ಪಾಕ್ ವೆಬ್ ಸೈಟ್ ಹ್ಯಾಕ್: ಭಾರತದ ಧ್ವಜ, ರಾಷ್ಟ್ರಗೀತೆ ಡಿಸ್ ಪ್ಲೇ !
ಪಾಕಿಸ್ತಾನದ ಸರ್ಕಾರಿ ವೆಬ್ ಸೈಟ್ ಹ್ಯಾಕ್. ವೆಬ್ ಸೈಟ್ ಗೆ ಭೇಟಿ ನೀಡಿದರೆ, ಭಾರತದ ಧ್ವಜ, ರಾಷ್ಟ್ರಗೀತೆ ಡಿಸ್ ಪ್ಲೇ. ಇದರ ಜತೆಗೆ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಶುಭಾಷಯ ಸಂದೇಶವೂ ಕಾಣುತ್ತಿದೆ ಎಂದ ಮೂಲಗಳು.
ಇಸ್ಲಾಮಾಬಾದ್, ಆಗಸ್ಟ್ 3: ಪಾಕಿಸ್ತಾನದ ಸರ್ಕಾರಿ ವೆಬ್ ಸೈಟ್ ಒಂದನ್ನು ಹ್ಯಾಕ್ ಮಾಡಿರುವ ಕೆಲ ವ್ಯಕ್ತಿಗಳು ಅದರ ಹೋಂ ಪೇಜ್ ನಲ್ಲಿ (ಮುಖಪುಟ) ಭಾರತದ ಬಾವುಟ ಹಾರಿಸಿದ್ದಾರೆ. ಅಲ್ಲದೆ, ವೆಬ್ ಸೈಟ್ ಗೆ ಭೇಟಿ ಕೊಡುವವರಿಗೆ ಭಾರತದ ರಾಷ್ಟ್ರಗೀತೆ ಜನಗಣ ಮೊಳಗುವಂತೆ ಮಾಡಿದ್ದಾರೆ. ಇದರ ಜತೆಯಲ್ಲೇ, ಇದೇ ತಿಂಗಳ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದೇಶವನ್ನೂ ನೀಡಲಾಗಿದೆ.
ಎಂದಿನಂತೆ ವೆಬ್ ಸೈಟ್ ಕಾರ್ಯನಿರ್ವಹಿಸುತ್ತಿತ್ತು. ಆದರೆ, ಮಧ್ಯಾಹ್ನ 2: 45ರ ಹೊತ್ತಿಗೆ, ಇದ್ದಕ್ಕಿದ್ದಂತೆ, ಆ ವೆಬ್ ಸೈಟ್ ನ ಮುಖಪುಟದಲ್ಲಿ ರಾಷ್ಟ್ರಗೀತೆ, ರಾಷ್ಟ್ರ ಧ್ವಜ ಕಾಣಲಾರಂಭಿಸಿತು ಎಂದು ಮೂಲಗಳು ತಿಳಿಸಿವೆ.
ಇಲ್ಲಿಗೆ ಸರಿಯಾಗಿ ನಾಲ್ಕು ತಿಂಗಳುಗಳ ಹಿಂದೆ, ದೆಹಲಿಯ ಇಂಡಿಯನ್ಸ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ವಾರಣಾಸಿಯ ಐಐಟಿ, ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯ ಹಾಗೂ ದೆಹಲಿ ವಿಶ್ವವಿದ್ಯಾಲಯಗಳ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಿ, ಅದರಲ್ಲಿ ಪಾಕಿಸ್ತಾನ ಬಾವುಟವನ್ನು ತೋರ್ಪಡಿಸಲಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡಿದ್ದ ಆ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಗಳು, ತಮ್ಮ ವೆಬ್ ಸೈಟ್ ಅನ್ನು ಬೇಗನೇ ಸರಿ ಮಾಡಿಸಿದ್ದರು.

ಹೆಗ್ಗಳಿಕೆ ತಿಳಿಸುವ ಪ್ರಯತ್ನ
ಇದು ಸುಮಾರು ತಿಂಗಳುಗಳಿಂದ, ಎರಡೂ ದೇಶಗಳ ನಡುವೆ ಕೆಲ ತಿಂಗಳುಗಳಿಂದ ನಡೆಯುತ್ತಿರುವ ಹ್ಯಾಕ್ ಸಮರ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೆ ಹ್ಯಾಕ್ ಮಾಡಿದಾಗಲೆಲ್ಲಾ, ತಮ್ಮ ಅಭಿಮಾನದ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ತಮ್ಮ ರಾಷ್ಟ್ರದ ಹೆಗ್ಗಳಿಕೆ, ಸಾಧನೆಗಳು, ಮಿಲಿಟರಿ ಶಕ್ತಿಗಳ ಬಗ್ಗೆ ಮಾಹಿತಿ ಹಾಕುವುದು ವಾಡಿಕೆ.

ಕಿಡಿಗೇಡಿಗಳ ಕೃತ್ಯ
ಇದಲ್ಲದೆ, ವೆಬ್ ಸೈಟ್ ನಲ್ಲಿದ್ದ ಯಾವುದೇ ಮಾಹಿತಿಯನ್ನು ಕದಿಯುವಂಥ ಕೆಲಸಗಳನ್ನು ಈವರೆಗೆ ಹ್ಯಾಕರ್ ಗಳು ಮಾಡಿಲ್ಲ. ಅದೊಂದೇ ಸಮಾಧಾನ. ಹಾಗಾಗಿ, ಇದು ದೇಶಭಕ್ತಿಯ ಗೀಳು ಹಚ್ಚಿಕೊಂಡಿರುವ ಕಿಡಿಗೇಡಿಗಳ ಕೃತ್ಯವೆನ್ನಲಡ್ಡಿಯಿಲ್ಲ ಎನ್ನುತ್ತಾರೆ ಕೆಲ ಅಧಿಕಾರಿಗಳು.

ರೈಲ್ವೇ ಇಲಾಖೆಯ ವೆಬ್ ಸೈಟ್ ಗೇ ಕನ್ನ
ಮೇಲೆ ತಿಳಿಸಿದಂತೆ, ದೇಶದ ನಾಲ್ಕು ಪ್ರಮುಖ ವಿದ್ಯಾಸಂಸ್ಥೆಗಳ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುವುದಕ್ಕೂ ಮುನ್ನ ಇಂಥದ್ದೊಂದು ಪುಟ್ಟ ಹ್ಯಾಕ್ ವಾರ್ ನಡೆದಿತ್ತು. ಪಾಕಿಸ್ತಾನದ ಹ್ಯಾಕರ್ ಗಳು ಭಾರತದ ಸರ್ಕಾರಿ ವೆಬ್ ಸೈಟ್ ಒಂದನ್ನು ಹ್ಯಾಕ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ, ಭಾರತೀಯ ಹ್ಯಾಕರ್ ಗಳು ಪಾಕಿಸ್ತಾನದ ರೈಲ್ವೇ ಇಲಾಖೆಯ ವೆಬ್ ಸೈಟ್ ಅನ್ನೇ ಹ್ಯಾಕ್ ಮಾಡಿದ್ದರು.

ಭಾರತದ ಹಿರಿಮೆ ಸಾರಿದ್ದ ಹ್ಯಾಕರ್ ಗಳು!
ಇವಿಷ್ಟೇ ಅಲ್ಲ, ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿರುವ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಅಲ್ಲಿನ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ನೀಡಿದ ಬೆನ್ನಲ್ಲೇ ಈ ರೀತಿ ಹ್ಯಾಕ್ ಮಾಡಿ, ಭಾರತದ ಹಿರಿಮೆ ಸಾರುವ ಸಂದೇಶಗಳನ್ನು ಅಲ್ಲಿ ಹಾಕಲಾಗಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications