ವರ್ಷದ ಅವರು ತಮ್ಮ 14ನೇ ವರ್ಷದಲ್ಲಿ ಗೊಂಬೆಯಾಟದಲ್ಲಿ ತೊಡಗಿಸಿಕೊಂಡಿದ್ದರು.
ಕಳೆದ 70 ವರ್ಷಗಳಿಂದ ರಾಮಾಯಣ ಮತ್ತು ಮಹಾಭಾರತವನ್ನು ಗೊಂಬೆಯಾಟದ ಮೂಲಕ ಜನರಿಗೆ ತಲುಪಿಸಿದ್ದಾರೆ. ಜಪಾನ್, ಜರ್ಮನಿ, ಇಟಲಿ, ಫ್ರಾನ್ಸ್, ಮತ್ತು ಸೌದಿ ಅರೇಬಿಯಾದಲ್ಲೂ ಅವರು ಪ್ರದರ್ಶನ ನೀಡಿದ್ದಾರೆ. ತೊಗಲು ಗೊಂಬೆಯಾಟ ಕಲೆಯನ್ನು ಉಳಿಸಲು ತಮ್ಮ ಕುಟುಂಬಸ್ಥರಿಗೆ ಮತ್ತು ಆಸಕ್ತಿ ಇರುವ ಕಲಾವಿದರಿಗೆ ತರಬೇತಿ ನೀಡುತ್ತಿದ್ದಾರೆ.
ಈವರೆಗೆ ಬಿಡುಗಡೆಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ
ವೆಂಕಪ್ಪ ಅಂಬಾಜಿ ಸುಗಟೇಕರ್ (ಕರ್ನಾಟಕ)
ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ (ಕರ್ನಾಟಕ)
ವಿಜಯಲಕ್ಷ್ಮಿ ದೇಶಮನೆ (ಕರ್ನಾಟಕ)
ಎಲ್ ಹ್ಯಾಂಗ್ಥಿಂಗ್ (ನಾಗಾಲ್ಯಾಂಡ್)
ಹರಿಮನ್ ಶರ್ಮಾ (ಹಿಮಾಚಲ ಪ್ರದೇಶ)
ಜುಮ್ಡೆ ಯೊಮ್ಗಮ್ ಗಾಮ್ಲಿನ್ (ಅರುಣಾಚಲ ಪ್ರದೇಶ)
ಜೋಯ್ನಾಚರಣ್ ಬತಾರಿ (ಅಸ್ಸಾಂ)
ನರೇನ್ ಗುರುಂಗ್ (ಸಿಕ್ಕಿಂ)
ವಿಲಾಸ್ ಡಾಂಗ್ರೆ (ಮಹಾರಾಷ್ಟ್ರ)
ಶೈಖಾ ಎ ಜೆ ಅಲ್ ಸಬಾಹ್ (ಕುವೈತ್)
ನಿರ್ಮಲಾ ದೇವಿ (ಬಿಹಾರ)
ಭೀಮ್ ಸಿಂಗ್ ಭಾವೇಶ್ (ಬಿಹಾರ)
ರಾಧಾ ಬಹಿನ್ ಭಟ್ (ಉತ್ತರಾಖಂಡ)
ಜೋನಾಸ್ ಮಾಸೆಟ್ (ಬ್ರೆಜಿಲ್)
ಜಗದೀಶ್ ಜೋಶಿಲಾ (ಮಧ್ಯಪ್ರದೇಶ)
ಸುರೇಶ್ ಸೋನಿ (ಗುಜರಾತ್)
ಪಾಂಡಿ ರಾಮ್ ಮಾಂಡವಿ (ಛತ್ತೀಸ್ಗಢ)
ಲಿಬಿಯಾ ಲೋಬೋ ಸರ್ದೇಸಾಯಿ (ಗೋವಾ)
ಗೋಕುಲ್ ಚಂದ್ರ ದಾಸ್ (ಪಶ್ಚಿಮ ಬಂಗಾಳ)
ಹ್ಯೂ ಗ್ಯಾಂಟ್ಜರ್ (ಉತ್ತರಾಖಂಡ)
ಹರ್ವಿಂದರ್ ಸಿಂಗ್ (ಹರಿಯಾಣ)
ಭೇರು ಸಿಂಗ್ ಚೌಹಾಣ್ (ಮಧ್ಯಪ್ರದೇಶ)
ಪಿ ದಚ್ಚನಮೂರ್ತಿ (ಪುದುಚೇರಿ)
ಕೊಲೀನ್ ಗ್ಯಾಂಟ್ಜರ್ (ಉತ್ತರಾಖಂಡ)
ಡಾ. ನೀರ್ಜಾ ಭಟ್ಲಾ (ದೆಹಲಿ)
ಸ್ಯಾಲಿ ಹೋಳ್ಕರ್ (ಮಧ್ಯಪ್ರದೇಶ)
ಮಾರುತಿ ಭುಜಂಗರಾವ್ ಚಿಟಂಪಲ್ಲಿ (ಮಹಾರಾಷ್ಟ್ರ).
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications