ಪಾಕ್ ಮೂಲದ ಉಗ್ರ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕ್ಕೆ 'ಬ್ರಿಕ್ಸ್' ನಿರ್ಣಯ
ಕ್ಸಿಯಾಮೆನ್, ಸೆಪ್ಟೆಂಬರ್ 4: ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ದೇಶಗಳ ಸಮಾವೇಶದಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸೇರಿದಂತೆ ವಿವಿಧ ಭಯೋತ್ಪಾದನಾ ಸಂಘಟನೆಗಳ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ.
ಇದೇ ಮೊದಲಬಾರಿಗೆ ಬ್ರಿಕ್ಸ್ ಸಮಾವೇಶದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್ ಎ ತಯ್ಯಬಾ, ಜೈಷ್ ಎ ಮೊಹಮ್ಮದ್, ತೆಹ್ರಿಕ್ ಇ ತಾಲಿಬಾನ್ ಪಾಕಿಸ್ತಾನ್ ಹಾಗೂ ಕುಖ್ಯಾತ ಉಗ್ರ ಸಂಘಟನೆ ಐಸಿಸ್ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ.

ಉಗ್ರ ಸಂಘಟನೆ ರಚಿಸುವ ಮತ್ತು ಬೆಂಬಲಿಸುವವರ ಮೇಲೆ ಕ್ರಮ ಕೈಗೊಳ್ಳುವ ನಿರ್ಣಯವನ್ನೂ ಸಮಾವೇಶದಲ್ಲಿ ತೆಗೆದುಕೊಳ್ಳಲಾಗಿದೆ.
ಬ್ರಿಕ್ಸ್ ವಾಣಿಜ್ಯ ಸಮಾವೇಶಕ್ಕೂ ಮೊದಲು, ಪಾಕಿಸ್ತಾನ ವಿಚಾರವನ್ನು ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪ ಮಾಡಬಾರದು ಎಂದು ಚೀನಾ ಹೇಳಿತ್ತು. ಪಾಕಿಸ್ತಾನ ವಿಚಾರ ಪ್ರಸ್ತಾಪಿಸಲು ಇದು ಸೂಕ್ತ ವೇದಿಕೆಯಲ್ಲ ಎಂದು ಚೀನಾ ವಕ್ತಾರರು ಹೇಳಿದ್ದರು. ಆದರೆ ಇದೀಗ ಚೀನಾ ಭಾರತಕ್ಕೆ ಬೆಂಬಲ ಸೂಚಿಸಿದ್ದು, ಸಮ್ಮೇಳನದಲ್ಲಿ ಉಗ್ರ ಸಂಘಟನೆಗಳ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ.
ಉಗ್ರ ಸಂಘಟನೆಗಳಿಂದ ಅಶಾಂತಿ ಹೆಚ್ಚಾಗುತ್ತಿದೆ. ಇದು ಬ್ರಿಕ್ಸ್ ರಾಷ್ಟ್ರಗಳ ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಈ ಉಗ್ರ ಸಂಘಟನೆಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು ಎಂದು ಚೀನಾ, ಭಾರತ, ಬ್ರೆಜಿಲ್, ದಕ್ಷಿಣ ಆಫ್ರಿಕಾ ಮತ್ತು ರಷ್ಯಾದ ಅಧ್ಯಕ್ಷರು ನಿರ್ಣಯ ತೆಗೆದುಕೊಂಡಿದ್ದಾರೆ.
ಇನ್ನು 43 ಪುಟಗಳ 'ಕ್ಷಿಯಮೆನ್ ಡಿಕ್ಲರೇಷನ್' (ಕ್ಷಿಯಮೆನ್ ನಿರ್ಣಯ)ದಲ್ಲಿ ಪ್ರಮುಖವಾಗಿ ತಕ್ಷಣ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಹಿಂಸೆಗೆ ಕೊನೆ ಹಾಡಬೇಕು ಎಂಬ ತೀರ್ಮಾನಕ್ಕೆ ಬರಲಾಗಿದೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications