ಭಾರತದ ಗಡಿ ಪ್ರವೇಶಿಸಿದ ಪಾಕಿಸ್ತಾನ ಡ್ರೋನ್: ಬಿಎಸ್ಎಫ್ನಿಂದ ತಕ್ಕಪಾಠ
ಅಮೃತಸರ ನವೆಂಬರ್ 29: ಪಾಕಿಸ್ತಾನ ಡ್ರೋನ್ವೊಂದು ಭಾರತದ ಗಡಿಯನ್ನು ಪ್ರವೇಶಿಸಿದ್ದು ಅಮೃತಸರದಲ್ಲಿ ಪತ್ತೆಯಾಗಿರುವುದು ತಿಳಿದು ಬಂದಿದೆ. ಗಡಿಯಲ್ಲಿ ನಿಯೋಜಿಸಲಾದ ಗಡಿ ಭದ್ರತಾ ಪಡೆ (ಬಿಎಸ್ಎಫ್) ಇದನ್ನು ನಾಶಪಡಿಸಿದೆ. ಬಿಎಸ್ಎಫ್ "ಸೋಮವಾರ ಭಾರತ-ಪಾಕಿಸ್ತಾನದ ಗಡಿಯಲ್ಲಿ ನಿಯೋಜಿಸಲಾದ ಗಡಿ ಭದ್ರತಾ ಪಡೆ ಸಿಬ್ಬಂದಿ ಅಮೃತಸರದ ಚಹರ್ಪುರ ಬಳಿ ಶಂಕಿತ ಡ್ರೋನ್ ಅನ್ನು ಪತ್ತೆ ಮಾಡಿಡಿದ್ದು ಅದನ್ನು ಹೊಡೆದುರುಳಿಸಿದ್ದಾರೆ. ಇದರಿಂದಾಗಿ ಪಾಕ್ ಭಯೋತ್ಪಾದಕರು ಇಡೀ ಪ್ರದೇಶವನ್ನು ಸುತ್ತುವರೆದಿರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೆ ಎಚ್ಚರಿಕೆ ವಹಿಸಲು ಪೊಲೀಸರು ಮತ್ತು ಸಂಬಂಧಿತ ಸಂಸ್ಥೆಗಳಿಗೆ ಮಾಹಿತಿ ರವಾನಿಸಲಾಗಿದೆ.
ಬಿಎಸ್ಎಫ್ ತಂಡ 1 ಹೆಕ್ಸಾಕಾಪ್ಟರ್ ಅನ್ನು ಬಿಳಿ ಬಣ್ಣದ ಪಾಲಿಥಿನ್ನಲ್ಲಿನ ಅನುಮಾನಾಸ್ಪದ ವಸ್ತುಗಳೊಂದಿಗೆ ಭಾಗಶಃ ಹಾನಿಗೊಳಗಾದ ಸ್ಥಿತಿಯಲ್ಲಿ ವಶಪಡಿಸಿಕೊಂಡಿದೆ. ಚಹರ್ಪುರ ಗಡಿ ಬೇಲಿ ಬಳಿಯ ಕೃಷಿ ಹೊಲದಲ್ಲಿ ಅನುಮಾನಾಸ್ಪದವಾಗಿ ಈ ವಸ್ತು ಪತ್ತೆಯಾಗಿತ್ತು.

ವರದಿಯ ಪ್ರಕಾರ, ಗಡಿಯಲ್ಲಿ ನಿಯೋಜಿಸಲಾದ ಬಿಎಸ್ಎಫ್ ಸಿಬ್ಬಂದಿ ಅಮೃತಸರದ ಚಹರ್ಪುರದ ಬಳಿ ಪಾಕಿಸ್ತಾನದಿಂದ ಭಾರತದ ಕಡೆಗೆ ಪ್ರವೇಶಿಸುವ ಶಂಕಿತ ಡ್ರೋನ್ನ ಸದ್ದು ಕೇಳಿದೆ. ಅದರ ನಂತರ ಯೋಧರು ಗುಂಡು ಹಾರಿಸುವ ಮೂಲಕ ಶಂಕಿತ ಡ್ರೋನ್ ಅನ್ನು ತಡೆಯಲು ಪ್ರಯತ್ನಿಸಿದರು. ಈ ವೇಳೆ ಬುಲೆಟ್ ಡ್ರೋನ್ಗೆ ತಗುಲಿದೆ. ಅದು ನೆಲದ ಮೇಲೆ ಬಿದ್ದಿದೆ.
Amritsar, Punjab | Further, BSF recovered 1 Hexacopter in partial damaged condition along with suspected item in white colour polyethene attached underneath lying in a farming field on own side of border fencing near Village - Chaharpur: PRO BSF
— ANI (@ANI) November 29, 2022
ಇದಕ್ಕೆ ಕೇವಲ ಎರಡು ದಿನಗಳ ಮೊದಲು(ನವೆಂಬರ್ 26 ರಂದು) ಪಂಜಾಬ್ನ ಅಮೃತಸರದಲ್ಲಿರುವ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿತು. ಶುಕ್ರವಾರ ಸಂಜೆ 7:45 ರ ಸುಮಾರಿಗೆ ಅಮೃತಸರ ನಗರದ ನೈರುತ್ಯಕ್ಕೆ 34 ಕಿಮೀ ದೂರದಲ್ಲಿರುವ ದಾವೋಕ್ ಗ್ರಾಮದ ಬಳಿ ಬಿಎಸ್ಎಫ್ ಪಡೆಗಳು ಭಾರತದ ಭೂಪ್ರದೇಶಕ್ಕೆ ಒಳನುಗ್ಗುತ್ತಿರುವುದನ್ನು ಗಮನಿಸಿದ ಬಿಎಸ್ಎಫ್ ಸಿಬ್ಬಂದಿ ಡ್ರೋನ್ ಮೇಲೆ ಗುಂಡು ಹಾರಿಸಿದರು. ವರದಿಯ ಪ್ರಕಾರ, ಯೋಧರು ಗುಂಡು ಹಾರಿಸುವ ಮೂಲಕ ಶಂಕಿತ ಡ್ರೋನ್ ಅನ್ನು ತಡೆಯಲು ಪ್ರಯತ್ನಿಸಿದರು. ಡ್ರೋನ್ ಅನ್ನು ಹೊಡೆದುರುಳಿಸಲು ಬಿಎಸ್ಎಫ್ ತನ್ನ ಐಎನ್ಎಸ್ಎಎಸ್ ರೈಫಲ್ನಿಂದ ಆರು ಸುತ್ತು ಗುಂಡು ಹಾರಿಸಿತು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications