ಮೂವರು ಭಯೋತ್ಪಾದಕರನ್ನು ಮುಗಿಸಿದ ಭಾರತೀಯ ಸೇನೆ: ಕದನ ವಿರಾಮ ಉಲ್ಲಂಘಿಸಿ ಪಾಕ್ ಪಡೆಗಳ ಗುಂಡಿನ ದಾಳಿ- ವಿಕೋಪದತ್ತ ಪರಿಸ್ಥಿತಿ
ಬಾರಾಮುಲ್ಲಾ, ಸೆಪ್ಟೆಂಬರ್ 16: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಈ ಮೂಲಕ ಶನಿವಾರ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ.
ಎಲ್ಒಸಿ ದಾಟಲು ಮೂವರು ಭಯೋತ್ಪಾದಕರಿಗೆ ಪಾಕಿಸ್ತಾನ ಸಹಾಯ ಮಾಡಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಪಡೆಗಳು ಭಾರತೀಯ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿವೆ ಎಂದು ಸೇನೆ ಹೇಳಿದೆ.
'ಒಳನುಸುಳುವಿಕೆ ಶಂಕೆ ಬಂದ ತಕ್ಷಣವೇ ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಒಳನುಸುಳುವಿಕೆಯ ಪ್ರಯತ್ನವನ್ನು ಇಂದು ವಿಫಲಗೊಳಿಸಲಾಯಿತು. ಮೂವರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು. ಮುಂದಿನ ಅನಾಹುತಗಳನ್ನು ತಪ್ಪಿಸಲು ನಾವು ಎಚ್ಚರಿಕೆಯ ನಡೆಗಳನ್ನು ಅನುಸರಿಸುತ್ತಿದ್ದೇವೆ' ಎಂದು ಪಿರ್ ಪಂಜಾಲ್ ಬ್ರಿಗೇಡ್ನ ಕಮಾಂಡರ್ ಬ್ರಿಗೇಡಿಯರ್ ಪಿಎಂಎಸ್ ಧಿಲ್ಲೋನ್ ಹೇಳಿದ್ದಾರೆ.

ಪಾಕ್ ಸೇನೆ ಉಗ್ರರಿಗೆ ರಕ್ಷಣೆ ನೀಡಿದೆ: ಭಾರತ ಆರೋಪ
ಇಬ್ಬರು ಭಯೋತ್ಪಾದಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ. ಆದರೆ ಮೂರನೇ ಭಯೋತ್ಪಾದಕನ ದೇಹವನ್ನು ಪಡೆಯಲು ಪ್ರಯತ್ನಿಸಿದಾಗ, ಪಾಕಿಸ್ತಾನ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಭಾರತೀಯ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.
ಮೂರನೇ ಭಯೋತ್ಪಾದಕನ ದೇಹವನ್ನು ಹಿಂಪಡೆಯುವ ಯತ್ನದಲ್ಲಿ ನಾವಿದ್ದವು. ಆಗ ಪಾಕ್ ಸೇನೆ ಮಧ್ಯಪ್ರವೇಶಿಸಿ ಗುಂಡಿನ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಇದು 2021 ರಲ್ಲಿ ಒಪ್ಪಿಕೊಂಡಿರುವ ಎಲ್ಒಸಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದೂ ಭಾರತೀಯ ಸೇನೆ ಆರೋಪಿಸಿದೆ.
'ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಬಾರಾಮುಲ್ಲಾದ ಉರಿ ಸೆಕ್ಟರ್ನಲ್ಲಿ ಎಲ್ಒಸಿ ಉದ್ದಕ್ಕೂ ಇಂದು ಬೆಳಿಗ್ಗೆ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಒಳನುಸುಳಲು ಪ್ರಯತ್ನಿಸಿದ ಮೂವರು ಭಯೋತ್ಪಾದಕನ್ನು ಹತ್ಯೆ ಮಾಡಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
'ಇಬ್ಬರು ಭಯೋತ್ಪಾದಕರನ್ನು ಕೊಂದು ಹಾಕಲಾಗಿದೆ. ಅವರ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ;.ಮೂರನೇ ಭಯೋತ್ಪಾದಕನನ್ನು ಕೊಲ್ಲಲಾಯಿತು. ಆದರೆ ದೇಹವನ್ನು ಹಿಂಪಡೆಯಲು ಆಗಿಲ್ಲ. ಮಧ್ಯಪ್ರವೇಶಿಸಿರುವ ಪಾಕಿಸ್ತಾನ ಗುಂಡಿನ ದಾಳಿ ನಡೆಸುತ್ತಿದೆ. ಈಗಾಗಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ' ಎಂದು ಭಾರತೀಯ ಸೇನೆ ಹೇಳಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications