ಪಾಕಿಸ್ತಾನದ ಮಾಜಿ ಪ್ರಧಾನಿ ಜೈಲಿನಿಂದ ರಿಲೀಸ್?
ಇಮ್ರಾನ್ ಖಾನ್ ಕ್ರಿಕೆಟ್ ಜಗತ್ತಿನಲ್ಲಿ ಮಾತ್ರ ಶತಕ ಸಿಡಿಸಿ ಮಿಂಚಿಲ್ಲ, ಬದಲಾಗಿ ಪಾಕಿಸ್ತಾನ ಪ್ರಧಾನಿ ಆಗಿ ಕೂಡ ಇಮ್ರಾನ್ ಖಾನ್ ಸದ್ದು ಮಾಡಿದ್ದರು. ಇದರ ಜೊತೆಗೆ ವಿವಾದಗಳನ್ನ ಕೂಡ ಬೆನ್ನಿಗೆ ಕಟ್ಟಿಕೊಂಡು ಇಮ್ರಾನ್ ಖಾನ್ ನೂರಾರು ಕೇಸ್ ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಹೀಗಿದ್ದಾಗ ಇದೀಗ ಇಮ್ರಾನ್ ಖಾನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ!
ಪಾಕಿಸ್ತಾನದಲ್ಲೀಗ ಎಲ್ಲವೂ ಹಾಳಾಗಿ ಹೋಗಿದ್ದು, ಅಲ್ಲಿನ ಆಡಳಿತ ವ್ಯವಸ್ಥೆ ಹಾದಿ ತಪ್ಪಿದೆ. ಹೀಗಾಗಿ ಪಾಕಿಸ್ತಾನದ ರಾಜಕಾರಣಿಗಳು ಕೂಡ ಮನಸ್ಸಿಗೆ ಬಂದಂತೆ ಆಡುತ್ತಾರೆ ಎಂಬ ಬಗ್ಗೆ ಆರೋಪ ಕೂಡ ಇದೆ. ದ್ವೇಷದ ರಾಜಕಾರಣಕ್ಕೆ ಈಗ ಪಾಕಿಸ್ತಾನ ರಾಜಧಾನಿ ಆಗಿದೆ. ಹೀಗೆ ನೂರಾರು ಕಳಂಕ ಹೊತ್ತಿರುವ ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಕೂಡ ಆರೋಪಿ ಆಗಿದ್ದು ಕಂಬಿ ಹಿಂದೆ ನರಳುತ್ತಿದ್ದಾರೆ. ಹೀಗಿದ್ದಾಗಲೇ ಇಮ್ರಾನ್ ಖಾನ್ ಅವರಿಗೆ ಬಿಗ್ ರಿಲೀಫ್ ಈಗ ಸಿಕ್ಕಿದ್ದು, ಇಮ್ರಾನ್ ಖಾನ್ ಜೈಲಿನಿಂದ ರಿಲೀಸ್ ಆಗುತ್ತಾರಾ? ಎಂಬ ಕುತೂಹಲ ಮೂಡಿದೆ.

ಧ್ವಂಸ ಪ್ರಕರಣಗಳಲ್ಲಿ ರಿಲೀಫ್!
ಅಷ್ಟಕ್ಕೂ ಇದೀಗ 2 ಧ್ವಂಸ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಪಾಕಿಸ್ತಾನ ಮಾಜಿ ಪಿಎಂ ಇಮ್ರಾನ್ ಖಾನ್, ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ ಪಾರ್ಟಿ ಲೀಡರ್ಸ್ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಇಸ್ಲಾಮಾಬಾದ್ ಜಿಲ್ಲಾ & ಸೆಷನ್ಸ್ ನ್ಯಾಯಾಲಯವು ಈ ಕೇಸ್ನ ಬಗ್ಗೆ, ಮಹತ್ವದ ತೀರ್ಪು ನೀಡಿದ್ದು ಇಮ್ರಾನ್ ಖಾನ್ ಸಹಿತವಾಗಿ ಅವರ ಪಕ್ಷದ ನಾಯಕರು ಬಚಾವ್ ಆಗಿದ್ದಾರೆ. 2022ರ ಮಾರ್ಚ್ನಲ್ಲಿ ರ್ಯಾಲಿ ನಡೆದಿತ್ತು ಈ ವೇಳೆ ನಡೆದಿದ್ದ ಧ್ವಂಸ ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಅವರಿಗೆ ಈಗ ರಿಲೀಫ್ ಸಿಕ್ಕಿದೆ. ಕರಾಚಿ ಪೊಲೀಸ್ ಠಾಣೆ ಸೇರಿ ಒಟ್ಟು 2 ಪೊಲೀಸ್ ಠಾಣೆಗಳಲ್ಲಿ ಈ ಬಗ್ಗೆ ಕೇಸ್ ರಿಜಿಸ್ಟಾರ್ ಆಗಿತ್ತು. ಹಾಗಾದ್ರೆ ಇಮ್ರಾನ್ ಖಾನ್ಗೆ ಜೈಲಿನಿಂದ ಮುಕ್ತಿ ಸಿಗುತ್ತಾ? ಮುಂದೆ ಓದಿ.
140ಕ್ಕೂ ಹೆಚ್ಚು ಕೇಸ್!
ಒಟ್ಟಾರೆ 140ಕ್ಕೂ ಹೆಚ್ಚು ಪ್ರಕರಣಗಳು ಇಮ್ರಾನ್ ಖಾನ್ ವಿರುದ್ಧ ದಾಖಲಾಗಿವೆ. ಹೀಗೆ ಯಾವ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಯಾವಾಗ ಕಂಟಕ ಎದುರಾಗುತ್ತೋ.? ಗೊತ್ತೇ ಆಗ್ತಿಲ್ಲ. ಹೀಗಿದ್ದಾಗಲೇ 2 ಕೇಸ್ನಲ್ಲಿ ಇದೀಗ ಇಮ್ರಾನ್ ಖಾನ್ಗೆ ರಿಲೀಫ್ ಸಿಕಿದ್ದು, ಜೈಲಿನಿಂದ ರಿಲೀಸ್ ಆಗ್ತಾರಾ ಅಂತಾ ಅವರ ಅಭಿಮಾನಿಗಳು ಆಸೆಯಿಂದ ಕಾಯುತ್ತಿದ್ದಾರೆ. ಆದರೆ ಇನ್ನೂ ನೂರಾರು ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಅವರಿಗೆ ರಿಲೀಫ್ ಸಿಗಬೇಕಿದೆ. ಆ ನಂತರ ಮಾತ್ರ ಇಮ್ರಾನ್ ಖಾನ್ ಜೈಲಿನಿಂದ ಹೊರಗೆ ಬರಲು ಸಾಧ್ಯ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications