ಕುಲಭೂಷಣ್ ಭೇಟಿ; ಹೇಳಿದಂತೆ ನಡೆದುಕೊಳ್ಳದ ಪಾಕ್
ನವದೆಹಲಿ, ಜುಲೈ 16 : ಪಾಕಿಸ್ತಾನದ ಜೈಲಿನಲ್ಲಿರುವ ಭಾರತೀಯ ನೌಕಾಪಡೆಯ ನಿವೃತ್ತ ಯೋಧ ಕುಲಭೂಷಣ್ ಜಾಧವ್ ಭೇಟಿಗೆ ಅಡೆತಡೆ ಇಲ್ಲದ ಅನುಮತಿಯನ್ನು ಪಾಕ್ ಸರ್ಕಾರ ನೀಡಿಲ್ಲ. ಅವರು ಒತ್ತಡದಲ್ಲಿದ್ದಾರೆ ಎಂದು ಹೇಳಿದೆ.
Recommended Video
ಗುರುವಾರ ಕೇಂದ್ರ ವಿದೇಶಾಂಗ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಪಾಕಿಸ್ತಾನ ಕುಲಭೂಷಣ್ ಜಾಧವ್ ಭೇಟಿಗೆ ಭಾರತದ ಕನ್ಸುಲರ್ಗೆ ಅಡೆತಡೆ ಇಲ್ಲದ ಒಪ್ಪಿಗೆಯನ್ನು ನೀಡಿಲ್ಲ. ಭೇಟಿಯ ವೇಳೆ ಪಾಕಿಸ್ತಾನದ ಅಧಿಕಾರಿಗಳು ಹತ್ತಿರಲ್ಲಿಯೇ ಇದ್ದರು.
ಕುಲಭೂಷಣ್ ಜಾಧವ್ ಒತ್ತಡದಲ್ಲಿದ್ದಾರೆ. ಕನ್ಸುಲರ್ ಭೇಟಿ ಮಾಡಿದಾಗ ಇದು ಸಾಬೀತಾಗಿದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಭೇಟಿಗೆ ಅವಕಾಶ ಮಾಡಿಕೊಟ್ಟ ವ್ಯವಸ್ಥೆ ಬಗ್ಗೆ ವಿದೇಶಾಂಗ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದೆ.

ಭಾರತದ ಕನ್ಸುಲರ್ ಮತ್ತು ಕಲಭೂಷಣ್ ಜಾಧವ್ ನಡುವಿನ ಮಾತುಕತೆಯನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ. ಯಾವುದೇ ಷರತ್ತು ಇಲ್ಲದೇ ಭೇಟಿ ಮಾಡಲು ಪಾಕಿಸ್ತಾನ ಅವಕಾಶವನ್ನು ನೀಡಿಲ್ಲ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.
ಕನ್ಸುಲರ್ ಭೇಟಿಗೆ ಪಾಕಿಸ್ತಾನ ಮಾಡಿಕೊಟ್ಟ ವ್ಯವಸ್ಥೆ ಸರಿ ಇರಲಿಲ್ಲ. ಕುಲಭೂಷಣ್ ಜಾಧವ್ ಜೊತೆಗಿದ್ದ ಅಧಿಕಾರಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಅಲ್ಲಿಂದ ತೆರಳಿದರು. ಜಾಧವ್ಗೆ ಕಾನೂನು ನೆರವು ನೀಡುವ ಕುರಿತು ಮಾತನಾಡಲು ಆಗಿಲ್ಲ.
ಭಾರತದ ಅಧಿಕಾರಿಗಳಿಗೆ 2ನೇ ಬಾರಿಗೆ ಕುಲಭೂಷಣ್ ಜಾಧವ್ ಭೇಟಿ ಮಾಡಲು ಪಾಕಿಸ್ತಾನ ಅವಕಾಶ ನೀಡಿದೆ. ಮೊದಲ ಬಾರಿಗೆ 2019ರಲ್ಲಿ ಭೇಟಿಗೆ ಅವಕಾಶ ನೀಡಲಾಗಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅವರು ಶಿಕ್ಷೆಯನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.
ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಕುಲಭೂಷಣ್ ಜಾಧವ್ ಬಂಧಿಸಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಅವರು ಪಾಕಿಸ್ತಾನದ ಜೈಲಿನಲ್ಲಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications