ಭಾರತದ ವಿರುದ್ಧ ಸೈಬರ್ ಯುದ್ಧ ಆರಂಭಿಸಿದ ಪಾಕ್
ಬೆಂಗಳೂರು, ಆಗಸ್ಟ್ 8 : ದೇಶಕ್ಕೆ ಭಯೋತ್ಪಾದಕರನ್ನು ಕಳುಹಿಸಿ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿರುವ ಪಾಕಿಸ್ತಾನ ಭಾರತದ ವಿರುದ್ಧ ಸೈಬರ್ ಯುದ್ಧವನ್ನು ಆರಂಭಿಸಿದೆ. ವಿವಿಧ ಸರ್ಕಾರಿ ಇಲಾಖೆಗಳ ವೆಬ್ಸೈಟ್ಗಳು ಹ್ಯಾಕ್ ಆಗುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪಾಕಿಸ್ತಾನದ ಸೈಬರ್ ಆರ್ಮಿ ರಕ್ಷಣೆ ಮತ್ತು ವಿದೇಶಾಂಗ ಇಲಾಖೆಗಳ ವೆಬ್ಸೈಟ್ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ವಿವಿಧ ಸರ್ಕಾರಿ ಇಲಾಖೆಗಳ ಕಂಪ್ಯೂಟರ್ಗಳ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದೆ.

ಪಾಕಿಸ್ತಾನದ ಐಎಸ್ಐ ಭಾಗವಾಗಿರುವ ಸೈಬರ್ ಆರ್ಮಿ ಹಿಂದೆಯೂ ಅನೇಕ ಸೈಬರ್ ದಾಳಿಗಳನ್ನು ಮಾಡಿ ಮಾಹಿತಿಗಳನ್ನು ಕದಿಯುವ ಕಾರ್ಯಾಚರಣೆಯನ್ನು ಮಾಡಿದೆ. ಸುಮಾರು 500 ಜನರು ಈ ಸೈಬರ್ ಸೇನೆಯಲ್ಲಿದ್ದು, ಸರ್ಕಾರಿ ವೆಬ್ಸೈಟ್ಗೆ ಲಗ್ಗೆ ಇಡುತ್ತಾರೆ. [ನವೀದ್ ಭಾರತಕ್ಕೆ ನುಸುಳಿ ಬಂದಿದ್ದು ಎಲ್ಲಿಂದ?]
ಕೆಲವು ವರ್ಷಗಳ ಹಿಂದೆ ಇದೇ ಪಾಕಿಸ್ತಾನದ ಸೈಬರ್ ಸೇನೆ ಸಿಬಿಐ ವೆಬ್ಸೈಟ್ಅನ್ನು ಹ್ಯಾಕ್ ಮಾಡಿತ್ತು. ಕೆಲವು ದಿನಗಳ ಕಾಲ ವೆಬ್ಸೈಟ್ ಬಂದ್ ಮಾಡಲಾಗಿತ್ತು. ಈಗಲೂ ಇದೇ ತರಹದ ಸೈಬರ್ ಯುದ್ಧವನ್ನು ಪಾಕ್ ಆರಂಭಿಸಿದೆ ಎಂಬುದು ಗುಪ್ತಚರ ಇಲಾಖೆಯ ಎಚ್ಚರಿಕೆ. [ಉಡುಪಿ ಬಿಜೆಪಿ ವೆಬ್ ಸೈಟ್ ನಲ್ಲಿ ಪಾಕ್ ಗೆ ಜಿಂದಾಬಾದ್]
ಗಡಿ ಮೂಲಕ ನುಸುಳಿ ಬಂದು ದೇಶದ ಜನರ ಮೇಲೆ ಗುಂಡಿನ ದಾಳಿ ನಡೆಸುವುದು ಒಂದು ತರಹದ ಯುದ್ಧವಾದರೆ, ಇಲಾಖೆಯ ವೆಬ್ಸೈಟ್ ಹ್ಯಾಕ್ ಮಾಡಿ ಮಾಹಿತಿ ಕದಿಯುವುದು ಮತ್ತೊಂದು ರೀತಿಯ ಯುದ್ಧವಾಗಿದೆ. ಸೈಬರ್ ಸೇನೆ ಇಂತಹ ಯುದ್ಧ ಮಾಡಲು ಮುಂದಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications