ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಜಿಪ್ಲೈನ್ನಲ್ಲಿ ಸೆರೆ ಹಿಡಿದ ಪ್ರವಾಸಿಗ
ಶ್ರೀನಗರ ಏಪ್ರಿಲ್ 29: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಗರ ಮೇಲೆ ಗುಂಡಿನ ದಾಳಿ ನಡೆದು ಇಂದಿಗೆ ಬರೋಬ್ಬರಿ ಒಂದು ವಾರ. ದಾಳಿ ವೇಳೆ ಜಿಪ್ಲೈನ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗರೊಬ್ಬರು 26 ನಾಗರಿಕರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯನ್ನು ಆಕಸ್ಮಿಕವಾಗಿ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಹಮದಾಬಾದ್ನ ರಿಷಿ ಭಟ್ ಎಂಬುವವರ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ವೈರಲ್ ಆಗಿರುವ 53 ಸೆಕೆಂಡುಗಳ ವೀಡಿಯೊದಲ್ಲಿ ನೀಲಿ ಬಣ್ಣದ ಚೆಕ್ಡ್ ಶರ್ಟ್ ಧರಿಸಿದ, ಸನ್ ಗ್ಲಾಸ್ ಮತ್ತು ಹೆಲ್ಮೆಟ್ ಅನ್ನು ಸುರಕ್ಷತಾ ಸಾಧನವಾಗಿ ಧರಿಸಿರುವ ರಿಷಿ ಭಟ್ ಸೆಲ್ಫಿ ಸ್ಟಿಕ್ ಬಳಸಿ ಜಿಪ್ಲೈನ್ ಸವಾರಿಯನ್ನು ರೆಕಾರ್ಡ್ ಮಾಡುವುದನ್ನು ಕಾಣಬಹುದು. ರಿಷಿ ಭಟ್ ನಗುತ್ತಾ ಜಿಪ್ಲೈನ್ ಅನ್ನು ಎಂಜಾಯ್ ಮಾಡುತ್ತಿರುತ್ತಾರೆ. ಹಿನ್ನೆಲೆಯಲ್ಲಿ ಗುಂಡೇಟಿನ ಶಬ್ದಗಳು ಕೇಳಿಬರುತ್ತವೆ. ಕೆಳಗೆ ಇದ್ದ ಕೆಲ ಪ್ರವಾಸಿಗರು ದಿಕ್ಕಾಪಾಲಾಗಿ ಓಡುತ್ತಿರುವ ದೃಶ್ಯ ಕೂಡ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಲ್ಲದೆ ವ್ಯಕ್ಷಿಯೊಬ್ಬ ಕೆಳಗೆ ಬೀಳುವುದನ್ನು ಕಾಣಬಹುದು.

ಜಿಪ್ಲೈನ್ನಲ್ಲಿ ಸವಾರಿ ಮಾಡುತ್ತಿರುವ ರಿಷಿ ಭಟ್ಗೆ ಭಯೋತ್ಪಾದಕ ದಾಳಿಯ ಬಗ್ಗೆ ತಿಳಿದಿರುವುದಿಲ್ಲ. ಜಿಪ್ಲೈನ್ ಸವಾರಿ ಮುಗಿದು ಕೆಳಗೆ ಬಂದ ನಂತರ ಗುಂಡೇಟಿಗೆ ಪ್ರವಾಸಿಯೊಬ್ಬರು ಕೆಳಗೆ ಬೀಳುತ್ತಿರುವುದು ಕಂಡು ಗಾಬರಿಗೊಂಡಿದ್ದಾರೆ. ತಕ್ಷಣ ತಮ್ಮ ಪತ್ನಿ ಹಾಗೂ ಮಗನನ್ನು ಕರೆದುಕೊಂಡು ಓಡಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಭಟ್ ಅವರ ಧ್ವನಿ ಘಟನೆಯನ್ನು ವಿವರಿಸುವಾಗ ನಡುಗಿದೆ.
"ನಾನು ನನ್ನ ಹೆಂಡತಿ ಮತ್ತು ಮಗನನ್ನು ಕರೆದುಕೊಂಡು ಓಡಲು ಪ್ರಾರಂಭಿಸಿದೆ. ಗುಂಡಿನ ದಾಳಿಯಾಗುತ್ತಿರುವ ಸ್ಥಳದಲ್ಲಿ ಜನರು ಅಡಗಿಕೊಂಡಿರುವುದನ್ನು ನಾವು ನೋಡಿದ್ದೇವೆ, ಭಯೋತ್ಪಾದಕರನ್ನು ಸುಲಭವಾಗಿ ಗುರುತಿಸಲಾಗಲಿಲ್ಲ. ನಾವು ಅಲ್ಲಿಯೇ ಅಡಗಿಕೊಂಡೆವು. 8-10 ನಿಮಿಷಗಳ ನಂತರ ಗುಂಡು ಹಾರಿಸುವುದು ಸ್ವಲ್ಪ ನಿಂತಾಗ, ನಾವು ಮುಖ್ಯ ದ್ವಾರದ ಕಡೆಗೆ ಓಡಲು ಪ್ರಾರಂಭಿಸಿದೆವು. ಗುಂಡು ಹಾರಿಸುವುದು ಮತ್ತೆ ಪ್ರಾರಂಭವಾಯಿತು ಮತ್ತು ನಾಲ್ಕರಿಂದ ಐದು ಜನರಿಗೆ ಗುಂಡು ಹಾರಿಸಲಾಯಿತು. ನಮ್ಮ ಮುಂದೆ ಸುಮಾರು 15-16 ಪ್ರವಾಸಿಗರಿಗೆ ಗುಂಡು ಹಾರಿಸಲಾಯಿತು. ನಾವು ಗೇಟ್ ತಲುಪಿದಾಗ ಸ್ಥಳೀಯ ನಿವಾಸಿಗಳು ಈಗಾಗಲೇ ಹೊರಟು ಹೋಗಿರುವುದನ್ನು ನಾವು ನೋಡಿದ್ದೇವೆ. ಒಬ್ಬ ಗೈಡ್ ನಮಗೆ ಸ್ಥಳದಿಂದ ಹೊರಹೋಗಲು ಸಹಾಯ ಮಾಡಿದರು. ಘಟನೆ ನಡೆದ ತಳದ ಪ್ರದೇಶಗಳಲ್ಲಿ ಸೈನ್ಯವಿತ್ತು. ಮುಖ್ಯ ಸ್ಥಳದಲ್ಲಿ ಯಾವುದೇ ಸೇನಾ ಅಧಿಕಾರಿ ಇರಲಿಲ್ಲ" ಎಂದು ಅವರು ವಿವರಿಸಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ 'ಮಿನಿ ಸ್ವಿಟ್ಜರ್ಲೆಂಡ್' ಎಂಬ ಹೆಸರಿನ ಬೈಸರನ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕ ಮತ್ತು ಒಬ್ಬ ಸ್ಥಳೀಯ ವ್ಯಕ್ತಿ ಸೇರಿದಂತೆ ಇಪ್ಪತ್ತೈದು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಭಾರತೀಯ ನೌಕಾಪಡೆಯ ಅಧಿಕಾರಿ ಮತ್ತು ಗುಪ್ತಚರ ಬ್ಯೂರೋ ಸಿಬ್ಬಂದಿ ಕೂಡ ಸಾವನ್ನಪ್ಪಿದವರಲ್ಲಿ ಸೇರಿದ್ದಾರೆ.
2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಮಾರಕ ದಾಳಿ ಇದಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕ ಗುಂಪಿನ ನೆರಳು ಗುಂಪಾದ ರೆಸಿಸ್ಟೆನ್ಸ್ ಫ್ರಂಟ್ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.
ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ. 1960ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಹೀಗೆ ಹಲವಾರು ಕ್ರಮಗಳನ್ನು ಭಾರತ ತೆಗೆದುಕೊಂಡಿದೆ.
ಪ್ರತೀಕಾರವಾಗಿ ಪಾಕಿಸ್ತಾನ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದೆ. ಒಪ್ಪಂದದಡಿಯಲ್ಲಿ ಅದಕ್ಕೆ ಉದ್ದೇಶಿಸಲಾದ ನೀರನ್ನು ಬೇರೆಡೆಗೆ ತಿರುಗಿಸುವ ಯಾವುದೇ ಕ್ರಮವನ್ನು 'ಯುದ್ಧದ ಕಾಯಿದೆ' ಎಂದು ಪರಿಗಣಿಸಲಾಗುತ್ತದೆ ಎಂದು ಇಸ್ಲಾಮಾಬಾದ್ ಹೇಳಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications