ನವದೆಹಲಿ, ಫೆಬ್ರವರಿ 7: ಸಂಸತ್ತಿನ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಆರಂಭ ದಿನ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉತ್ತರಿಸಲಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ಸುಮಾರು 12 ಗಂಟೆಗಳ ಕಾಲ ನಡೆಯಿತು. ಈ ಮಧ್ಯೆ, ಕಳೆದ ವಾರ ರಾಜ್ಯಸಭೆಯು ಬಜೆಟ್ ಅಧಿವೇಶನ ಚರ್ಚೆಯಲ್ಲಿ ಶೇಕಡಾ 100 ರಷ್ಟು ಫಲವನ್ನು ಸಾಧಿಸಿದೆ. ಮೇಲ್ಮನೆ ಕಲಾಪ ಮುಂದೂಡಿಕೆಯಾಗದೇ, ಯಾವುದೇ ಗದ್ದಲ, ಕೋಲಾಹಲ ನಡೆಯದೆ ಸದ್ಭಳಕೆಯಾಗಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಕಳೆದ ಜನವರಿ 31ರಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಸಕ್ತ ಹಣಕಾಸು ವರ್ಷದ ಮೊದಲ ಏಳು ತಿಂಗಳಲ್ಲಿ 48 ಶತಕೋಟಿ ಡಾಲರ್ ಹೂಡಿಕೆಯ ಒಳಹರಿವು ಭಾರತದ ಬೆಳವಣಿಗೆಯಲ್ಲಿ ಜಾಗತಿಕ ಹೂಡಿಕೆದಾರ ಸಮುದಾಯವು ಹೊಂದಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದರು.
ದೇಶದ ಹೆಚ್ಚುತ್ತಿರುವ ರಫ್ತುಗಳ ಕುರಿತು ಭಾಷಣದಲ್ಲಿ ಪ್ರಸ್ತಾಪಿಸಿದ್ದ ರಾಷ್ಟ್ರಪತಿಗಳು, ''ಭಾರತದ ವಿದೇಶಿ ವಿನಿಮಯ ಮೀಸಲು ಇಂದು 630 ಶತಕೋಟಿ ಡಾಲರ್ಗಳನ್ನು ಮೀರಿದೆ. ನಮ್ಮ ರಫ್ತು ಕೂಡ ವೇಗವಾಗಿ ಬೆಳೆದಿದೆ, ಹಲವಾರು ಹಿಂದಿನ ದಾಖಲೆಗಳನ್ನು ಮುರಿದಿದೆ. ಕಳೆದ ವರ್ಷ 2021 ಏಪ್ರಿಲ್ನಿಂದ ಡಿಸೆಂಬರ್ ಅವಧಿಯಲ್ಲಿ ನಮ್ಮ ಸರಕು-ರಫ್ತು 300 ಶತಕೋಟಿ ಡಾಲರ್ಗಳಷ್ಟಿದೆ. ಅಂದರೆ 22 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದೆ, ಇದು 2020ರ ಅವಧಿಗಿಂತ ಒಂದೂವರೆ ಪಟ್ಟು ಹೆಚ್ಚಾಗಿದೆ ಎಂದಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ರಾಷ್ಟ್ರಪತಿಗಳ ವಂದನಾ ನಿರ್ಣಯಕ್ಕೆ ಉತ್ತರ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಈ ಹಿಂದಿನ ಭಾಷಣಕ್ಕೂ ಪ್ರತ್ಯುತ್ತರ ಕೊಡುವ ಸಾಧ್ಯತೆ ಇದೆ. ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲೆ ವೀರಾವೇಶದಿಂದ ಮಾತಾಡಿದ್ದ ರಾಹುಲ್ ... ಗಾಂಧಿ, 'ಕೇಂದ್ರ ಸರ್ಕಾರ ರಾಜ್ಯಗಳ ಒಕ್ಕೂಟ ಧ್ವನಿಯನ್ನು ಹತ್ತಿಕ್ಕುತ್ತಿದೆ. ದೇಶದಲ್ಲಿ ಬಿಜೆಪಿ ಆಳ್ವಿಕೆಯಲ್ಲಿ ರಾಜನ ಪರಿಕಲ್ಪನೆ ಮರುಕಳಿಸುತ್ತಿದೆ' ಎಂದು ಗಂಭೀರ ಆರೋಪ ಮಾಡಿದ್ದರು.
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಕಳೆದ ಜ.31ರಂದು ಭಾಷಣ ಮಾಡಿದ್ದರು. ರಾಷ್ಟ್ರಪತಿ ವಂದನಾ ನಿರ್ಣಯ ಚರ್ಚೆಯಲ್ಲಿ ರಾಹುಲ್ ಸೃಷ್ಟಿಸಿದ ವಿವಾದಕ್ಕೂ ಮೋದಿ ತಿರುಗೇಟು ನೀಡುವ ಸಾಧ್ಯತೆ ಇದೆ.
Feb 07, 2022, 7:13 pm IST
ನೀವು ನನ್ನನ್ನು ವಿರೋಧಿಸಿ. ಆದರೆ ಫಿಟ್ ಇಂಡಿಯಾ ಸೇರಿದಂತೆ ಇತರ ಯೋಜನೆಗಳನ್ನು ಏಕೆ ವಿರೋಧಿಸುತ್ತಿದ್ದೀರಿ?. ವರ್ಷಗಳ ಹಿಂದೆ ಹಲವು ರಾಜ್ಯಗಳಲ್ಲಿ ಸೋಲು ಕಂಡಿದ್ದೀರಿ. ನನಗೆ ಇದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ಮೋದಿ ವ್ಯಂಗ್ಯವಾಡಿದರು.
Feb 07, 2022, 7:09 pm IST
ಕೋವಿಡ್ ಲಾಕ್ಡೌನ್ ಸಮಯದಲ್ಲಿ ಕಾಂಗ್ರೆಸ್ ವಲಸೆ ಕಾರ್ಮಿಕರು ಮುಂಬೈನಿಂದ ಊರುಗಳಿಗೆ ಹೋಗಲು ಉಚಿತ ರೈಲು ಟಿಕೆಟ್ ನೀಡಿತು. ಅದೇ ಸಮಯದಲ್ಲಿ ದೆಹಲಿ ಸರ್ಕಾರ ವಲಸೆ ಕಾರ್ಮಿಕರು ನಗರ ತೊರೆಯುವಂತೆ ಹೇಳಿತು, ಅವರಿಗೆ ಬಸ್ ಒದಗಿಸಿತು. ಇದರಿಂದಾಗಿ ಉತ್ತರ ಪ್ರದೇಶ, ಪಂಜಾಬ್ನಲ್ಲಿ ಕೋವಿಡ್ ವೇಗವಾಗಿ ಹಬ್ಬಿತು ಎಂದು ಮೋದಿ ಆರೋಪಿಸಿದರು.
Feb 07, 2022, 7:04 pm IST
ನಾವು ಈಗ ಚಿಕ್ಕ ರೈತರನ್ನು ಸಧೃಢಗೊಳಿಸಬೇಕಿದೆ, ಸರ್ಕಾರ ಆ ಕಡೆ ಗಮನ ಹರಿಸಿದೆ. ಚಿಕ್ಕ ರೈತರ ನೋವು ತಿಳಿದಿಲ್ಲದವರಿಗೆ ಅವರ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಲು ಹಕ್ಕಿಲ್ಲ. ರೈತರ ಹೆಸರಿನಲ್ಲಿ ರಾಜಕೀಯ ಮಾಡಬಾರದು ಎಂದರು.
Feb 07, 2022, 7:01 pm IST
ತೆಲಂಗಾಣವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿದರೂ ಜನರು ಪಕ್ಷವನ್ನು ತಿರಸ್ಕರಿಸಿದ್ದಾರೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Feb 07, 2022, 7:00 pm IST
ಕಾಂಗ್ರೆಸ್ ಪಕ್ಷವನ್ನು ಉತ್ತರ ಪ್ರದೇಶ, ಕರ್ನಾಟಕ, ಬಿಹಾರ, ಗುಜರಾತ್ನಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದು ಮೋದಿ ಹೇಳಿದರು.
Feb 07, 2022, 6:58 pm IST
ಕಾಂಗ್ರೆಸ್ ಪಕ್ಷ 50 ವರ್ಷಗಳ ಕಾಲ ಆಡಳಿತ ನಡೆಸಿದೆ. ಆದರೆ 2014ರ ತನಕ ಯಾವುದೇ ಯೋಜನೆಗಳು ಜನರಿಗೆ ತಲುಪಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದರು.
Feb 07, 2022, 6:57 pm IST
ದೇಶದಲ್ಲಿ ಬಡವರು ಸಂತವಾಗಿದ್ದಾರೆ. ಈ ಸಂತಸ ದೇಶದ ಶಕ್ತಿಯನ್ನು ಹೆಚ್ಚಿಸಿದೆ. ಬಡವರು ಬ್ಯಾಂಕ್ ಖಾತೆ ತೆರೆಯುವಂತೆ ಆಗಿದೆ. ಬಡವರ ಮನೆಗಳಿಗೆ ಶೌಚಾಲಯ, ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಮೋದಿ ಹೇಳಿದರು.
Feb 07, 2022, 6:56 pm IST
ಕೆಲವು ಜನರು ಮೇಕ್ ಇನ್ ಇಂಡಿಯಾ ವಿರುದ್ಧವಾಗಿದ್ದಾರೆ. ಇದರಿಂದಾಗಿ ಅವರಿಗೆ ಭಷ್ಟಾಚಾರ ಮಾಡಲು ಸಾಧ್ಯವಾಗುತ್ತಿಲ್ಲ. ರಕ್ಷಣಾ ವಲಯದ ಹಲವಾರು ಸಮಸ್ಯೆಗಳನ್ನು ನಾವು ಬಗೆಹರಿಸಲು ನಾವು ಪ್ರಯತ್ನ ನಡೆಸಿದ್ದೇವೆ ಎಂದು ಮೋದಿ ಹೇಳಿದರು.
Feb 07, 2022, 6:53 pm IST
ಲತಾ ಮಂಗೇಷ್ಕರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದರು. ಲತಾ ದೀದಿ ನಿಧನದಿಂದ ಭಾರತದ ದನಿಯನ್ನೇ ಕಳೆದುಕೊಂಡಂತೆ ಆಗಿದೆ ಎಂದರು.
Feb 07, 2022, 6:51 pm IST
ಕೋವಿಡ್ ಕಾಲದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡಿದೆ ಎಂದು ಆರೋಪಿಸಿದರು. ಪ್ರಧಾನಿ ಮೋದಿ ಭಾಷಣದ ವೇಳೆಯಲ್ಲೂ ಪ್ರತಿಪಕ್ಷಗಳು ಅಡ್ಡಿಪಡಿಸಿದವು.
Feb 07, 2022, 6:49 pm IST
ಹಣದುಬ್ಬರದ ಬಗ್ಗೆ ಮಾತನಾಡುವ ವಿರೋಧ ಪಕ್ಷಗಳು ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಪರಿಸ್ಥಿತಿ ಹೇಗಿತ್ತು? ಎಂದು ಮೋದಿ ಪ್ರಶ್ನಿಸಿದರು.
The opposition has raised the issue of inflation here, it would've been better if they have raised that matter while their govt was in power. In pandemic also our govt tried to tackle inflation. During 2014-2020 the inflation rate was below 5%: PM Modi in Lok Sabha pic.twitter.com/nlrWloDfzb
ನಾವು ಸ್ವಾತಂತ್ರ್ಯದ ಭಾರತದ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಎಲ್ಲರನ್ನೂ ನಾವು ಸ್ಮರಿಸಬೇಕು. ಎರಡು ವರ್ಷಗಳಲ್ಲಿ ನಾವು ಮಹಾಮಾರಿಯನ್ನು ಎದುರಿಸಿದ್ದೇವೆ ಎಂದರು.
Feb 07, 2022, 6:43 pm IST
ಮಹಾತ್ಮ ಗಾಂಧೀಜಿಯ ಸ್ವದೇಶಿ ಕನಸಿಗೆ ಕಾಂಗ್ರೆಸ್ ಅಡ್ಡಿಯಾಗಿದೆ. ಆತ್ಮ ನಿರ್ಭರ ಭಾರತದ ಕನಸಿಗೆ ಕಾಂಗ್ರೆಸ್ ವಿರುದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
Feb 07, 2022, 6:42 pm IST
ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬಾರದು ಎಂದು ಜನರು ತೀರ್ಮಾನ ಮಾಡಿದ್ದಾರೆ. ಇನ್ನೂ 100 ವರ್ಷಗಳು ಕಳೆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಮೋದಿ ಹೇಳಿದರು.
Feb 07, 2022, 6:40 pm IST
ಸಣ್ಣ ರೈತರ ಕಷ್ಟ ತಿಳಿಯದವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮೋದಿ ವಾಗ್ದಾಳಿ ನಡೆಸಿದರು.
We need to strengthen our small farmers. Our focus is on them. But those who don't know the pain of small farmers don't have any right to do politics in the name of the farmers: PM Modi in Lok Sabha pic.twitter.com/uPppeNlO6k
ಹಲವಾರು ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಕಂಡರೂ ಇನ್ನೂ ದುರಹಂಕಾರ ಕಡಿಮೆ ಆಗಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದರು.
Feb 07, 2022, 6:35 pm IST
ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಉತ್ತರ ನೀಡುತ್ತಿದ್ದಾರೆ.
Feb 07, 2022, 12:22 pm IST
ಸಂಸತ್ತಿನ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಆರಂಭ ದಿನ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉತ್ತರಿಸಲಿದ್ದಾರೆ.
Feb 01, 2022, 6:39 pm IST
ಕರ್ನಾಟಕ ರಾಜ್ಯಕ್ಕೆ ಶೂನ್ಯ ಕೊಡುಗೆ: ಡಿ.ಕೆ. ಶಿವಕುಮಾರ್
ಕರ್ನಾಟಕಕ್ಕೆ ಯೋಜನೆಗಳ ಸುರಿಮಳೆಯ ಬಜೆಟ್ ಕೊಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ಹಾಗೂ ಮುಖ್ಯಮಂತ್ರಿಗಳಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲಾ ರಂಗದಲ್ಲೂ ಕರ್ನಾಟಕ ರಾಜ್ಯಕ್ಕೆ ಶೂನ್ಯ ಕೊಡುಗೆ ಹಾಗೂ ಕರ್ನಾಟಕದ ಹೆಸರನ್ನೂ ಪ್ರಸ್ತಾಪ ಮಾಡದಂತಹ ಬಜೆಟ್ ಅನ್ನು ಕೇಂದ್ರ ಸರ್ಕಾರ ಇಂದು ಮಂಡಿಸಿದೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Feb 01, 2022, 6:36 pm IST
ಜನಸಾಮಾನ್ಯರನ್ನ ನಿರ್ಲಕ್ಷಿಸಿದ ಬಜೆಟ್: ಪೃಥ್ವಿ ರೆಡ್ಡಿ
ಕೃಷಿ, ಆರೋಗ್ಯ, ಶಿಕ್ಷಣ ಸೇರಿದಂತೆ ಜನಸಾಮಾನ್ಯರಿಗೆ ಸಂಬಂಧಿಸಿದ ಎಲ್ಲ ಕ್ಷೇತ್ರಗಳನ್ನು ನಿರ್ಲಕ್ಷಿಸಿರುವ ಆಯವ್ಯಯವನ್ನು ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಟೀಕಿಸಿದ್ದಾರೆ.
Feb 01, 2022, 5:49 pm IST
ಜನರ ನಿರೀಕ್ಷೆ ಹುಸಿಯಾಗಿದೆ: ಸಿದ್ದರಾಮಯ್ಯ
ಈ ಬಜೆಟ್ ಬಗ್ಗೆ ನಾನು ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದರೆ ನಾಡಿನ ರೈತರು, ಮಹಿಳೆಯರು, ಸಾಮಾನ್ಯ ವರ್ಗದ ಜನ ಹೆಚ್ಚು ನಿರೀಕ್ಷೆ ಇಟ್ಟಿದ್ದರು. ಅವರ ನಿರೀಕ್ಷೆ ಹುಸಿಯಾಗಿದೆ. ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ ಕ್ಷೇತ್ರದ ಉತ್ತೇಜನಕ್ಕಾಗಿ ಕಾರ್ಯಕ್ರಮಗಳ ಘೋಷಣೆ ಆಗುತ್ತವೆಂಬ ನಿರೀಕ್ಷೆ ಇತ್ತು. ಕಳೆದ ವರ್ಷ 34 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು, ಈ ಬಾರಿ 39 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಿದ್ದಾರೆ. ಮುಂಬರುವ ವರ್ಷಕ್ಕೆ ಕೇಂದ್ರ ಸರ್ಕಾರ 11 ಲಕ್ಷದ 87 ಸಾವಿರ ಕೋಟಿ ಸಾಲ ಮಾಡಲಿದೆ: ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
Feb 01, 2022, 5:45 pm IST
ಪ್ರಸ್ತುತ ಕಾಲಕ್ಕೆ ಸರ್ಕಾರದ ಗಮನವಿಲ್ಲ ಎಂದು ಸರ್ಕಾರ ನಂಬಿರುವಂತಿದೆ!
ಹಣಕಾಸು ಸಚಿವರು ಮುಂದಿನ 25 ವರ್ಷಗಳ ಯೋಜನೆಗೆ ರೂಪುರೇಷೆ ನೀಡುತ್ತಿದ್ದಾರೆ ಎಂದು ಕೇಳಿ ನನಗೆ ಆಶ್ಚರ್ಯವಾಯಿತು, ಆಘಾತವಾಯಿತು. ಪ್ರಸ್ತುತ ವರ್ತಮಾನಕ್ಕೆ ಯಾವುದೇ ಗಮನ ಅಗತ್ಯವಿಲ್ಲ ಎಂದು ಸರ್ಕಾರ ನಂಬಿರುವಂತಿದೆ. 'ಅಮೃತ್ ಕಾಲ' ಬೆಳಗಾಗುವವರೆಗೆ ತಾಳ್ಮೆಯಿಂದ ಕಾಯುವಂತೆ ಸಾರ್ವಜನಿಕರನ್ನು ಕೇಳಿಕೊಳ್ಳಬಹುದು. ಇದು ಭಾರತದ ಜನರನ್ನು ಅಣಕಿಸುತ್ತಿದೆ: ಪಿ ಚಿದಂಬರಂ
Feb 01, 2022, 5:19 pm IST
ಬಂಡವಾಳಶಾಹಿ ಬಜೆಟ್ ಆಗಿದೆ: ಪಿ. ಚಿದಂಬರಂ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣವು ಅತ್ಯಂತ ಬಂಡವಾಳಶಾಹಿ ಭಾಷಣವಾಗಿದೆ. 'ಬಡವರು' ಎಂಬ ಪದವು ಪ್ಯಾರಾ 6 ರಲ್ಲಿ ಕೇವಲ ಎರಡು ಬಾರಿ ಕಂಡುಬರುತ್ತದೆ. ಈ ದೇಶದಲ್ಲಿ ಬಡವರಿದ್ದಾರೆ ಎಂದು ನೆನಪಿಸಿಕೊಂಡಿದ್ದಕ್ಕಾಗಿ ನಾವು ಹಣಕಾಸು ಸಚಿವರಿಗೆ ಧನ್ಯವಾದಗಳನ್ನ ಹೇಳಲು ಬಯಸುತ್ತೇವೆ. ಈ ಬಂಡವಾಳಶಾಹಿ ಬಜೆಟ್ ಅನ್ನು ಜನರು ತಿರಸ್ಕರಿಸುತ್ತಾರೆ: ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ. ಚಿದಂಬರಂ
Today's budget speech was the most capitalist speech to be ever read by an FM. The word 'poor' occurs only twice in para 6 & we thank FM for remembering that there are poor people in this country; people will reject this capitalist budget: Former FM &Congress leader P Chidambaram pic.twitter.com/NHBTlO46Pv
ಕಪ್ಪು ಹಣವನ್ನು ತರಲು ನಾವು ಪ್ರತಿ ಖಾತೆಯ ಮೂಲಕ ಕೆಲಸ ಮಾಡುತ್ತಿದ್ದೇವೆ!
2018ರ ನಂತರ ವಿದೇಶಗಳಿಂದ ಕಪ್ಪುಹಣದ ಮಾಹಿತಿ ಹಂಚಿಕೆಯಾಗುತ್ತಿದೆ. ಈ ಮಾಹಿತಿಯ ಆಧಾರದ ಮೇಲೆ, ಕಪ್ಪು ಹಣವನ್ನು ತರಲು ನಾವು ಪ್ರತಿ ಖಾತೆಯ ಮೂಲಕ ಕೆಲಸ ಮಾಡುತ್ತಿದ್ದೇವೆ. ಬ್ಯಾಂಕ್ಗಳಲ್ಲಿ ಎನ್ಪಿಎ ಕಡಿಮೆಯಾಗುತ್ತಿದೆ, ದೇಶದಿಂದ ಪಲಾಯನ ಮಾಡಿದವರ ಹಣವನ್ನು ಬ್ಯಾಂಕ್ಗಳು ವಾಪಸ್ ಪಡೆಯುತ್ತಿವೆ: ಎನ್. ಸೀತಾರಾಮನ್
Feb 01, 2022, 5:08 pm IST
ಹಣದುಬ್ಬರ 6% ಮೀರಲು ಬಿಡಲಿಲ್ಲ: ನಿರ್ಮಲಾ ಸೀತಾರಾಮನ್
ಈ (ನಿರುದ್ಯೋಗ ಮತ್ತು ಹಣದುಬ್ಬರ) ಸಮಸ್ಯೆಗಳನ್ನು ನಿಭಾಯಿಸಲು ನಾವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನಮ್ಮ ಸರ್ಕಾರ ಹಣದುಬ್ಬರ ಎರಡಂಕಿಗೆ ಹೋಗಲು ಬಿಡಲಿಲ್ಲ. ಹೌದು, ಇದು ತಿಂಗಳಿಗೆ 6% ಮಿತಿಯನ್ನು ಉಲ್ಲಂಘಿಸಿದೆ, ಆದ್ರೂ ಅದನ್ನು ಎಂದಿಗೂ ದಾಟಲು ಬಿಡಲಿಲ್ಲ. ಆದಾಗ್ಯೂ, 2014 ರ ಮೊದಲು ಇದು ಯಾವಾಗಲೂ 10,11,12,13 ರ ವ್ಯಾಪ್ತಿಯಲ್ಲಿತ್ತು: ಹಣಕಾಸು ಸಚಿವೆ
Feb 01, 2022, 5:05 pm IST
ಹಣಕಾಸು ವರ್ಷ 2025-26 ಅಥವಾ 2026-27ರಲ್ಲಿ ಭಾರತದ ಜಿಡಿಪಿ 5 ಟ್ರಿಲಿಯನ್ ಡಾಲರ್ ತಲುಪುವ ಸಾಧ್ಯತೆ: ಹಣಕಾಸು ಸಚಿವಾಲಯ
Feb 01, 2022, 5:02 pm IST
ಸ್ಟಾರ್ಟ್ಅಪ್ಗಳು ಯುನಿಕಾರ್ನ್ ಆಗಲು ಕಾರಣ
ಖಾಸಗಿ ಇಕ್ವಿಟಿ ಫಂಡ್ಗಳು ಮತ್ತು ಸಾಹಸೋದ್ಯಮ ಬಂಡವಾಳಶಾಹಿಗಳು ಅನೇಕ ಸ್ಟಾರ್ಟ್ಅಪ್ಗಳು ಯುನಿಕಾರ್ನ್ ಆಗಲು ಒಂದು ಕಾರಣ: ನಿರ್ಮಲಾ ಸೀತಾರಾಮನ್
Feb 01, 2022, 4:48 pm IST
ಕೋವಿಡ್-19 ಉದ್ಯೋಗದ ಮೇಲೆ ಪರಿಣಾಮ ಬೀರಿದೆ
ಕೋವಿಡ್ -19 ಸಾಂಕ್ರಾಮಿಕವು ಖಂಡಿತವಾಗಿಯೂ ಉದ್ಯೋಗಗಳ ಮೇಲೆ ಪರಿಣಾಮ ಬೀರಿದೆ . ಆದರೆ ಕೇಂದ್ರ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಜನರು ಯಶಸ್ವಿಯಾಗಿ ಚೇತರಿಸಿಕೊಳ್ಳಲು ಸಹಾಯ ಮಾಡಲು ಪ್ರಯತ್ನಿಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Feb 01, 2022, 4:44 pm IST
ಬಜೆಟ್ ಅನ್ನು ಮೊದಲು ಅರ್ಥ ಮಾಡಿಕೊಳ್ಳಿ!
ರಾಹುಲ್ ಗಾಂಧಿಯವರ 'Zer0 ಮೊತ್ತದ ಬಜೆಟ್' ಎಂಬ ಹೇಳಿಕೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ "ದಯವಿಟ್ಟು ಬಜೆಟ್ ಅನ್ನು ಅರ್ಥಮಾಡಿಕೊಳ್ಳಿ" ಎಂದು ಹೇಳಿದರು. ತುಂಬಾ ಹಳೆಯದಾದ ಪಕ್ಷದ ಹಿರಿಯ ರಾಜಕಾರಣಿಯಾಗಿ ''ಬೇಜವಾಬ್ದಾರಿ'' ಕಾಮೆಂಟ್ ಮಾಡದಿರಿ ಎಂದು ಹೇಳಿದರು.
Feb 01, 2022, 4:26 pm IST
ಈ ವರ್ಷದ ಬಜೆಟ್ ಕಳೆದ ವರ್ಷದ ಸಮಗ್ರ ಕಾರ್ಯಸೂಚಿಯ ಮುಂದುವರಿಕೆಯಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
READ MORE
7:11 PM, 31 Jan
ಕೃಷಿ ಮತ್ತು ಸಂಬಂಧಿತ ವಲಯಗಳು ಸಾಂಕ್ರಾಮಿಕ ರೋಗದಿಂದ ಕಡಿಮೆ ಪ್ರಭಾವ ಬೀರಿವೆ ಮತ್ತು ಹಿಂದಿನ ವರ್ಷದಲ್ಲಿ 3.6 ಪ್ರತಿಶತದಷ್ಟು ಆರ್ಥಿಕ ಬೆಳವಣಿಗೆ ಬೆಳೆದ ನಂತರ 2021-22 ರಲ್ಲಿ ಈ ಕ್ಷೇತ್ರವು 3.9 ಪ್ರತಿಶತದಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ವರದಿ ಹೇಳುತ್ತದೆ.
7:11 PM, 31 Jan
ಆರ್ಥಿಕ ಸಮೀಕ್ಷೆಯ ಪ್ರಕಾರ, ಸಾಂಕ್ರಾಮಿಕ ರೋಗದಿಂದ ಸೇವಾ ವಲಯವು ಹೆಚ್ಚು ಹಾನಿಗೊಳಗಾಗಿದೆ. ವಿಶೇಷವಾಗಿ ಮಾನವ ಸಂಪರ್ಕವನ್ನು ಒಳಗೊಂಡಿರುವ ವಿಭಾಗಗಳು. ಈ ವಲಯವು ಕಳೆದ ವರ್ಷದ 8.4 ರಷ್ಟು ಸಂಕೋಚನದ ನಂತರ ಈ ಹಣಕಾಸು ವರ್ಷದಲ್ಲಿ 8.2ರಷ್ಟು ಬೆಳೆಯುತ್ತದೆ ಎಂದು ಅಂದಾಜಿಸಲಾಗಿದೆ.
7:12 PM, 31 Jan
ಡಿಜಿಟಲ್ ರೂಪಕ್ಕೆ ಮತ್ತಷ್ಟು ಪುಷ್ಠಿ ನೀಡುವ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಅನ್ನು ಸಿದ್ಧಪಡಿಸಲಾಗಿದೆ. 'ಯೂನಿಯನ್ ಬಜೆಟ್' ಹೆಸರಿನಲ್ಲಿ ಮೊಬೈಲ್ ಅಪ್ಲಿಕೇಶನ್ ಲಭ್ಯವಿರಲಿದ್ದು, ರಾಷ್ಟ್ರೀಯ ಮಾಹಿತಿ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಇದನ್ನು ಅಭಿವೃದ್ಧಿಪಡಿಸಿದೆ. ಸಂಸತ್ನಲ್ಲಿ ಬಜೆಟ್ ಮಂಡನೆಯಾದ ಬಳಿಕ ಈ ಅಪ್ಲಿಕೇಶನ್ನಲ್ಲಿ ಪ್ರತಿಯು ಲಭ್ಯವಾಗಲಿದೆ.
7:13 PM, 31 Jan
ಕಾಗದ ರಹಿತ ಬಜೆಟ್ ಎರಡನೇ ಬಾರಿಗೆ ಮಂಡನೆ ಮಾಡಲಿದ್ದಾರೆ. ಕೇಂದ್ರ ಬಜೆಟ್ ಪ್ರತಿಯು ಮೊಬೈಲ್ ಅಪ್ಲಿಕೇಶನ್ನಲ್ಲಿ ಲಭ್ಯವಿರುತ್ತದೆ. ಕಳೆದ ಬಾರಿ ಆಯವ್ಯಯಕ್ಕೆ ಹೋಲಿಸಿದರೆ 2022-23ನೇ ಸಾಲಿನ ಬಜೆಟ್ ಹಲವು ವಿಶೇಷತೆಗಳನ್ನು ಒಳಗೊಂಡಿದೆ.
6:19 AM, 1 Feb
ಬಜೆಟ್ ಮಂಡನೆಗೆ ಸಮಯ ನಿಗದಿ
ಫೆಬ್ರವರಿ 1 (ಮಂಗಳವಾರ) ಬೆಳಗ್ಗೆ 11ಕ್ಕೆ ಕೇಂದ್ರ ಬಜೆಟ್ 2022-23 ಮಂಡನೆಗೆ ಸಮಯ ನಿಗದಿಯಾಗಿದೆ. ಬಜೆಟ್ ಮಂಡನೆಯ ಅವಧಿ 90 ರಿಂದ 120 ನಿಮಿಷ ತನಕ ಇರಲಿದೆ.
7:18 AM, 1 Feb
ಎಸ್ಬಿಐ ಗ್ರಾಹಕರಿಗೆ ಸೂಚನೆ
ಬ್ಯಾಂಕ್ ಗ್ರಾಹಕರು IMPS ಮೂಲಕ ಈ ಸೌಲಭ್ಯದಲ್ಲಿ ಕನಿಷ್ಠ ಒಂದು ರೂಪಾಯಿಯಿಂದ 5 ಲಕ್ಷ ರೂ ವರ್ಗಾವಣೆ ಮಾಡಬಹುದಾಗಿದೆ. ಫೆಬ್ರವರಿ 1 ರಿಂದ ಆಫ್ ಲೈನ್ ಸೌಲಭ್ಯ ಬಳಕೆಗೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆನ್ ಲೈನ್, ಯೋನೋ ಆಪ್, ಇಂಟರ್ನೆಟ್ ಬ್ಯಾಂಕ್ ಮೂಲಕ ಈ ಸೌಲಭ್ಯ ಉಚಿತವಾಗಿ ಬಳಸಬಹುದು.
7:29 AM, 1 Feb
ಕೇಂದ್ರ ಬಜೆಟ್ ಮಂಡನೆಗೆ ವಿತ್ತ ಸಚಿವೆ ಸಜ್ಜು
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್; ಕೋವಿಡ್ ಭೀತಿ, ಐದು ರಾಜ್ಯಗಳ ಚುನಾವಣೆ ನಡುವೆ ಬಜೆಟ್ ಮೇಲೆ ಭರಪೂರ ನಿರೀಕ್ಷೆ; ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ 10ನೇ ಬಜೆಟ್ ಇದಾಗಿದೆ
ಎತ್ತಿನಹೊಳೆ, ಮಹಾದಾಯಿ ಕೃಷ್ಣಾ, ಭದ್ರಾ, ಮೇಕೆದಾಟು ಯೋಜನೆಗೆ ಅನುದಾನ ನಿರೀಕ್ಷೆ; ರಾಜ್ಯದ ಬಂದರುಗಳಲ್ಲಿ ಖಾಸಗಿ ಹೂಡಿಕೆ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುದಾನ; ಸಬ್ ಅರ್ಬನ್ ರೈಲು, ಚೆನ್ನೈ-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆಗೆ ಅನುದಾನ
7:54 AM, 1 Feb
ವಿತ್ತೀಯ ಕೊರತೆ
ಹೂಡಿಕೆದಾರರು ಮತ್ತು ಅರ್ಥಶಾಸ್ತ್ರಜ್ಞರು 2022-23 ರ ವಿತ್ತೀಯ ಕೊರತೆಯು ಸುಮಾರು 6.2% ಎಂಬ ನಿರೀಕ್ಷೆ ಹೊಂದಿದ್ದಾರೆ.
8:00 AM, 1 Feb
ಬಜೆಟ್ನಲ್ಲಿ ಸೆಕ್ಷನ್ 80ಸಿ ಮಿತಿ ಹೆಚ್ಚಾಗುತ್ತಾ?
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವರ್ಷದ ಬಜೆಟ್ನಲ್ಲಿ ಸೆಕ್ಷನ್ 80 ಸಿ ಮಿತಿಯನ್ನು ಹೆಚ್ಚಿಸಲಿದ್ದಾರೆ ಎಂಬ ನಿರೀಕ್ಷೆಯಿದೆ.
8:24 AM, 1 Feb
ಸಚಿವ ಭಾಗವತ್ ಕರದ್ ಪ್ರಾರ್ಥನೆ
ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2022 ಮಂಡಿಸುವ ಮುನ್ನ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ಅವರು ತಮ್ಮ ನಿವಾಸದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಕೇಂದ್ರ ಬಜೆಟ್ 2022 ಮಂಡನೆ ದಿನದಂದು ಇಂಧನ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
8:40 AM, 1 Feb
ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಯೊಂದು ಕ್ಷೇತ್ರಗಳ ಅಗತ್ಯಗಳಿಗೆ ಅನುಗುಣವಾಗಿ ಅಂತರ್ಗತ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಎಲ್ಲರಿಗೂ ಪ್ರಯೋಜನಕಾರಿಯಾಗಲಿದೆ...ಎಲ್ಲಾ ವಲಯಗಳು (ರೈತರು ಸೇರಿದಂತೆ) ಇಂದಿನ ಬಜೆಟ್ನಿಂದ ನಿರೀಕ್ಷೆಗಳನ್ನು ಹೊಂದಿರಬೇಕು: ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ
Finance Minister Nirmala Sitharaman will present an inclusive budget, in line with each and every sectors' needs. It will be benefiting everyone...All sectors (including farmers) should have expectations from today's budget: MoS Finance Pankaj Chaudhary pic.twitter.com/dTPAkNBfU8
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದಾರೆ. ಅವರು ಇಂದು ಕೇಂದ್ರ ಬಜೆಟ್ 2022 ಅನ್ನು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.
Delhi: Union Finance Minister Nirmala Sitharaman arrives at the Ministry of Finance. She will present the #Budget2022 today in Parliament. pic.twitter.com/caWX7MVQbd
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯದಿಂದ ನಿರ್ಗಮಿಸಿದ್ದಾರೆ. ಅವರು ಸಾಂಪ್ರದಾಯಿಕ 'ಬಹಿ ಖಾತಾ' ಬದಲಿಗೆ ಟ್ಯಾಬ್ ಮೂಲಕ ಸಂಸತ್ತಿನಲ್ಲಿ ಬಜೆಟ್2022 ಅನ್ನು ಪ್ರಸ್ತುತಪಡಿಸಲಿದ್ದಾರೆ.
Delhi: Union Finance Minister Nirmala Sitharaman leaves from the Ministry of Finance.
ರಾಷ್ಟ್ರಪತಿ ಕೋವಿಂದ್ ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್
9:27 AM, 1 Feb
ಬಜೆಟ್ ದಿನ ಷೇರುಪೇಟೆ ಶುಭಾರಂಭ
ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 550 ಪಾಯಿಂಟ್ಗಳ ಜಿಗಿತ; ನಿಫ್ಟಿ ಟಾಪ್ 17,500; ಟಾಟಾ ಸ್ಟೀಲ್, ಎಚ್ಸಿಎಲ್ ಟೆಕ್ ತಲಾ ಶೇ.2ರಷ್ಟು ಏರಿಕೆ
9:43 AM, 1 Feb
ಬಜೆಟ್ ಭಾಷಣ ನೇರ ಪ್ರಸಾರ
ವಾರ್ತಾ ಮತ್ತು ಪ್ರಸಾರ ಇಲಾಖೆ ಯೂಟ್ಯೂಬ್ ವಾಹಿನಿ, ಸಂಸದ್ ಟಿವಿ, ದೂರದರ್ಶನ ಮೂಲಕ ಬಜೆಟ್ ಭಾಷಣ ನೇರ ಪ್ರಸಾರ ವೀಕ್ಷಿಸಿ
9:50 AM, 1 Feb
ರಾಷ್ಟ್ರಪತಿ ರಾಮನಾಥ್ ಕೋವಿಂದ್ರನ್ನ ಭೇಟಿಯಾದ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2022-23 ಅನ್ನು ಮಂಡಿಸುವ ಮೊದಲು, ವಿತ್ತ ಖಾತೆ ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್ರಾವ್ ಕರಾಡ್, ಶ್ರೀ ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು.
Union Finance Minister Nirmala Sitharaman along with Ministers of State for Finance, Dr Bhagwat Kishanrao Karad, Shri Pankaj Chaudhary, and senior officials of the Ministry of Finance, called on President Ram Nath Kovind before presenting the Union Budget 2022-23. pic.twitter.com/7JNZt3rOPj
ಸಂಸತ್ತಿನಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರೈಲ್ವೆ, ಸಂಪರ್ಕ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಭೆಯಲ್ಲಿ ಭಾಗಿಯಾಗಿದ್ರು.
10:42 AM, 1 Feb
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ
ನ್ಯಾಷನಲ್ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ವಾಣಿಜ್ಯ 19-ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗಳಷ್ಟು ಕಡಿಮೆಗೊಳಿಸಿವೆ, ಹೊಸದ ದರಗಳು ಇಂದಿನಿಂದಲೇ (ಫೆಬ್ರವರಿ 1) ಜಾರಿಗೆ ಬರಲಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1907 ರೂ ಆಗಲಿದೆ.
11:01 AM, 1 Feb
ಕೇಂದ್ರ ಬಜೆಟ್ ಮಂಡನೆ ಆರಂಭ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ.
11:07 AM, 1 Feb
ಜನರ ಕಲ್ಯಾಣವೇ ನಮ್ಮ ಧ್ಯೇಯ
2014ರಿಂದ ಜನರ ಕಲ್ಯಾಣವೇ ನಮ್ಮ ಧ್ಯೇಯವಾಗಿದೆ. ಮಧ್ಯಮ ವರ್ಗದ ಪರಿಸ್ಥಿತಿಯನ್ನ ಉತ್ತಮಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಮುಂದಿನ 25 ವರ್ಷಗಳಿಗೆ ಸರ್ಕಾರದ ಬ್ಲ್ಯೂ ಪ್ರಿಂಟ್ ತಯಾರಿದೆ: ನಿರ್ಮಲಾ ಸೀತಾರಾಮನ್
11:09 AM, 1 Feb
2022ರಲ್ಲಿ ಆರ್ಥಿಕತೆ ಶೇ. 9.2ರಷ್ಟು ಬೆಳವಣಿಗೆ
2022 ರಲ್ಲಿ ದೇಶದ ಆರ್ಥಿಕತೆ ಶೇಕಡಾ 9.2ರಷ್ಟು ಬೆಳವಣಿಗೆ ಅಂದಾಜಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಅವಧಿಯಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯಾಗುವ ಗುರಿ
11:11 AM, 1 Feb
ಎಲ್ಐಸಿ ಐಪಿಒ ಸದ್ಯದಲ್ಲೇ ಆರಂಭ
ಬಹುನಿರೀಕ್ಷಿತ ಎಲ್ಐಸಿ ಐಪಿಒ ಕೆಲವೇ ವಾರಗಳಲ್ಲಿ ಆರಂಭಗೊಳ್ಳಲಿದ್ದು, ಏರ್ ಇಂಡಿಯಾ ಮೇಲಿನ ಬಂಡವಾಳ ಸಂಪೂರ್ಣ ಹಿಂತೆಗೆತವಾಗಿದೆ.
11:12 AM, 1 Feb
ವ್ಯಾಕ್ಸಿನೇಷನ್ ಅಭಿಯಾನದ ವೇಗದಿಂದ ಸಹಾಯವಾಗಿದೆ
ನಾವು ಓಮಿಕ್ರಾನ್ ಅಲೆಯ ಮಧ್ಯೆ ಇದ್ದೇವೆ, ನಮ್ಮ ವ್ಯಾಕ್ಸಿನೇಷನ್ ಅಭಿಯಾನದ ವೇಗವು ಹೆಚ್ಚು ಸಹಾಯ ಮಾಡಿದೆ. ‘ಸಬ್ಕಾ ಪ್ರಯಾಸ್’, ನಾವು ಬಲವಾದ ಬೆಳವಣಿಗೆಯೊಂದಿಗೆ ಮುಂದುವರಿಯುತ್ತೇವೆ ಎಂದು ನನಗೆ ವಿಶ್ವಾಸವಿದೆ: ನಿರ್ಮಲಾ ಸೀತಾರಾಮನ್