ಭಾರತದೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ವೃದ್ಧೆ ಬಲಿ
ಪಂಜಾಬಿನ ಗುರದಾಸ್ಪುರ್ ಅಂತಾರಾಷ್ಟ್ರೀಯ ಗಡಿ ರೇಖೆ ದಾಟಿ ಒಳ ಪ್ರವೇಶಿಸಲು ಯತ್ನಿಸುತ್ತಿದ್ದ ಓರ್ವ ವೃದ್ಧೆಯನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಸೋಮವಾರ ಬೆಳಗ್ಗೆ ಗುಂಡಿಟ್ಟು ಕೊಂದು ಹಾಕಿದ್ದಾರೆ.
ಅಮೃತ್ ಸರ್, ಮೇ 15:ಮೇ 15: ಪಂಜಾಬಿನ ಗುರುದಾಸ್ಪುರ್ ಬಳಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಅಂತಾರಾಷ್ಟ್ರೀಯ ಗಡಿ ಮೂಲಕ ಅಕ್ರಮವಾಗಿ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ ವೃದ್ಧೆಯೊಬ್ಬರನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಸೋಮವಾರ ಮುಂಜಾನೆ ಕೊಂದು ಹಾಕಿದ್ದಾರೆ.
ಗಡಿಭಾಗದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಪಾಕಿಸ್ತಾನಿ ಪ್ರಜೆ ಈ ಮಹಿಳೆ(60ವರ್ಷ)ಗೆ ಅನೇಕ ಬಾರಿ ಎಚ್ಚರಿಕೆ ನೀಡಲಾಯಿತು. ಆದರೆ, ಎಚ್ಚರಿಕೆಯನ್ನು ಲೆಕ್ಕಿಸದೆ ಗಡಿ ಬೇಲಿ ದಾಟಲು ಮುಂದಾಗಿದ್ದಕ್ಕೆ ಆಕೆಯನ್ನು ಹೊಡೆದುರುಳಿಸಬೇಕಾಯಿತು ಎಂದು ಬಿಎಸ್ಎಫ್ ಹೇಳಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಇಂಥದ್ದೇ ಘಟನೆ ಸಂಭವಿಸಿತ್ತು, ಕಳೆದ ಮೂರು ತಿಂಗಳಿನಲ್ಲಿ ಈ ಭಾಗದಲ್ಲಿ ಇಬ್ಬರು ನುಸುಳುಕೋರರನ್ನು ಕೊಂದು ಹಾಕಲಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಭಾರತ-ನೇಪಾಳ ಗಡಿಯಲ್ಲಿ ಹಿಜ್ಬುಲ್ ಮುಜಾಹೀದ್ದೀನ್ ಉಗ್ರನನ್ನು ಭಾನುವಾರದದು ಸೆರೆ ಹಿಡಿಯಲಾಯಿತು. ಇದರ ಬೆನ್ನಲ್ಲೇ ಪಾಕ್ ನುಸುಳುಕೋರರ ಮೇಲೆ ತೀವ್ರ ನಿಗಾವಹಿಸಲಾಗಿದೆ.
ಕಳೆದ ಶನಿವಾರ, ಲಷ್ಕರ್ ಎ ತೊಯ್ಬಾ ಸಂಘಟನೆಯ ಐವರು ಉಗ್ರರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದರು. ಬಂಧಿತ ಉಗ್ರರು ಮೇ 7ರಂದು ಪೊಲೀಸ್ ಠಾಣೆ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications