Pahalgam Attack: ದೇಶದಲ್ಲಿ ಈ ಕಾರ್ಮಿಕರ ರಜೆ ರದ್ದು
Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ದೇಶದ ಗಡಿ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ದೇಶಾದ್ಯಂತ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ದೇಶಾದ್ಯಂತ 12 ಶಸ್ತ್ರಾಸ್ತ್ರ ಕಾರ್ಖಾನೆಗಳ ಸಮೂಹವಾದ ಮುನಿಷನ್ಸ್ ಇಂಡಿಯಾ ಲಿಮಿಟೆಡ್ (ಎಂಐಎಲ್) ತನ್ನ ಹೆಚ್ಚಿನ ಸ್ಥಾವರಗಳಲ್ಲಿನ ಉದ್ಯೋಗಿಗಳ ದೀರ್ಘ ರಜೆಗಳನ್ನು ರದ್ದುಗೊಳಿಸಿದೆ. ಮುಂದಿನ ಎರಡು ತಿಂಗಳವರೆಗೆ ಎರಡು ದಿನಗಳಿಗಿಂತ ಹೆಚ್ಚಿನ ರಜೆಯನ್ನು ಅನುಮತಿಸಲಾಗುವುದಿಲ್ಲ.

ಎಲ್ಲಾ ರೀತಿಯ ರಜೆಗಳನ್ನು ರದ್ದುಗೊಳಿಸಲಾಗಿದ್ದು, ಎಲ್ಲಾ ಉದ್ಯೋಗಿಗಳು ವಿಳಂಬ ಮಾಡದೆ ಕರ್ತವ್ಯಕ್ಕೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ನಿರ್ಣಾಯಕ ಅವಧಿಯಲ್ಲಿ ಎಲ್ಲಾ ಉದ್ಯೋಗಿಗಳು ತಪ್ಪದೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು ಮತ್ತು ರಾಷ್ಟ್ರೀಯ ಅವಶ್ಯಕತೆಗಳಿಗೆ ಅನುಗುಣವಾಗಿ ಅಡೆತಡೆಯಿಲ್ಲದ ಹಾಜರಾತಿ ಮತ್ತು ಕೊಡುಗೆಯನ್ನು ಖಚಿತಪಡಿಸಿಕೊಳ್ಳಬೇಕು ಅಂತಲೂ ತಿಳಿಸಲಾಗಿದೆ.
ಅತ್ಯಂತ ಅಗತ್ಯವಾದ ಸಂದರ್ಭಗಳಲ್ಲಿ ಮಾತ್ರ ವಿನಾಯಿತಿ ನೀಡಲಾಗುವುದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಜಬಲ್ಪುರದಲ್ಲಿರುವ ಆರ್ಡನೆನ್ಸ್ ಫ್ಯಾಕ್ಟರಿ ಖಮರಿಯಾನಲ್ಲಿ ಎರಡು ದಿನಗಳಿಗಿಂತ ಹೆಚ್ಚು ಕಾಲ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಮತ್ತು ಉದ್ಯೋಗಿಗಳ ರಜೆಯನ್ನು ಶುಕ್ರವಾರ ರದ್ದುಪಡಿಸಲಾಗಿದೆ. ಒಎಫ್ಕೆ ಪ್ರೊ ಅವಿನಾಶ್ ಶಂಕರ್ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ದಾಳಿ ಬಗ್ಗೆ ಮುಂಚಿತವಾಗಿ ಮಾಹಿತಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೂ ಕೆಲವು ದಿನಗಳ ಮುಂಚೆಯೇ ಗುಪ್ತಚರ ಸಂಸ್ಥೆಗಳು, ಶ್ರೀನಗರದ ಹೊರವಲಯದಲ್ಲಿರುವ ಜಬರ್ವಾನ್ ಶ್ರೇಣಿಯ ತಪ್ಪಲಿನಲ್ಲಿರುವ ಹೋಟೆಲ್ಗಳಲ್ಲಿ ತಂಗಿರುವ ಪ್ರವಾಸಿಗರನ್ನು ಗುರಿಯಾಗಿಸಿ ಸಂಭಾವ್ಯ ದಾಳಿ ಬಗ್ಗೆ ಮಾಹಿತಿ ನೀಡಿದ್ದವು ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಇಂಟೆಲ್ ಎಚ್ಚರಿಕೆ ಹಿನ್ನೆಲೆ ಈ ಪ್ರದೇಶದಾದ್ಯಂತ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಶ್ರೀನಗರದ ಉನ್ನತ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ದಚಿಗಮ್, ನಿಶಾತ್ ಮತ್ತು ಪಕ್ಕದ ಪ್ರದೇಶಗಳ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಕಳೆದ ವರ್ಷ ಅಕ್ಟೋಬರ್ನಲ್ಲಿ ಗಂಗಾಂಗೀರ್, ಸೋನಾಮಾರ್ಗ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ವೈದ್ಯರು ಸೇರಿದಂತೆ ಏಳು ಜನರು ಸಾವನ್ನಪ್ಪಿದರು. ಈ ಪ್ರದೇಶವು ಶ್ರೀನಗರದ ಮೇಲಿರುವ ಜಬರ್ವಾನ್ ಶ್ರೇಣಿಯ ಇನ್ನೊಂದು ಬದಿಯಲ್ಲಿ ಇದೆ.
ಎರಡು ವಾರಗಳ ಕಾರ್ಯಾಚರಣೆಯ ಬಳಿಕವೂ ಗುಪ್ತಚರ ಆಧಾರದ ಮೇಲೆ ಶ್ರೀನಗರದ ಹೊರವಲಯದಲ್ಲಿ ಭದ್ರತಾ ಪಡೆಗಳು ವ್ಯಾಪಕ ಶೋಧಗಳನ್ನು ನಡೆಸಿದವು. ಆದರೆ, ಈ ಪ್ರಯತ್ನಗಳು ಯಾವುದೇ ಫಲ ನೀಡಲಿಲ್ಲ. ಆದ್ದರಿಂದ ಏಪ್ರಿಲ್ 22ರಂದು ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಅಂದೇ ಉಗ್ರರು ಪಹಲ್ಗಾಮ್ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿ ತೆಗೆದುಕೊಂಡರು.
ಕಳೆದ ತಿಂಗಳ ಆರಂಭದಲ್ಲಿ ಕತ್ರಾದಿಂದ ಶ್ರೀನಗರ ಸಂಪರ್ಕಿಸುವ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡುವ ಸಮಯದಲ್ಲಿ ಭಯೋತ್ಪಾದಕರು ಇಂತಹ ನೀಚಕೃತ್ಯ ವೆಸಗಲು ಬಯಸಿದ್ದರು ಎಂಬ ಮಾಹಿತಿ ಇತ್ತು. ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಗುರಿ ಹೊಂದಿರುವ ರೈಲ್ವೆ ಸಂಪರ್ಕದ ಬಗ್ಗೆ ಪಾಕಿಸ್ತಾನ ಸಂತೋಷ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೂ, ಕತ್ರಾ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನ ಮುನ್ಸೂಚನೆಯಿಂದಾಗಿ ಈ ಹಿಂದೆ ಏಪ್ರಿಲ್ 19ಕ್ಕೆ ನಿಗದಿಯಾಗಿದ್ದ ಪ್ರಧಾನಿಯ ಭೇಟಿಯನ್ನು ಮುಂದೂಡಲಾಗಿತ್ತು. ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಗಡಿ ಹೊರಗಿನ ರಾಷ್ಟ್ರ ಮತ್ತು ಉಗ್ರರು ಮೊದಲ ರೈಲು ಸೇವೆಯ ಮೂಲಕ ಅಂತಾರಾಷ್ಟ್ರೀಯ ಗಮನ ಸೆಳೆಯಲು ಎಂದಿಗೂ ಬಯಸುವುದಿಲ್ಲ. ಆದ್ದರಿಮದ ಇಂತಹ ಬರ್ಬರ ಹತ್ಯೆಗಳೊಂದಿಗೆ ಆ ಕಾರ್ಯಕ್ರಮ ಮರೆಮಾಡಲು ಯೋಜಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಹಲ್ಗಾಮ್ನಲ್ಲಿ ಪ್ರವಾಸಿಗರೊಂದಿಗೆ ಬೆರೆತಿದ್ದ ಇಬ್ಬರು ಸ್ಥಳೀಯ ಉಗ್ರರು, ಮೊದಲ ಗುಂಡು ಹಾರಿಸಿದ ತಕ್ಷಣ ಪ್ರವಾಸಿಗರನ್ನು ಫುಡ್ ಕೋರ್ಟ್ ಸಂಕೀರ್ಣಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಪಾಕ್ನ ಇತರ ಇಬ್ಬರು ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಬಲಿ ಪಡೆದಿದ್ದಾರೆ. ಕೊಂದಿದ್ದಾರೆ. ದಾಳಿಯ ಉದ್ದೇಶವು ನಾಗರಿಕರಲ್ಲಿ ಭಯವನ್ನು ಉಂಟುಮಾಡುತ್ತಿದೆ ಮತ್ತು ಬಹುಶಃ ದೇಶದ ಇತರೆಡೆ ಕಾಶ್ಮೀರಿಗಳ ವಿರುದ್ಧ ಪ್ರತೀಕಾರದ ದಾಳಿಗೆ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications