ಜಮ್ಮು ಕಾಶ್ಮೀರ: ಗ್ರಾಮಸ್ಥರಲ್ಲಿ ಭದ್ರತೆಯ ಭಾವ ಮೂಡಿಸಲು ಗ್ರಾಮ ರಕ್ಷಣಾ ಸಮಿತಿಗಳಿಗೆ ಸೇನೆಯಿಂದ ತರಬೇತಿ
ಶ್ರೀನಗರ, ಜ. 09: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಮತ್ತು ಪೂಂಚ್ನ ಗ್ರಾಮಸ್ಥರಲ್ಲಿ ಭದ್ರತೆಯ ಭಾವವನ್ನು ಮೂಡಿಸಲು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಗ್ರಾಮ ರಕ್ಷಣಾ ಸಮಿತಿಗಳಿಗೆ ತರಬೇತಿ ನೀಡುತ್ತದೆ.
ಭಯೋತ್ಪಾದಕ ದಾಳಿಗಳಿಂದ ರಕ್ಷಿಸಿಕೊಳ್ಳಲು ಮತ್ತು ಅವುಗಳ ವಿರುದ್ಧ ಎಚ್ಚರಿಕೆಯಿಂದಿರಲು ಸರ್ಕಾರದಿಂದ ಶಸ್ತ್ರಸಜ್ಜಿತವಾದ ಗ್ರಾಮ ರಕ್ಷಣಾ ಸಮಿತಿಗಳಿಗೆ ಸಿಆರ್ಪಿಎಫ್ ತರಬೇತಿ ನೀಡಲಿದೆ.
"ಸಿಆರ್ಪಿಎಫ್ ಗ್ರಾಮಸ್ಥರಿಗೆ ತರಬೇತಿ ನೀಡಲಿದೆ. ಆದರೆ ಅವರಿಗೆ ಶಸ್ತ್ರಾಸ್ತ್ರಗಳನ್ನು ಸಹ ನೀಡಬೇಕೇ, ನೀಡಿದರೂ ಅದು ಸಣ್ಣ ಶಸ್ತ್ರಾಸ್ತ್ರ ಅಥವಾ ರೈಫಲ್ ಆಗಲಿದೆಯೇ ಎಂದು ಇನ್ನೂ ನಿರ್ಧರಿಸಲಾಗಿಲ್ಲ" ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿ ಪ್ರಕಾರ, ತರಬೇತಿ ವೇಳಾಪಟ್ಟಿ, ಸೇರಿಸಬೇಕಾದ ವಿವಿಧ ಶಸ್ತ್ರಾಸ್ತ್ರಗಳು ಮತ್ತು ಭಾಗವಹಿಸುವವರ ಸಂಖ್ಯೆಯನ್ನು ಸರಿಯಾದ ಸಮಯದಲ್ಲಿ ನಿರ್ಧರಿಸಲಾಗುತ್ತದೆ.
ರಾಜೌರಿ ಜಿಲ್ಲೆಯ ಧಂಗ್ರಿ ಘಟನೆಯಲ್ಲಿ ಏಳು ಜನರು ಮೃತಪಟ್ಟ ನಂತರ ಜಮ್ಮು ಮತ್ತು ಕಾಶ್ಮೀರ ಆಡಳಿತವು ಇತ್ತೀಚೆಗೆ ಗ್ರಾಮ ರಕ್ಷಣಾ ಸಮಿತಿಗಳು ಎಂದು ಕರೆಯಲ್ಪಡುವ ಗ್ರಾಮ ರಕ್ಷಣಾ ಸಿಬ್ಬಂದಿಗೆ ಶಸ್ತ್ರಾಸ್ತ್ರಗಳನ್ನು ಮರುಹಂಚಿಕೆ ಮಾಡಲು ಪ್ರಾರಂಭಿಸಿದೆ. ಈ ಗ್ರಾಮ ರಕ್ಷಣಾ ಸಮಿತಿಗಳು ಸ್ಥಳೀಯ ಗ್ರಾಮದ ಸ್ವಯಂಸೇವಕರನ್ನು ಒಳಗೊಂಡಿರುತ್ತವೆ.
1990 ರ ದಶಕದಲ್ಲಿ ರಾಜೌರಿ - ಪೂಂಚ್ ಪ್ರದೇಶಗಳಲ್ಲಿ ಗ್ರಾಮ ರಕ್ಷಣಾ ಸಮಿತಿಗಳಿಗೆ ತರಬೇತಿ ಮತ್ತು ಶಸ್ತ್ರಾಸ್ತ್ರಗಳನ್ನು ನೀಡಲಾಗಿತ್ತು. " ಈ ಸಮುದಾಯದ ಒಂದು ಘಟಕದ ಮೇಲೆ ದಾಳಿಗಳು ನಡೆದವು. ಹೀಗಾಗಿ ಸಾಮೂಹಿಕ ವಲಸೆಯನ್ನು ತಡೆಯುವ ಸಲುವಾಗಿ ಗ್ರಾಮ ರಕ್ಷಣಾ ಸಮಿತಿಗಳಿಗೆ ಶಸ್ತ್ರಾಸ್ತ್ರಗಳನ್ನು ನೀಡಲಾಯಿತು" ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಇತ್ತೀಚಿನ ದಾಳಿಯ ನಂತರ, ಭಯೋತ್ಪಾದಕರು ಜಮ್ಮುವಿನಲ್ಲಿ ಶಾಂತಿಯುತ ವಾತಾವರಣವನ್ನು ಹಾಳುಮಾಡಬಹುದು ಎಂಬ ಆತಂಕದ ನಡುವೆ, ಜಮ್ಮು ಮತ್ತು ಕಾಶ್ಮೀರ ಆಡಳಿತವು ಮುಂಬರುವ ಗಣರಾಜ್ಯೋತ್ಸವದ ಕುರಿತು ಮುಂಜಾಗ್ರತೆ ವಹಿಸುತ್ತಿದೆ. ಹೀಗಾಗಿ ಗ್ರಾಮ ರಕ್ಷಣಾ ಸಮಿತಿಗಳಿಗೆ ಜಾಗರೂಕರಾಗಿರಲು ತಿಳಿಸಿದೆ.
ಜಮ್ಮು, ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿನ ಭಾರತ - ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಗ್ರಾಮ ರಕ್ಷಣಾ ಸಮಿತಿಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications