ಬಿಎಸ್ಎಫ್ ಪ್ರಕರಣ: ಮೋದಿ ವಿರುದ್ಧ ಪಾಕ್ ಮಾಧ್ಯಮಗಳ ಪ್ರಹಾರ
ನವದೆಹಲಿ, ಜ. 10: ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಕಾವಲು ಕಾಯುತ್ತಿರುವ ಬಿಎಸ್ ಎಫ್ ಯೋಧರಿಗೆ ಕಳಪೆ ಊಟದ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಎಂಬಾತ ಮಾಡಿದ್ದ ಆರೋಪಗಳನ್ನು ಪಾಕಿಸ್ತಾನ ಮಾಧ್ಯಮಗಳು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹಣಿಯಲು ಬಳಸಿಕೊಂಡಿವೆ.
ತನ್ನ ಟೀಕೆಗಳನ್ನು ವೀಡಿಯೊ ತುಣುಕುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ತೇಜ್ ಬಹದ್ದೂರ್ ಹಾಕಿದ್ದ. ಇದು ಇದೀಗ ದೇಶಾದ್ಯಂತ ಸುದ್ದಿ ಮಾಡಿದೆ. ಭಾರತೀಯ ಮಾಧ್ಯಮಗಳಲ್ಲಿ ಬಿಎಸ್ಎಫ್ ಯೋಧರ ಬವಣೆಗಳ ಬಗ್ಗೆ ಚರ್ಚೆ ಆರಂಭವಾಗಿದ್ದರೆ, ಅತ್ತ, ಪಾಕಿಸ್ತಾನದಲ್ಲಿ ಈ ಪ್ರಸಂಗವನ್ನು ಮೋದಿ ಸರ್ಕಾರದ ಬಗ್ಗೆ ಟೀಕಾಸ್ತ್ರ ಪ್ರಯೋಗಿಸಲು ಬಳಸಲಾಗುತ್ತಿದೆ.

ಪಾಕಿಸ್ತಾನದ ಪ್ರಮುಖ ಸುದ್ದಿ ವಾಹಿನಿಯಾದ ಜಿಯೋ ಟಿವಿ, 'ಮೋದಿ ಸರ್ಕಾರಕ್ಕೆ ಮಂಗಳಾರತಿ ಎತ್ತಿದ ಬಿಎಸ್ಎಫ್ ಯೋಧ' ಎಂಬರ್ಥದ ಹೆಡ್ ಲೈನ್ ಗಳನ್ನು ಬಳಸಿ ಇಡೀ ಸುದ್ದಿಗೆ ಸಂಕುಚಿತ ದೃಷ್ಟಿಕೋನ ನೀಡಿದೆ.
ಇದೊಂದೇ ವಾಹಿನಿಯಲ್ಲದೆ, ಪಾಕಿಸ್ತಾನದ ಇನ್ನೂ ಕೆಲವಾರು ವಾಹಿನಿಗಳು ಈ ಪ್ರಕರಣವನ್ನು ಭಾರತದ ಕಳಂಕ, ಶೇಮ್ ಇಂಡಿಯಾ ಎಂಬ ಹೆಡ್ ಲೈನ್ ಗಳೊಂದಿಗೆ ಬಿತ್ತರಿಸಿರುವುದಾಗಿ ಮೂಲಗಳು ತಿಳಿಸಿವೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications