ಪಾಕ್ ವಶದಲ್ಲಿ ಭಾರತದ 78,000 ಚ.ಕಿ.ಮೀ.ಭೂಮಿ
ನವದೆಹಲಿ, ಡಿ.3: 1948ರಿಂದ ಜಮ್ಮು- ಕಾಶ್ಮೀರದಲ್ಲಿ ಪಾಕಿಸ್ತಾನವು ಸುಮಾರು 78,000 ಚ.ಕಿ.ಮೀ. ಭಾರತೀಯ ಭೂಪ್ರದೇಶವನ್ನು ಕಾನೂನು ಬಾಹಿರವಾಗಿ ಹಾಗೂ ಬಲಾತ್ಕಾರವಾಗಿ ಅತಿಕ್ರಮಿಸಿದೆ ಎಂದು ಲೋಕಸಭೆಯಲ್ಲಿ ರಾಜ್ಯ ಸಚಿವ ಕಿರೇನ್ ರಿಜಿಜು ಮಾಹಿತಿ ನೀಡಿದ್ದಾರೆ.
1963ರ ಚೀನ-ಪಾಕಿಸ್ತಾನ ಗಡಿ ಒಪ್ಪಂದದ ವೇಳೆ ಪಾಕಿಸ್ತಾನವು ಆಕ್ರಮಿತ ಕಾಶ್ಮೀರದ 5,180 ಚ.ಕಿ.ಮೀ. ಭಾರತೀಯ ಭೂಪ್ರದೇಶವನ್ನು ಚೀನಕ್ಕೆ ಒಪ್ಪಿಸಿದೆಯೆಂದು ಗೃಹ ರಾಜ್ಯ ಸಚಿವ ಕಿರೇನ್ ರಿಜಜು ತಿಳಿಸಿದರು.
ಭಾರತ-ಚೀನಾ ಗಡಿಗೆ ಸಂಬಂಧಿಸಿ, ಉಭಯ ದೇಶಗಳ ನಡುವೆ ಸಾಮಾನ್ಯ ವಿಂಗಡನೆಯ ವಾಸ್ತವ ನಿಯಂತ್ರಣ ರೇಖೆಯಿಲ್ಲ ಎಂದು ಸದನಕ್ಕೆ ವಿವರಿಸಿದರು.

ವಾಸ್ತವ ನಿಯಂತ್ರಣ ರೇಖೆಯ ಕುರಿತಾದ ತಿಳುವಳಿಕೆಯಲ್ಲಿನ ಭಿನ್ನಾಭಿಪ್ರಾಯದಿಂದಾಗಿ ಆಗಾಗ, ಅಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ. ನಿಯಂತ್ರಣ ರೇಖೆಯ ಬಗ್ಗೆ ಸಮಾನ ತಿಳುವಳಿಕೆಗೆ ಬಂದಲ್ಲಿ ಅಂಥ ಪರಿಸ್ಥಿತಿಯನ್ನು ತಪ್ಪಿಸಬಹುದು.
ಬಾಂಗ್ಲಾದೇಶ, ಮ್ಯಾನ್ಮಾರ್ ಹಾಗೂ ಭೂತಾನ್ಗಳು ಯಾವುದೇ ಭಾರತೀಯ ಭೂಪ್ರದೇಶವನ್ನು ಕಾನೂನುಬಾಹಿರವಾಗಿ ಅತಿಕ್ರಮಿಸಿಲ್ಲ. ಆದಾಗ್ಯೂ ಭಾರತ-ಬಾಂಗ್ಲಾದೇಶ ಗಡಿಗೆ ಸಂಬಂಧಿಸಿ, ಒಂದು ದೇಶದ ಭೂಭಾಗವು ಇನ್ನೊಂದು ದೇಶದ ಜನರ ಸ್ವಾಧೀನವಿರುವ ಕೆಲವು ಪ್ರದೇಶಗಳಿವೆ. ಪಾರಂಪರಿಕವಾದ ಈ ಪ್ರದೇಶಗಳನ್ನು 'ವಿರೋಧ ಅಧಿಭೋಗಗಳು' ಎಂದು ಕರೆಯಲಾಗುತ್ತಿದೆ ಎಂದು ರಿಜಿಜು ಹೇಳಿದರು.
ಭಾರತದ ಭದ್ರತೆ ಹಾಗೂ ಪ್ರಾದೇಶಿಕ ಸಮಗ್ರತೆಯನ್ನು ಪರಿಣಾಮಕಾರಿಯಾಗಿ ರಕ್ಷಿಸಲು ಎಲ್ಲ ಕ್ರಮ ಕೈಗೊಳ್ಳುವ ಪಣವನ್ನು ಭಾರತ ತೊಟ್ಟಿದ್ದು, ಸತತ ಜಾಗ್ರತೆ ವಹಿಸುತ್ತಿದೆ.
ಭಾರತ-ಚೀನಾ ಗಡಿಗೆ ಸಂಬಂಧಿಸಿ, ನಿಯಂತ್ರಣ ರೇಖೆಯಲ್ಲಿ ಚೀನಾ ನಡೆಸುವ ಯಾವುದೇ ಉಲ್ಲಂಘನೆಯ ಬಗ್ಗೆ ಗಡಿ ಯೋಧರ ಸಭೆ, ಧ್ವಜಸಭೆ, ಚೀನಾ-ಭಾರತ ಗಡಿ ವ್ಯವಹಾರದ ಚರ್ಚೆ ಹಾಗೂ ಸಮನ್ವಯದ ಕಾರ್ಯಕಾರಿ ವ್ಯವಸ್ಥೆಯ ಸಭೆ ಗಳಲ್ಲಿ ಸರ್ಕಾರ ಪ್ರಸ್ತಾಪಿಸುತ್ತಾ ಬಂದಿದೆ ಎಂದು ತಿಳಿಸಿದರು.(ಪಿಟಿಐ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications