ಕಾಶ್ಮೀರದಲ್ಲಿ ಸಿಕ್ಕಿಬಿದ್ದ ಮತ್ತೊಬ್ಬ ಪಾಕ್ ಉಗ್ರ
ಬೆಂಗಳೂರು, ಆ.27 : ಒಂದೇ ತಿಂಗಳಿನಲ್ಲಿ ಎರಡನೇ ಬಾರಿಗೆ ಪಾಕಿಸ್ತಾನದ ಭಯೋತ್ಪಾದಕನೊಬ್ಬನನ್ನು ಕಾಶ್ಮೀರದಲ್ಲಿ ಸೆರೆ ಹಿಡಿಯಲಾಗಿದೆ. ಉತ್ತರ ಕಾಶ್ಮೀರದಲ್ಲಿ ಗುರುವಾರ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗದ ಸಮಯದಲ್ಲಿ ಉಗ್ರನನ್ನು ಬಂಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಾಫಿಯಾಬಾದ್ನಲ್ಲಿ ಇಂದು ನಾಲ್ವರು ಭಯೋತ್ಪಾದರು ದಾಳಿ ನಡೆಸಿದ್ದರು. ಭಾರತೀಯ ಸೇನೆ ಮೂವರನ್ನು ಪ್ರತಿದಾಳಿ ನಡೆಸಿ ಹತ್ಯೆ ಮಾಡಿದ್ದು. 22 ವರ್ಷದ ಸಜ್ಜಾದ್ ಅಹಮದ್ ಎಂಬ ಉಗ್ರನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. [ನವೀದ್ ಲಷ್ಕರ್ ಸೇರಿದ್ದು ಹೇಗೆ?]

ಇದು ಭಾರತದ ಯೋಧರ ಪಾಲಿಗೆ ಮಹತ್ವದ ಹೆಜ್ಜೆಯಾಗಿದೆ. ಆ.5ರಂದು ಉಧಾಂಪುರ್ನಲ್ಲಿ ನಡೆದ ಉಗ್ರರ ದಾಳಿಯ ಸಂರ್ಭದಲ್ಲಿ ಮೊಹಮ್ಮದ್ ನವೀದ್ನನ್ನು ಜೀವಂತವಾಗಿ ಸೆರೆಹಿಡಿಯಲಾಗಿತ್ತು. ಈಗ ಮತ್ತೊಬ್ಬ ಉಗ್ರ ಸಜ್ಜಾದ್ ಸಿಕ್ಕಿಬಿದ್ದಿದ್ದಾನೆ. [ನವೀದ್ ಗೆ ಸಹಾಯ ಮಾಡಿದ್ದು ಲಾರಿ ಚಾಲಕ]
ಬಂಧಿತ ಉಗ್ರನನ್ನು ಶ್ರೀನಗರಕ್ಕೆ ಕರೆದುಕೊಂಡು ಬರಲಾಗಿದ್ದು, ಭದ್ರತಾ ಪಡೆ ಅಧಿಕಾರಿಗಳು ಆತನ ವಿಚಾರಣೆ ನಡೆಸುತ್ತಿದ್ದಾರೆ. ಕಾಶ್ಮೀರದ ಉರಿ ಸೆಕ್ಟರ್ ಮೂಲಕ ಈ ಸಜ್ಜಾದ್ ತನ್ನ ಸಹಚರರ ಜೊತೆ ಭಾರತ ಪ್ರವೇಶಿಸಿದ್ದ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ ಹೆದ್ದಾರಿಯಲ್ಲಿ ಬಿಎಸ್ಎಫ್ ಪಡೆಯ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರ ಪೈಕಿ ನವೀದ್ನನ್ನು ಜೀವಂತವಾಗಿ ಸೆರೆಹಿಡಿಯಲಾಗಿತ್ತು. ಇಬ್ಬರು ಉಗ್ರರು ಭದ್ರತಾಪಡೆಗಳ ಗುಂಡಿಗೆ ಬಲಿಯಾಗಿದ್ದರು. ನವೀದ್ನನ್ನು ಎನ್ಐಎ ವಿಚಾರಣೆ ನಡೆಸುತ್ತಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications