ಹನೀಪ್ರೀತ್ ನ್ಯಾಯಾಂಗ ಬಂಧನ ವಿಸ್ತರಿಸಿದ ಪಂಚಕುಳ ನ್ಯಾಯಾಲಯ
ಪಂಚಕುಳ (ಹರ್ಯಾಣ), ಅಕ್ಟೋಬರ್ 24: ಅತ್ಯಾಚಾರದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಹರ್ಯಾಣದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ದತ್ತುಪುತ್ರಿ ಹನೀಪ್ರೀತ್ ನ್ಯಾಯಾಂಗ ಬಂಧನವನ್ನು ಪಂಚಕುಳ ಜಿಲ್ಲಾ ನ್ಯಾಯಾಲಯ ವಿಸ್ತರಿಸಿದೆ.
ಹನಿಪ್ರೀತ್ ಗೆ 6 ದಿನ ಪೊಲೀಸ್ ಕಸ್ಟಡಿ: ಪಂಚಕುಲ ನ್ಯಾಯಾಲಯ ಆದೇಶ
ರಾಮ್ ರಹೀಮ್ ಬಂಧನದ ನಂತರ ಹರ್ಯಾಣದಲ್ಲುಂಟಾದ ಗಲಭೆಯಿಂದ ನಲವತ್ತಕ್ಕೂ ಹೆಚ್ಚು ಜನ ಅಸುನೀಗಿದ್ದರು. ಕೋಟ್ಯಂತರ ಆಸ್ತಿ ಪಾಸ್ತಿ ನಾಶವಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಂಘಟನೆಯ ಕೆಲ ಮುಖಂಡರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
ರಾಮ್ ರಹೀಮ್ ದತ್ತುಪುತ್ರಿ ಹನೀಪ್ರೀತ್ ಕೈವಾಡ ಸಹ ಈ ಗಲಭೆಯ ಹಿಂದಿದೆ ಎಂಬ ಕಾರಣಕ್ಕೆ ಅವರ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದರಾದರೂ, ಹಲವು ದಿನಗಳ ಕಾಲ ಪೊಲೀಸರ ಕಣ್ಣಿಗೆ ಮಣ್ಣೆರೆಚಿದ್ದ ಹನೀಪ್ರೀತ್ ಅಕ್ಟೋಬರ್ 3 ರಂದು ತಾವೇ ಪೊಲೀಸರಿಗೆ ಶರಣಾಗಿದ್ದರು.
ಇದೀಗ ಹನೀಪ್ರೀತ್ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 6 ವಿಸ್ತರಿಸಿ ಇಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.