ಆರೋಗ್ಯಕರ ಮಗುವಿಗಾಗಿ ಅನಾರೋಗ್ಯಕರ ಮಗುವಿನ ಬರ್ಬರ ಹತ್ಯೆ!
ಮೊರಾದಾಬಾದ್, ಆಗಸ್ಟ್ 07 : ಆರೋಗ್ಯಕರ ಮಗು ಬೇಕೆಂಬ ಕಾರಣಕ್ಕಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟ ಮಗಳನ್ನು ಹತ್ಯೆ ಮಾಡಿ ಮನೆಯಲ್ಲೇ ಹೂತುಹಾಕಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಮೋರಾದಾಬಾದ್ ಜಿಲ್ಲೆಯ ಚೌಧರ್ ಪುರ ಗ್ರಾಮದಲ್ಲಿ ನಡೆದಿದೆ.
ಈ ಮಗುವನ್ನು ಕೊಂದು ಮನೆಯಲ್ಲಿಯೂ ಹೂಳಿದರೆ ಮುಂದೆ ನಿಮಗೆ ಆರೋಗ್ಯಕರ ಮಗು ಹುಟ್ಟುತ್ತದೆ ಎಂದು ಜ್ಯೋತಿಷಿಯೊಬ್ಬ ಹೇಳಿದ ಮಾತನ್ನು ಕೇಳಿಕೊಂಡು ತಾರಾ ಎಂಬ ಹೆಸರಿನ ಆ ಬಾಲಕಿಯ ಪೋಷಕರು ಈ ಹೀನ ಕೃತ್ಯ ಎಸಗಿದ್ದಾರೆ.
ತಾರಾಳ ಮಗುವಿಗೆ ಮಗಳನ್ನು ಹತ್ಯೆಗೈಯುವುದು ಅಷ್ಟು ಇಷ್ಟವಿರಲಿಲ್ಲ. ಆದರೂ, ಮಗಳು ತನ್ನ ಬಳಿಯೇ ಇರಬೇಕೆಂದು ತಾರಾಳನ್ನು ಮನೆಯಲ್ಲಿಯೇ ಹೂತಿದ್ದಾಗಿ ತಾರಾಳ ಅಜ್ಜಿ ಹೇಳಿಕೆ ನೀಡಿದ್ದಾರೆ. ನೆರೆಹೊರೆಯವರು ಈ ಬಗ್ಗೆ ದೂರು ನೀಡಿದ್ದರ ಮೇರೆಗೆ ಪೊಲೀಸರು ಭೂಮಿಯನ್ನು ಬಗೆದು ತಾರಾಳ ದೇಹವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಪೌಷ್ಟಿಕತೆಯಿಂದ ಮತ್ತು ವಿಟಮಿನ್ ಡಿ ಕೊರತೆಯಿಂದಾಗಿ ಆಕೆ ಮೂಳೆ ರೋಗದಿಂದ ಬಳಲುತ್ತಿದ್ದಳು. ಎಷ್ಟೋ ವೈದ್ಯರ ಬಳಿ ತೋರಿಸಿ, ಹಲವಾರು ಬಗೆಯ ಚಿಕಿತ್ಸೆ ನೀಡಿದ್ದರೂ ತಾರಾ ಗುಣಮುಖಳಾಗಿರಲಿಲ್ಲ. ಆಕೆ ದಿನದಿಂದ ದಿನಕ್ಕೆ ಅಶಕ್ತವಾಗುತ್ತಾ ಸಾಗುತ್ತಿದ್ದಳು ಎಂದು ಅಜ್ಜಿ ಹೇಳಿದ್ದಾರೆ. ಅವರ ಮೊಮ್ಮಗನಿಗೂ ಇದೇ ಬಗೆಯ ರೋಗವಿದೆ.
ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದ್ದೇನೆಂದರೆ, ತಾರಾಳ ದೇಹದಲ್ಲಿ ಸಾಸಿವೆ ಕಾಳಿನಷ್ಟು ಕೂಡ ಆಹಾರವಿರಲಿಲ್ಲ. ಅಲ್ಲದೆ, ಆಕೆ ಉಸಿರುಗಟ್ಟುವಿಕೆಯಿಂದ ಸತ್ತಿದ್ದಾಳೆ. ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ತಾರಾಳ ಪೋಷಕರನ್ನು ಇನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿಲ್ಲ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications