ಪ್ಯಾರಾಸಿಟಮಾಲ್ ಸೇರಿದಂತೆ 53 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ
ಭಾರತದಂತಹ ದೇಶದಲ್ಲಿ ಸಣ್ಣ ಪುಟ್ಟ ಕಾಯಿಲೆಗೆಲ್ಲ ವೈದ್ಯರ ಬಳಿ ಹೋಗದೇ ಮೆಡಿಕಲ್ಗೆ ಹೋಗಿ ಅವರು ಕೊಡುವ ಔಷಧ, ಮಾತ್ರೆ ತೆಗೆದುಕೊಳ್ಳುವುದು ಸಾಮಾನ್ಯವಾಗಿಬಿಟ್ಟಿದೆ. ವೈದ್ಯರ ಶಿಫಾರಸ್ಸು ಇಲ್ಲದೇ ಇದ್ದರೂ, ಕೆಲವು ಮೆಡಿಕಲ್ಗಳು ಮಾತ್ರೆ, ಔಷಧಿಗಳನ್ನು ಕೊಡುತ್ತಾರೆ. ಇದೀಗ ಬಂದಿರುವ ವರದಿಯೊಂದು ಔಷಧಿ ವಿಚಾರದಲ್ಲಿ ಎಚ್ಚರಿಕೆಯ ಸಂದೇಶ ಕೊಟ್ಟಿದೆ.
ಮಾಸಿಕ ಔಷಧ ಎಚ್ಚರಿಕೆ ಪಟ್ಟಿಯನ್ನು ಪ್ರಕಟಿಸಿರುವ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (CDSCO) 53 ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಹೇಳಿದೆ. ಹೆಚ್ಚಾಗಿ ಬಳಕೆ ಮಾಡುವ ಪ್ಯಾರಾಸಿಟಮಾಲ್, ಕ್ಯಾಲ್ಸಿಯಂ ಮತ್ತು ವೈಟಮಿನ್ ಡಿ3 ಸೇರಿದಂತೆ ಹಲವು ಔಷಧಿಗಳು ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಮಧುಮೇಹ ಔಷಧಗಳು, ಅಧಿಕ ರಕ್ತದೊತ್ತಡದ ನಿವಾರಕ ಔಷಧಿಗಳು ಸೇರಿದಂತೆ ಒಟ್ಟು 53 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ. ಈ ಔಷಧಗಳನ್ನು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಸುರಕ್ಷಿತವಲ್ಲ ಎಂದು ಘೋಷಿಸಿದೆ.
ರಾಜ್ಯ ಔಷಧ ಅಧಿಕಾರಿಗಳು ನಡೆಸಿದ ಅಧ್ಯಯನವನ್ನು ಆಧರಿಸಿ ಈ ವರದಿಯನ್ನು ರಚಿಸಲಾಗಿದೆ. ವೈಟಮಿನ್ ಸಿ ಮತ್ತು ಡಿ ಮಾತ್ರೆಗಳು, ವೈಟಮಿನ್ ಬಿ ಕಾಂಪ್ಲೆಕ್ಸ್, ಐಪಿ 500 ಎಂಜಿ, ಟೆಲ್ಮಿಸಾರ್ಟನ್ ಸೇರಿ 53 ಅಧಿಕ ಮಾರಾಟವಾಗುವ ಔಷಧಿಗಳು ಔಷಧ ನಿಯಂತ್ರಕರಿಂದ ಗುಣಮಟ್ಟದ ತಪಾಸಣೆಯಲ್ಲಿ ವಿಫಲವಾಗಿವೆ ಎಂದು ಹೇಳಿದೆ.
ದೇಶದ ಪ್ರಮುಖ ಔಷಧಗಳ ತಯಾರಕರಾದ ಹೆಟೆರೊ ಡ್ರಗ್ಸ್, ಅಲ್ಕೆಮ್ ಲ್ಯಾಬೊರೇಟರೀಸ್, ಹಿಂದೂಸ್ತಾನ್ ಆಂಟಿಬಯೋಟಿಕ್ಸ್ ಲಿಮಿಟೆಡ್ (ಎಚ್ಎಎಲ್), ಕರ್ನಾಟಕ ಆಂಟಿಬಯೋಟಿಕ್ಸ್ & ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್, ಮೆಗ್ ಲೈಫ್ ಸೈನ್ಸಸ್, ಪ್ಯೂರ್ & ಕ್ಯೂರ್ ಹೆಲ್ತ್ಕೇರ್ ಸೇರಿದಂತೆ ಹಲವು ತಯಾರಕರ ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ.
ಹೊಟ್ಟೆಯ ಸೋಂಕು ನಿವಾರಣೆಗೆ ಬಳಸಲಾಗುವ ಮೆಟ್ರೋನಿಡಜೋಲ್ ಔಷಧವನ್ನು ಪಿಎಸ್ಯು ಹಿಂದೂಸ್ತಾನ್ ಆಂಟಿಬಯೋಟಿಕ್ ಲಿಮಿಟೆಡ್ (ಎಚ್ಎಎಲ್) ಉತ್ಪಾದನೆ ಮಾಡುತ್ತಿದ್ದು, ಈ ಔಷಧಿ ಕೂಡ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ.
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ತಯಾರಿಸುವ ಜ್ವರ ಸೇರಿದಂತೆ ಹಲವು ರೋಗ ಲಕ್ಷಣಗಳಿಗೆ ಸಾಮಾನ್ಯವಾಗಿ ಬಳಕೆ ಮಾಡುವ ಪ್ಯಾರಸಿಟಮಾಲ್ ಮಾತ್ರೆಗಳು ಕೂಡ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ ಎಂದು ಹೇಳಿದೆ.
ಆದರೆ ಔಷಧ ತಯಾರಿ ಕಂಪನಿಗಳು ಈ ವರದಿಯನ್ನು ನಿರಾಕರಿಸಿವೆ. ಈ ಔಷಧಗಳ ಅಸಲಿ ತಯಾರಕರು, ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಔಷಧಗಳ ತಯಾರಕರು ನಾವಲ್ಲ, ಅವು ನಕಲಿ ಔಷಧಿಗಳು ಎಂದು ಹೇಳಿಕೊಂಡಿವೆ. ತನಿಖೆಯಲ್ಲಿ ಕೂಡ ಇದೇ ವಿಚಾರ ಬೆಳಕಿಗೆ ಬಂದಿದೆ ಎಂದು ಸಮರ್ಥಿಸಿಕೊಂಡಿವೆ.
ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ ಆಗಸ್ಟ್ನಲ್ಲಿ 156ಕ್ಕೂ ಹೆಚ್ಚು ಸ್ಥಿರ-ಡೋಸ್ ಔಷಧಿಗಳು ಹೆಚ್ಚಿನ ಅಪಾಯ ಉಂಟುಮಾಡುತ್ತವೆ ಎಂದು ಹೇಳಿ ತಯಾರಿ-ಮಾರಾಟವನ್ನು ನಿಷೇಧಿಸಿತ್ತು.
-
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications