ಬದುಕಬೇಕು ಅಂದ್ರೆ ಭಾರತದ ಕಾಲು ಹಿಡಿಯಬೇಕು ಪಾಕಿಸ್ತಾನ!
ಭಾರತ ಈಗ ಜಗತ್ತಿಗೆ ಬಾಸ್ ಆಗುವ ಗುರಿ ಇಟ್ಟುಕೊಂಡು ಮುನ್ನುಗ್ಗುತ್ತಿದೆ ಸ್ವಾತಂತ್ರ್ಯವನ್ನ ಪಡೆದು ಕಳೆದ 70 ವರ್ಷದಲ್ಲಿ ಭಾರಿ ದೊಡ್ಡ ಬದಲಾವಣೆ ಕಂಡಿದೆ ಭಾರತ. ಅದೇ ನಮ್ಮ ಪಕ್ಕದಲ್ಲೇ ಇರುವ ಪಾಕಿಸ್ತಾನ ಮಾತ್ರ ಬುದ್ಧಿ ಕಲಿಯುತ್ತಿಲ್ಲ, ಪಾಕಿಸ್ತಾನ ಆರ್ಥಿಕವಾಗಿಯು ಹೀನಾಯ ಪರಿಸ್ಥಿತಿಗೆ ತಲುಪಿದೆ. ಹೀಗಾಗಿ ಪಾಕಿಸ್ತಾನ ಈಗ ಬದುಕಬೇಕು ಅಂದ್ರೆ ಭಾರತದ ಕಾಲು ಹಿಡಿಯಬೇಕಿದೆ, ಹಾಗಂತಾ ಈ ಮಾತು ನಾವು ಹೇಳುತ್ತಿಲ್ಲ ಬದಲಾಗಿ ಪಾಕಿಸ್ತಾನದ ಉದ್ಯಮಿಗಳೇ ಹೇಳುತ್ತಿದ್ದಾರೆ!
ಹೌದು ಪಾಕಿಸ್ತಾನದ ಆರ್ಥಿಕ ಸ್ಥಿತಿ ಸರಿ ಮಾಡಲು ಅಲ್ಲಿನ ಸರ್ಕಾರ ಪರದಾಡುತ್ತಿದೆ. ಹೀಗೆ ಪಾಕಿಸ್ತಾನದಲ್ಲಿ ಕೈಮೀರಿ ಹೋಗಿರುವ ಆರ್ಥಿಕ ವ್ಯವಸ್ಥೆ, ಪಾಕ್ನ ಜನರ ಜೀವ ಹಿಂಡುತ್ತಿದೆ. ತುತ್ತು ಅನ್ನ ಗಿಟ್ಟಿಸಿಕೊಳ್ಳಲು ಪಾಕಿಸ್ತಾನದ ಜನ ಪರದಾಡುತ್ತಿದ್ದಾರೆ. ಹೀಗಿದ್ದಾಗ ಪಾಕಿಸ್ತಾನ ತನ್ನ ವ್ಯಾಪಾರ & ವಹಿವಾಟು ಸರಿ ಮಾಡಿಕೊಳ್ಳಬೇಕಿದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇಡೀ ಪಾಕಿಸ್ತಾನವೇ ಬೀದಿಗೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದಾಗ ಪಾಕಿಸ್ತಾನದಲ್ಲಿನ ಆರ್ಥಿಕ ಪರಿಸ್ಥಿತಿ ಸರಿ ಮಾಡಲು, ಭಾರತದ ಜೊತೆ ವ್ಯಾಪಾರ ಮಾತುಕತೆ ನಡೆಸಿ ಎನ್ನುತ್ತಾ ಪಾಕ್ ಪ್ರಧಾನಿಗೆ ಅಲ್ಲಿನ ಉದ್ಯಮಿಗಳು ಈಗ ಸಲಹೆ ನೀಡಿದ್ದಾರೆ.

ಭಾರತದ ಜೊತೆಗೆ ಚರ್ಚೆ ಬೇಕೆ ಬೇಕು!
ಪಾಕಿಸ್ತಾನದ ಪ್ರಮುಖ ಉದ್ಯಮಿಗಳು ಪಾಕ್ ಪ್ರಧಾನಿ ಶಹಬಾಜ್ ಷರೀಫ್ಗೆ ನೀಡಿರುವ ಸಲಹೆ ಪ್ರಕಾರ, ರಫ್ತಿನ ಮೂಲಕ ಆರ್ಥಿಕತೆ ಮೇಲಕ್ಕೆತ್ತುವ ಶಹಬಾಜ್ ಷರೀಫ್ ಸಲಹೆ ಅಸಾಧ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಇಂಧನ ದರ ಭಾರಿ ಏರಿಕೆ ಹಾಗೂ ಗೊಂದಲದಿಂದ ಕೂಡಿದ ಸರ್ಕಾರಿ ನೀತಿ ಪರಿಣಾಮ ಈಗಿರುವ ಪರಿಸ್ಥಿತಿಯಲ್ಲಿ ರಫ್ತು ಹೆಚ್ಚು ಮಾಡುವುದು ಅಸಾಧ್ಯವಾಗಿದೆ. ಈ ಸನ್ನಿವೇಶದಲ್ಲಿ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಸುಧಾರಣೆ ಕಾಣಲು ಭಾರತದ ಜೊತೆ ಚರ್ಚೆ ನಡೆಸಬೇಕಿದೆ ಎಂಬ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಕರಾಚಿಗೆ ಭೇಟಿ ನೀಡಿದ ಷರೀಫ್
ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ಗೆ ಇತ್ತೀಚಿನ ಚುನಾವಣೆಯಲ್ಲಿ, ಮತ್ತೊಮ್ಮೆ ಗೆಲುವು ಸಿಕ್ಕಿತ್ತು. ಹೀಗೆ ಪ್ರಧಾನಿ ಪಟ್ಟ ಪಡೆದಿರುವ ಶಹಬಾಜ್ ಷರೀಫ್ಗೆ ಸಾಕಷ್ಟು ಸವಾಲು ಇದೆ. ಹೀಗಾಗಿ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಕರಾಚಿಗೆ ಭೇಟಿ ನೀಡಿದ ಪ್ರಧಾನಿ ಷರೀಫ್, ಉದ್ಯಮಿಗಳ ಜೊತೆ ಮಾತುಕತೆ ನಡೆಸಿದರು. ಇದೇ ವೇಳೆ ಭಾರತದ ಜೊತೆಯಲ್ಲಿ ಸಂಬಂಧ, ಸುಧಾರಣೆ ಮಾಡಿಕೊಳ್ಳಿ ಎಂಬ ಸಲಹೆ ನೀಡಲಾಗಿದೆ ಎಂಬ ಮಾತು ಕೇಳಿಬಂದಿದೆ. ಹೀಗೆ ಪಾಕಿಸ್ತಾನದ ಮುಂದಿನ ನಡೆ ಭಾರಿ ಕುತೂಹಲ ಕೆರಳಿಸಿದೆ.
ಒಟ್ನಲ್ಲಿ ಭಾರತ ಮುಖ್ಯ ಅನ್ನೋದು ಪಾಕಿಸ್ತಾನದ ಉದ್ಯಮಿಗಳಿಗೆ ಇದೀಗ ಅರ್ಥವಾಗುತ್ತಿದೆ. ಯಾಕಂದ್ರೆ ಇಷ್ಟು ದಿನಗಳ ಕಾಲ ಬೇರೆ ಬೇರೆ ದೇಶಗಳ ಬಳಿ ಕಾಲು ಹಿಡಿದು, ಭಾರತವನ್ನ ದೂಷಿಸುತ್ತಿದ್ದ ಪಾಕಿಸ್ತಾನದ ಪಾಡು ಹೀನಾಯವಾಗಿದೆ. ಹೀಗಾಗಿ ಈಗ ಭಾರತದ ಜೊತೆಗೆ, ಉತ್ತಮ ಸಂಬಂಧ ಬೆಸೆದರೆ ಆರ್ಥಿಕ ಸಂಕಷ್ಟದಿಂದ ಪಾರಾಗುತ್ತೇವೆ ಅನ್ನೋದು ಪಾಕಿಸ್ತಾನದ ಉದ್ಯಮಿಗಳ ಐಡಿಯಾ. ಆದರೆ ಇದು ವರ್ಕೌಟ್ ಆಗುತ್ತಾ? ಅಂತಾ ಕಾದು ನೋಡಬೇಕಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications