ಗುಜರಾತ್ನಲ್ಲಿ ಅರೆಸೇನಾ ಸಿಬ್ಬಂದಿ ಸಿಡಿಸಿದ ಗುಂಡಿಗೆ ಇಬ್ಬರು ಸಹೋದ್ಯೋಗಿಗಳು ಸಾವು
ಅಹ್ಮದಾಬಾದ್, ನವೆಂಬರ್ 27: ಗುಜರಾತ್ನಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಕರ್ತವ್ಯದಲ್ಲಿದ್ದ ಅರೆಸೇನಾ ಪಡೆಯ ಸಿಬ್ಬಂದಿ ಹಾರಿಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಹೋದ್ಯೋಗಿಗಳು ಮೃತಪಟ್ಟಿರುವ ಘಟನೆ ಪೋರಬಂದರ್ ಬಳಿ ನಡೆದಿದೆ.
ಸಂಜೆ ವೇಳೆ ನಡೆದ ಗಲಾಟೆಯಲ್ಲಿ ಈ ಸಿಬ್ಬಂದಿಯು ಕರ್ತವ್ಯದಲ್ಲಿ ಸಕ್ರಿಯರಾಗಿರಲಿಲ್ಲ. ಈ ಸಂದರ್ಭದಲ್ಲೇ ಎಕೆ -47 ರೈಫಲ್ನಿಂದ ಗುಂಡು ಹಾರಿಸಲಾಗಿದೆ ಎಂದು ತಿಳಿದುಬಂದಿದೆ.
ಅವರು ಮಣಿಪುರದ ಇಂಡಿಯಾ ರಿಸರ್ವ್ ಬೆಟಾಲಿಯನ್ (IRB) ನ ಭಾಗವಾಗಿದ್ದರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) ಜೊತೆಗೆ ಗುಜರಾತ್ನಲ್ಲಿ ನಿಯೋಜಿಸಲ್ಪಟ್ಟಿದ್ದರು ಎಂದು ಪೋರಬಂದರ್ ಕಲೆಕ್ಟರ್ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ ಎ. ಎಂ. ಶರ್ಮಾ ಹೇಳಿದ್ದಾರೆ.

ಪೋರಬಂದರ್ ಬಳಿ ನಡೆದ ಘರ್ಷಣೆಗೆ ಕಾರಣವೇನು?, ಗುಂಡಿನ ದಾಳಿ ನಡೆಸಿದ ಸಿಬ್ಬಂದಿಯ ಕೋಪಕ್ಕೆ ಕಾರಣವೇನು?. ಈ ಘಟನೆಯ ಹಿನ್ನೆಲೆ ಏನು ಎಂಬುದರ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರೋಬಂದರ್ ಜನರಲ್ ಆಸ್ಪತ್ರೆಗೆ ಗಾಯಾಳು ದಾಖಲು: ಇನ್ನು ಪೋರಬಂದರ್ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರ ಹೊಟ್ಟೆ ಮತ್ತೊಬ್ಬರ ಕಾಲಿಗೆ ಬುಲೆಟ್ ತಗುಲಿದೆ. ತಕ್ಷಣ ಗಾಯಾಳುಗಳನ್ನು ಪ್ರೋರ್ ಬಂದರ್ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ನಂತರ ಅವರನ್ನು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಸುಮಾರು 150 ಕಿಮೀ ದೂರದಲ್ಲಿರುವ ಜಾಮ್ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದು ಯಾರು?: ಪೊಲೀಸ್ ವರದಿಯು ಆರೋಪಿಯನ್ನು ಕಾನ್ಸ್ಟೆಬಲ್ ಎಸ್ ಇನೌಚಾಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಕೊಲೆಯಾದ ಇಬ್ಬರು ಜವಾನರನ್ನು ತೊಯ್ಬಾ ಸಿಂಗ್ ಮತ್ತು ಜಿತೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಕಾನ್ಸ್ಟೆಬಲ್ಗಳಾದ ಚೋರಜಿತ್ ಮತ್ತು ರೋಹಿಕಾನಾ ಎಂದು ಗೊತ್ತಾಗಿದ್ದು, ಎಲ್ಲರೂ ಮಣಿಪುರಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಸೈಕ್ಲೋನ್ ಕೇಂದ್ರದಲ್ಲಿ ತಂಗಿದ್ದ ಸಿಬ್ಬಂದಿ: ಗುಜರಾತ್ನ ಪೋರಬಂದರ್ನಿಂದ ಸುಮಾರು 25 ಕಿಮೀ ದೂರದಲ್ಲಿರುವ ತುಕ್ಡಾ ಗೋಸಾ ಗ್ರಾಮದ ಸೈಕ್ಲೋನ್ ಕೇಂದ್ರದಲ್ಲಿ ಈ ಅರೆಸೇನಾ ಸಿಬ್ಬಂದಿಯು ತಂಗಿದ್ದರು. ಪೋರಬಂದರ್ ಜಿಲ್ಲೆಯಲ್ಲಿ ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಎರಡನೇ ಹಂತದಲ್ಲಿ ಡಿಸೆಂಬರ್ 5ರಂದು ಮತ್ತು ಫಲಿತಾಂಶ 8ರಂದು ಹೊರ ಬೀಳಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications