Bilawal Bhutto: ಭಾರತಕ್ಕೆ ಭೇಟಿ ನೀಡಲಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ
ನವದೆಹಲಿ, ಮೇ. 03: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (SCO) ವಿದೇಶಾಂಗ ಸಚಿವರ ಸಭೆಗಾಗಿ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೇ 4 ಮತ್ತು 5 ರಂದು ಸಭೆಯನ್ನು ನಿಗದಿಪಡಿಸಲಾಗಿದೆ. ಪಾಕಿಸ್ತಾನ, ರಷ್ಯಾ ಮತ್ತು ಚೀನಾದ ವಿದೇಶಾಂಗ ಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಾಗಿ ದೃಢಪಡಿಸಿದ್ದಾರೆ.
ಇಸ್ಲಾಮಾಬಾದ್ನಿಂದ 2011 ರ ನಂತರ ಮೊದಲ ಬಾರಿಗೆ ಪಾಕಿಸ್ತಾನದ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿಯಾಗುತ್ತಿರುವುದರಿಂದ ಈ ಬೆಳವಣಿಗೆಯು ಮಹತ್ವದ್ದಾಗಿದೆ. ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವರಾದ ಹಿನಾ ರಬ್ಬಾನಿ ಖಾರ್ ಆ ವರ್ಷ ಭಾರತಕ್ಕೆ ಭೇಟಿ ನೀಡಿದ್ದರು. ಈಗ ಸಚಿವ ಬಿಲಾವಲ್ ಬುಟ್ಟೋ ಅವರು ದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಹೊಸ ಬೆಳವಣಿಗೆಗಳ ನಡುವೆ ಈ ಭೇಟಿ ಬಂದಿದೆ. ಎರಡೂ ದೇಶಗಳು ಕನಿಷ್ಠ ಸಂವಹನ ಮಾರ್ಗಗಳನ್ನು ಹೊಂದಿವೆ. 2019 ರ ಪುಲ್ವಾಮಾ ದಾಳಿ ಮತ್ತು ಪಾಕಿಸ್ತಾನದ ಬಾಲಾಕೋಟ್ನಲ್ಲಿ ಭಾರತೀಯ ವಾಯುಪಡೆಯ ಕಾರ್ಯಾಚರಣೆಯ ನಂತರ ಎರಡು ದೇಶಗಳ ನಡುವಿನ ಸಂಬಂಧಗಳಲ್ಲಿ ಬಿರುಕು ಬಂದಿತ್ತು.
ಜಮ್ಮು ಮತ್ತು ಕಾಶ್ಮೀರದಿಂದ ಆರ್ಟಿಕಲ್ 370 ಮತ್ತು 35 ಎ ವಿಧಿಗಳನ್ನು ರದ್ದುಗೊಳಿಸುವ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಭಾರತದ ನಿರ್ಧಾರದಿಂದ ಪಾಕಿಸ್ತಾನವು ಸಂತೋಷವಾಗಿಲ್ಲ. ಡಿಸೆಂಬರ್ 2022 ರಲ್ಲಿ, ಬಿಲಾವಲ್ ಭುಟ್ಟೊ ಅವರು ನ್ಯೂಯಾರ್ಕ್ನಲ್ಲಿ ನಡೆದ ಜಿ-77 ಶೃಂಗಸಭೆಯ ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹೇಳಿಕೆ ನೀಡಿದ್ದರು.

ಸಚಿವ ಬಿಲಾವಲ್ ಬುಟ್ಟೋ ಅವರ ಈ ಹೇಳಿಕೆಗಳಿಗೆ ಭಾರತ ಸರ್ಕಾರದಿಂದ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ನೀಡಿತು. ಇದಿಂದ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಮತ್ತಷ್ಟು ಬಿರುಕು ಸೃಷ್ಟಿ ಮಾಡಿತ್ತು. ಸದ್ಯ ಆರ್ಥಿಕವಾಗಿ ದುರ್ಬಲವಾಗಿರುವ ಪಾಕಿಸ್ತಾನಕ್ಕೆ ಈ ಭೇಟಿ ನಿರ್ಣಾಯಕವಾಗಿದೆ. ಪಾಕಿಸ್ತಾನ ಪ್ರಸ್ತುತ ದೇಶೀಯ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳನ್ನು ಎದುರಿಸಲು ಹಲವು ದೇಶಗಳ ಬೆಂಬಲವನ್ನು ಬಯಸುತ್ತಿದೆ.
ಶಾಂಘೈ ಸಹಕಾರ ಸಂಘಟನೆಯ ಸಭೆಗಾಗಿ ರಷ್ಯಾ ಮತ್ತು ಚೀನಾದ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರು ಇತರ ಎಸ್ಸಿಒ ಸಹವರ್ತಿಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಇನ್ನು, ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ರಷ್ಯಾದ ಸಚಿವ ಸೆರ್ಗೆ ಲಾವ್ರೊವ್ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಶಾಂಘೈ ಸಹಕಾರ ಸಂಘಟನೆಯ ಅಧ್ಯಕ್ಷ ರಾಷ್ಟ್ರವಾಗಿ ಭಾರತವು ಜುಲೈನಲ್ಲಿ ನಿಗದಿಯಾಗಿರುವ ಎಸ್ಸಿಒ ನಾಯಕರ ಶೃಂಗಸಭೆಯ ಮೊದಲು ಹಲವಾರು ಸಭೆಗಳನ್ನು ನಡೆಸುತ್ತಿದೆ. ಕಳೆದ ವಾರ, ಭಾರತವು ಪಾಕಿಸ್ತಾನವನ್ನು ಹೊರತುಪಡಿಸಿ ಎಲ್ಲಾ ಎಸ್ಸಿಒ ಸದಸ್ಯರ ರಕ್ಷಣಾ ಮಂತ್ರಿಗಳಿಗೆ ಆತಿಥ್ಯವನ್ನು ನೀಡಿತು. ಪಾಕಿಸ್ತಾನ ರಕ್ಷಣ ಸಚಿವರು ವರ್ಚುವಲ್ ಆಗಿ ಭಾಗವಹಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications