ಶ್ರೀನಗರದಲ್ಲಿ ಉಗ್ರರ ದಾಳಿಗೆ ಸಿಆರ್ ಪಿಆಫ್ ಯೋಧ ಬಲಿ
ಜಮ್ಮು, ಆಗಸ್ಟ್ 15: ಶ್ರೀನಗರದಲ್ಲಿ ಉಗ್ರರ ದಾಳಿಗೆ ಸಿಆರ್ ಪಿಆಫ್ ಯೋಧನೊಬ್ಬ ಮೃತಪಟ್ಟಿದ್ದಾನೆ. ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಸಿಆರ್ ಪಿಆಫ್ ಯೋಧರು ಗಾಯಗೊಂಡಿದ್ದು, ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ.
ದೇಶದ ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಪೂಂಛ್ ಜಿಲ್ಲೆಯ ಶಾಫು ಕಂಡಿ ಪ್ರದೇಶದಲ್ಲಿ ಪಾಕ್ ಸೇನೆ ಗುಂಡು ಹಾಗೂ ಶೆಲ್ ದಾಳಿ ನಡೆಸಿದೆ. ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಸಣ್ಣ ಶಸ್ತ್ರಾಸ್ತ್ರಗಳು ಹಾಗೂ ಆಟೊಮೆಟಿಕ್ ಗಳನ್ನು ಬಳಸಿ ಪಾಕ್ ಸೇನೆ ದಾಳಿ ನಡೆಸಿದೆ. ಭಾರತೀಯ ಸೇನೆ ಯೋಧರು ಸಹ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಸೇನೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ತಿಳಿಸಿದ್ದಾರೆ.[ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ : ಮೋದಿ]

ಪಾಕಿಸ್ತಾನದ ಭಾರಿ ಶೆಲ್ಲಿಂಗ್ ಹಾಗೂ ಗುಂಡಿನ ದಾಳಿಗೆ 50 ವರ್ಷದ ಕಾಸಂ ಜಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಶೆಲ್ ತಗುಲಿದ್ದು, ಪೂಂಛ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತದ ಆರು ಹಳ್ಳಿಗಳು ಹಾಗೂ ಶಾಪೂರ್, ಕಸ್ಬಾ ಹಾಗೂ ಗಾತ್ರಿಯನ್ ನಲ್ಲಿರುವ ಗಡಿ ಔಟ್ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆಯು ದಾಳಿ ನಡೆಸಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ. ಪಾಕ್ ಸೇನೆಯ ಶೆಲ್ಲಿಂಗ್ ಹಾಗೂ ಗುಂಡಿನ ದಾಳಿ ಮುಂದುವರಿದಿದೆ. ಭಾರತ ಸೇನೆಯು ಪ್ರತಿದಾಳಿ ನಡೆಸಿದೆ.[#NationSalutesArmy ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗ್ತಿರೋದು ಯಾಕೆ?]
ಅಮರನಾಥ್ ಯಾತ್ರಿಕರ ಮೇಲೆ ದಾಳಿ:
ಮೂವರು ನಡೆಸಿದ ಗ್ರೆನೇಡ್ ದಾಳಿಗೆ ದೇವಾಲಯದ ಸಮೀಪವೇ 11 ಮಂದಿ ಅಮರನಾಥ್ ಯಾತ್ರಿಗಳು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಾಹನದಲ್ಲಿ ತಪ್ಪಿಸಿಕೊಂಡು ಹೋಗಲು ಯತ್ನಿಸುತ್ತಿದ್ದ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪ್ರತಿ ವರ್ಷ ಆಗಸ್ಟ್ 14-15ರಂದು ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸುತ್ತಿದೆ. 1990ರ ದಶಕದಿಂದಲೂ ಈ ರೀತಿ ದಾಳಿ ನಡೆಸುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications