ವಿಚಿತ್ರ ತಿರುವು ಪಡೆದ ಬಾಲಕಿಗೆ ಪಪೋನ್ ಕಿಸ್ ಪ್ರಕರಣ
ನವದೆಹಲಿ, ಫೆಬ್ರವರಿ 23 : ವಾಯ್ಸ್ ಆಫ್ ಇಂಡಿಯಾ ಕಿಡ್ಸ್ ರಿಯಾಲಿಟಿ ಶೋಗೆ ಸಿದ್ಧವಾಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಗಾಯಕ ಪರೋನ್ ಚುಂಬಿಸಿದ ಪ್ರಕರಣ ಇದ್ದಕ್ಕಿದ್ದಂತೆ ವಿಚಿತ್ರ ತಿರುವು ಪಡೆದಿದ್ದು, 'ಅಂಥದ್ದೇನೂ' ನಡೆದೇ ಇಲ್ಲ ಎಂದು ಬಾಲಕಿಯೇ ಹೇಳಿಕೆ ನೀಡಿದ್ದಾಳೆ.
ಈ ಕುರಿತಾಗಿ ವಿಡಿಯೋವೊಂದನ್ನು ಆಸ್ಸಾಂನಲ್ಲಿರುವ ಬಾಲಕಿಯ ಪೋಷಕರು, ಬಂಧುಗಳು ಬಿಡುಗಡೆ ಮಾಡಿದ್ದು, ಅದರಲ್ಲಿ ಬಾಲಕಿಯ ತಂದೆ ತಾಯಿ ಮತ್ತಿತರರು ಮಾತನಾಡಿದ್ದು, ಈ ಪ್ರಕರಣಕ್ಕೆ ಇಲ್ಲದ ವಿವಾದದ ಕಿಡಿ ಇಡಬೇಡಿ ಎಂದು ಬೇಡಿಕೊಂಡಿದ್ದಾರೆ.
ಆಗಿದ್ದೇನೆಂದರೆ, ತನ್ನ ಪರ್ಫಾರ್ಮನ್ಸ್ ಗಾಗಿ ಬಾಲಕಿ ಸಿದ್ಧಳಾಗುತ್ತಿದ್ದ ಸಮಯದಲ್ಲಿ, ಆಕೆಗೆ ಸಹಾಯ ಮಾಡುತ್ತಿದ್ದ ಗಾಯಕ ಪಪೋನ್ ಮುತ್ತಿಡುತ್ತಿರುವಂಥ ವಿಡಿಯೋ ಭಾರೀ ವೈರಲ್ ಆಗಿತ್ತು. ಸೂಕ್ಷ್ಮವಾಗಿ ಗಮನಿಸಿದಾಗ ಅವರು ಮುತ್ತಿಟ್ಟಿದ್ದು ನಿಜ ಕೂಡ.

ಈ ವಿವಾದಕ್ಕೆ ಪ್ರತಿಕ್ರಿಯಿಸಿರುವ ಬಾಲಕಿ, "ಪಪೋನ್ ಅವರು ತನ್ನ ಮಗಳಿಗೆ ಮುತ್ತು ಕೊಡುವಂತೆ ನನಗೂ ಕೊಟ್ಟಿದ್ದಾರೆ. ನನ್ನ ತಾಯಿ ಮತ್ತು ನನ್ನ ತಂದೆ ಇದೇ ರೀತಿ ಪ್ರೀತಿಯಿಂದ ಮುತ್ತಿಡುತ್ತಿರುತ್ತಾರೆ. ಇದರಲ್ಲಿ ತಪ್ಪೇನೂ ಇಲ್ಲ" ಎಂದು ಅಮಾಯಕವಾಗಿ ಹೇಳಿಕೆ ನೀಡಿದ್ದಾಳೆ.
"ಗಾಯಕ ಪಪೋನ್ ನನ್ನ ಮಗಳಿಗೆ ತಂದೆಯಿಂದ್ದಂತೆ. ಆಕೆಯ ಕನಸು ನನಸಾಗಲೆಂದು ಅವರು ಕೂಡ ಸಾಕಷ್ಟು ಪ್ರೋತ್ಸಾಹ ನೀಡಿದ್ದಾರೆ. ಇದೇ ರೀತಿ ಕನಸು ಕಂಡಿರುವ ಇತರ ಮಕ್ಕಳಿಗೂ ಅವರೇ ಇದೇ ರೀತಿ ಪ್ರೋತ್ಸಾಹ ನೀಡುತ್ತಿದ್ದಾರೆ. ಅವರು ನೀಡಿದ ಮುತ್ತಿನಲ್ಲಿ ಅದೇ ವಾತ್ಸಲ್ಯವಿದೆ. ದಯವಿಟ್ಟು ಇದನ್ನು ವಿವಾದ ಮಾಡಬೇಡಿ" ಎಂದು ಬಾಲಕಿಯ ತಂದೆ ವಿನಂತಿಸಿದ್ದಾರೆ.
ಸುಪ್ರೀಂ ಕೋರ್ಟ್ ನ ವಕೀಲೆ ರುನಾ ಭುಯಾನ್ ಎಂಬುವವರು ರಾಷ್ಟ್ರೀಯ ಮಕ್ಕಳ ರಕ್ಷಣಾ ಹಕ್ಕು ಆಯೋಗಕ್ಕೆ ದೂರು ನೀಡಿದ್ದು, ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಗಾಯಕನ ಮೇಲೆ ಕ್ರಮ ಜರುಗಿಸಬೇಕು ಎಂದು ದೂರನ್ನೂ ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪಪೋನ್ ವಿರುದ್ಧ ದೂರನ್ನೂ ದಾಖಲಿಸಿದ್ದಾರೆ.
ಈ ನಡುವೆ, ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ವಿದ್ಯಾ ಠಾಕೂರ್ ಅವರು, ಈ ಪ್ರಕರಣದ ತನಿಖೆ ನಡೆಸಬೇಕೆಂದು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಗುವಾಹಾತಿ ಪೊಲೀಸರು ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪಪೋನ್ ಮೇಲೆ ಕ್ರಮ ಜರುಗಿಸುವ ಸಾಧ್ಯತೆಗಳಿವೆ.
ಈ ಎಲ್ಲ ಬೆಳವಣಿಗೆಯಿಂದ ತೀವ್ರ ವಿಚಲಿತರಾಗಿರುವ ಗಾಯಕ ಪಪೋನ್ ಮಹಾಂತ ಅವರು, ವಾಯ್ಸ್ ಆಫ್ ಇಂಡಿಯಾ ಕಿಡ್ಸ್ ರಿಯಾಲಿಟಿ ಶೋನಿಂದ ಕೆಳಗಿಳಿಯುವುದಾಗಿ ಹೇಳಿಕೆ ನೀಡಿದ್ದಾರೆ. ನಾನು ಮಾನಸಿಕವಾಗಿ ನೊಂದಿದ್ದು, ತೀರ್ಪುಗಾರನಾಗಿ ನ್ಯಾಯ ಒದಗಿಸುವ ಸ್ಥಿತಿಯಲ್ಲಿ ನಾನಿಲ್ಲ. ಭಾರತೀಯ ನ್ಯಾಯಾಂಗದ ಮೇಲೆ ನನಗೆ ಭರವಸೆಯಿದೆ. ಕಳಂಕರಹಿತನಾಗಿ ಹೊರಬರುವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications