ಪಾಕ್ ಬೆನ್ನಲ್ಲೇ ಗಡಿ ವಿವಾದ ಸೃಷ್ಟಿಸುತ್ತಿರುವ ಚೀನಾ: ರಾಜನಾಥ್ ಸಿಂಗ್
ನವದೆಹಲಿ, ಅಕ್ಟೋಬರ್.12: ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ರೀತಿ ಚೀನಾ ಕೂಡಾ ವಿವಾದ ಸೃಷ್ಟಿಸುವ ನಿಟ್ಟಿನಲ್ಲಿ ಭಾರಿ ಹುನ್ನಾರ ನಡೆಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ಅರುಣಾಚಲ ಪ್ರದೇಶ, ಲಡಾಖ್, ಸಿಕ್ಕಿಂ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಜಮ್ಮು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ಬಿಆರ್ಓ ನಿರ್ಮಿಸಿದ 44 ಸೇತುವೆಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅಡಿಗಲ್ಲು ಸ್ಥಾಪನೆಗೊಳಿಸಿ ಮಾತನಾಡಿದರು.
ಕೇಂದ್ರ ಸರ್ಕಾರವು ಗಡಿಯಲ್ಲಿ ಎದುರಾಳಿಗಳನ್ನು ನಿಯಂತ್ರಿಸುವುದಷ್ಟೇ ಅಲ್ಲದೇ ಗಡಿ ಪ್ರದೇಶಗಳ ಅಭಿವೃದ್ಧಿಗೂ ಒತ್ತು ನೀಡುತ್ತದೆ ಎಂದು ಹೇಳಿದರು. "ಉತ್ತರ ಮತ್ತು ಪೂರ್ವ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಬಗ್ಗೆ ನೀವು ಅರಿತುಕೊಳ್ಳಬೇಕು. ಕಾರ್ಯಾಚರಣೆ ನೆಪದಲ್ಲಿ ಮೊದಲು ಪಾಕಿಸ್ತಾನ ಮತ್ತು ಇದೀಗ ಚೀನಾ ರಾಷ್ಟ್ರಗಳು ವಿವಾದವನ್ನು ಸೃಷ್ಟಿಸುತ್ತಿವೆ. ನಾವು ಉಭಯ ರಾಷ್ಟ್ರಗಳೊಂದಿಗೆ 7000 ಕಿಲೋ ಮೀಟರ್ ಗಡಿರೇಖೆಯನ್ನು ಹೊಂದಿದ್ದು, ವಿವಾದ ಮುಂದುವರಿಯಲಿದೆ" ಎಂದು ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಚೀನಾ ಗಡಿಯಲ್ಲಿ ಸೇನಾ ಚಟುವಟಿಕೆ ಚುರುಕು:
ಲಡಾಖ್ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ತನ್ನ ಸೇನಾ ಚಟುವಟಿಕೆಗಳನ್ನು ಹೆಚ್ಚಿಸಿಕೊಳ್ಳುತ್ತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡಾ ಲಡಾಖ್, ಸಿಕ್ಕಿಂ, ಅರುಣಾಚಲ ಪ್ರದೇಶದ ಗಡಿ ಪ್ರದೇಶಗಳಲ್ಲಿ ಸೇನಾ ಚಟುವಟಿಕೆಗಳನ್ನು ಚುರುಕುಗೊಳಿಸಲಾಗುತ್ತಿದೆ. ಇದರ ನಡುವೆ ಸೋಮವಾರ ಉಭಯ ರಾಷ್ಟ್ರಗಳ ಸೇನಾ ಕಮಾಂಡರ್ ಹಂತದ 7ನೇ ಸಭೆಯನ್ನು ನಡೆಸಲಾಗಿತ್ತು.
ಅರುಣಾಚಲ ಪ್ರದೇಶದ ನೆಚಿಪು ಟನಲ್ 450 ಮೀಟರ್ ಉದ್ದವಿದ್ದು, ಎಲ್ಲ ಪರಿಸರಗಳಲ್ಲೂ ನೆಚಿಪು ಮಾರ್ಗದ ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 10, ಲಡಾಖ್ ನಲ್ಲಿ 8, ಹಿಮಾಚಲ ಪ್ರದೇಶದಲ್ಲಿ 2, ಪಂಜಾಬ್ ಮತ್ತು ಸಿಕ್ಕಿಂ 4, ಉತ್ತರಾಖಂಡ್ ಮತ್ತು ಅರುಣಾಚಲ ಪ್ರದೇಶದಲ್ಲಿ 8 ಸೇತುವೆಗಳಿಗೆ ಅಡಿಗಲ್ಲು ಸ್ಥಾಪಿಸಲಾಯಿತು.
ಗಡಿ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಕಳೆದ 2008 ರಿಂದ 2016ರ ಅವಧಿಯಲ್ಲಿ 3300 ರಿಂದ 4600 ಕೋಟಿ ರೂಪಾಯಿ ವೆಚ್ಚ ಮಾಡಿದ್ದು, 2020-21ನೇ ಸಾಲಿನಲ್ಲಿ 11000 ಕೋಟಿ ರೂಪಾಯಿ ನೀಡುವುದಕ್ಕೆ ಯೋಜಿಸಲಾಗಿದೆ. ಕೊವಿಡ್-19 ಸಾಂಕ್ರಾಮಿಕ ಪಿಡುಗಿನಿಂದಾಗಿ ಈ ರಸ್ತೆಗಳ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಕ್ಕೆ ನೀಡಿದ್ದ ಅನುದಾನದಲ್ಲಿ ಯಾವುದೇ ರೀತಿ ಕಡಿತಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications