ಹನೀಪ್ರೀತ್ ನ್ಯಾಯಾಂಗ ಬಂಧನ ವಿಸ್ತರಿಸಿದ ಪಂಚಕುಳ ನ್ಯಾಯಾಲಯ
ಪಂಚಕುಳ (ಹರ್ಯಾಣ), ಅಕ್ಟೋಬರ್ 24: ಅತ್ಯಾಚಾರದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಹರ್ಯಾಣದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ದತ್ತುಪುತ್ರಿ ಹನೀಪ್ರೀತ್ ನ್ಯಾಯಾಂಗ ಬಂಧನವನ್ನು ಪಂಚಕುಳ ಜಿಲ್ಲಾ ನ್ಯಾಯಾಲಯ ವಿಸ್ತರಿಸಿದೆ.
ರಾಮ್ ರಹೀಮ್ ಬಂಧನದ ನಂತರ ಹರ್ಯಾಣದಲ್ಲುಂಟಾದ ಗಲಭೆಯಿಂದ ನಲವತ್ತಕ್ಕೂ ಹೆಚ್ಚು ಜನ ಅಸುನೀಗಿದ್ದರು. ಕೋಟ್ಯಂತರ ಆಸ್ತಿ ಪಾಸ್ತಿ ನಾಶವಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಂಘಟನೆಯ ಕೆಲ ಮುಖಂಡರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ರಾಮ್ ರಹೀಮ್ ದತ್ತುಪುತ್ರಿ ಹನೀಪ್ರೀತ್ ಕೈವಾಡ ಸಹ ಈ ಗಲಭೆಯ ಹಿಂದಿದೆ ಎಂಬ ಕಾರಣಕ್ಕೆ ಅವರ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದರಾದರೂ, ಹಲವು ದಿನಗಳ ಕಾಲ ಪೊಲೀಸರ ಕಣ್ಣಿಗೆ ಮಣ್ಣೆರೆಚಿದ್ದ ಹನೀಪ್ರೀತ್ ಅಕ್ಟೋಬರ್ 3 ರಂದು ತಾವೇ ಪೊಲೀಸರಿಗೆ ಶರಣಾಗಿದ್ದರು.
ಇದೀಗ ಹನೀಪ್ರೀತ್ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 6 ವಿಸ್ತರಿಸಿ ಇಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.
More From
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications