ಭಾರತದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ISI ಷಡ್ಯಂತ್ರ ಬಹಿರಂಗ
ಜಮ್ಮು ಕಾಶ್ಮೀರ, ಪಂಜಾಬ್ ನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪಾಕಿಸ್ತಾನದ ಐಎಸ್ಐ ಸಂಚು. ಸ್ಫೋಟಕ ಮಾಹಿತಿ ನೀಡಿದ ಭಾರತೀಯ ಗುಪ್ತಚರ ವಿಭಾಗ. ವಿಧ್ವಂಸಕ ಕೃತ್ಯ ನಡೆಸಲು ಭಾರತಕ್ಕೆ ನಾಲ್ವರು ಉಗ್ರರ ರವಾನೆ. ಇನ್ನು 15 ದಿನಗಳಲ್ಲಿ ಸ್ಫೋಟ ಮತ್ತಿತರ
ನವದೆಹಲಿ, ಜೂನ್ 10: ಜಮ್ಮು ಕಾಶ್ಮೀರ ಹಾಗೂ ಪಂಜಾಬ್ ನಲ್ಲಿ ಈ ಮುಂದಿನ 15 ದಿನಗಳಲ್ಲಿ ಭಾರೀ ಪ್ರಮಾಣದ ವಿದ್ವಂಸಕ ಕೃತ್ಯಗಳನ್ನು ನಡೆಸುವ ಪಾಕಿಸ್ತಾನದ ಐಎಸ್ಐ ಸಂಚು ನಡೆಸಿದೆ ಎಂಬ ಭಯಾನಕ ಮಾಹಿತಿಯನ್ನು ಭಾರತದ ಗುಪ್ತಚರ ಇಲಾಖೆ, ಭಾರತ ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಕೆಲ ವರದಿಗಳು ಹೇಳಿವೆ.
ವರದಿಗಳ ಪ್ರಕಾರ, ಈ ಕುಕೃತ್ಯಗಳನ್ನು ಸರಾಗವಾಗಿ ನಡೆಸಲು ನಾಲ್ವರು ಉಗ್ರರಿಗೆ ಸೂಕ್ತವಾದ ತರಬೇತಿ ನೀಡಿರುವ ಐಎಸ್ಐ, ಈಗಾಗಲೇ ಅವರನ್ನು ಭಾರತಕ್ಕೆ ಕಳುಹಿಸಿಕೊಟ್ಟಿದೆ. ಅವರು ಭಾರತದ ಪಂಜಾಬ್ ಪ್ರಾಂತ್ಯದ ಗಡಿ ಭಾಗದ ಕಡೆಯಿಂದ ಭಾರತದೊಳಕ್ಕೆ ನುಸುಳಿದ್ದಾರೆಂದು ವಿಚಾರವನ್ನೂ ಗುಪ್ತಚರ ಇಲಾಖೆ ಭಾರತ ಸರ್ಕಾರಕ್ಕೆ ತಿಳಿಸಿದೆ.

ಜಮ್ಮುವಿನ ಕತುವಾ, ಪಂಜಾಬ್ ನಲ್ಲಿ ಗುರುದಾಸ್ ಪುರ ಹಾಗೂ ಪಠಾಣ್ ಕೋಟ್ ಗಳೇ ಈ ಉಗ್ರರ ಟಾರ್ಗೆಟ್ ಆಗಿದೆಯೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಈಗಾಗಲೇ ಭಾರತಕ್ಕೆ ಬಂದಿರುವ ಉಗ್ರರಿಗೆ ಬೇಕಾದ ಅಗತ್ಯ ಶಸ್ತ್ರಾಸ್ತ್ರಗಳು, ಬಾಂಬ್ ತಯಾರಿಕೆಯ ಕಚ್ಚಾ ವಸ್ತುಗಳು ಪೂರೈಕೆಯಾಗಿಲ್ಲ. ಅವರಿನ್ನೂ ಅದರ ನಿರೀಕ್ಷೆಯಲ್ಲಿದ್ದಾರೆ. ಇದಕ್ಕಾಗಿ ಔಷಧಿಗಳನ್ನು ತಲುಪಿಸುವ ಕೊರಿಯರ್ ಸಂಸ್ಥೆಯೊಂದರ ಜತೆಗೆ ಒಪ್ಪಂದ ಮಾಡಿಕೊಂಡಿದ್ದು, ಆ ಸಂಸ್ಥೆಯೊಂದರ ಸಹಾಯದಿಂದ ಐಎಸ್ಐ, ಈ ಉಗ್ರರಿಗೆ ಬೇಕಾದ ಕಚ್ಚಾ ವಸ್ತುಗಳನ್ನು, ಬಂದೂಕು ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications