ಸಂಸದ ಪ್ರತಾಪ್ ಸಿಂಹ ವಿರುದ್ಧ ಭುಗಿಲೆದ್ದ ಆಕ್ರೋಶ, ಎಲ್ಲೆಲ್ಲೂ ಹೋರಾಟ!
ಪಾರ್ಲಿಮೆಂಟ್ ಒಳಗಡೆ ಇಂದು ನಡೆದ ಘಟನೆ ಆಕ್ರೋಶದ ಕಿಚ್ಚು ಹೊತ್ತಿಸಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ 8ನೇ ದಿನ ಭದ್ರತೆಯ ಉಲ್ಲಂಘನೆ ಆಗಿದೆ. ಯುವಕರು ಲೋಕಸಭೆ ಸಂದರ್ಶಕರ ಗ್ಯಾಲರಿಯಿಂದ ಕೆಳಗೆ ಜಿಗಿದು ಸಂಸತ್ತಿನ ಭದ್ರತಾ ನಿಯಮ ಛಿದ್ರಗೊಳಿಸಿರುವುದು, ಎಲ್ಲೆಲ್ಲೂ ಆಕ್ರೋಶ ಮೊಳಗುವಂತೆ ಮಾಡಿದೆ. ಇಷ್ಟೆಲ್ಲದರ ನಡುವೆ ಕರ್ನಾಟಕದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೂಡ ಆಕ್ರೋಶ ಮೊಳಗಿದೆ.
ಹೌದು, ಆರೋಪಿಗಳು ಕರ್ನಾಟಕ ಸಂಸದರಾದ ಪ್ರತಾಪ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿ ವಿಸಿಟರ್ ಪಾಸ್ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಹೀಗೆ ಇದೇ ವಿಚಾರವನ್ನು ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಈಗ ಬಿಜೆಪಿ ವಿರುದ್ದವೂ ಹೋರಾಟ ಆರಂಭಿಸಿವೆ. ಇದರ ಜೊತೆ, ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಪ್ರತಿಭಟನೆಯ ಬಿರುಗಾಳಿ ಸೃಷ್ಟಿಯಾಗಿದೆ. ಹಾಗೇ ಸೋಷಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಅವರ ಹೆಸರು ಟ್ರೆಂಡ್ ಆಗುತ್ತಿದೆ.

ಎಲ್ಲೆಲ್ಲೂ ಸಿಂಹ.. ಸಿಂಹ..!
ಅಂದಹಾಗೆ ಸೋಷಿಯಲ್ ಮೀಡಿಯಾದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶದ ಬಿರುಗಾಳಿ ಎದ್ದಿದೆ. ಹೀಗೆ ಅಪರಿಚಿತರು ಸಂಸತ್ ಭವನದ ಒಳಗೆ ನುಗ್ಗಲು ಪ್ರತಾಪ್ ಸಿಂಹ ಅವರೇ ಪ್ರಮುಖ ಕಾರಣ ಅಂತಾ ಆರೋಪ ಮಾಡಲಾಗುತ್ತಿದೆ. ಈ ಮೂಲಕ ಮಾಜಿ ಪತ್ರಕರ್ತ ಹಾಗೂ ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಕೆಲವರು ಸಂಸದ ಪ್ರತಾಪ್ ಸಿಂಹ ವಿರುದ್ಧ, ಇಂದಿನ ಘಟನೆ ಆಧಾರದಲ್ಲಿ ಆರೋಪ ಮಾಡುತ್ತಿದ್ದರೆ ಇದೇ ವೇಳೆ ಇನ್ನೂ ಕೆಲವರು ಪ್ರತಾಪ್ ಸಿಂಹ ಪರ ನಿಂತಿದ್ದಾರೆ.
ಎಲ್ಲೆಲ್ಲೂ ಭಯದ ವಾತಾವರಣ
ಪ್ರಜಾಪ್ರಭುತ್ವದ ತವರು ಭಾರತ ದೇಶದ ಹೃದಯ ಅಂತಾನೆ ಕರೆಯುವ ಸಂಸತ್ ಭವನದ ಒಳಗೆ ಇಂತಹ ಘಟನೆ ನಡೆದಿರುವುದು ಸಹಜವಾಗಿ ಆತಂಕ ಸೃಷ್ಟಿ ಮಾಡಿದೆ. ಇದರ ಜತೆಗೆ ಪ್ರತಿಭಟನೆಗಳು ಕೂಡ ಆರಂಭವಾಗಿವೆ. ಇನ್ನು ಸಮಗ್ರ ತನಿಖೆ ನಡೆಯಲಿ ಎಂಬ ಮಾತನ್ನ ಕೂಡ ಹೇಳುತ್ತಿದ್ದಾರೆ ಸೋಷಿಯಲ್ ಮೀಡಿಯಾ ಬಳಕೆದಾರರು. ಇಷ್ಟೆಲ್ಲದರ ನಡುವೆ ಈ ಘಟನೆ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ದೊಡ್ಡ ಸದ್ದು ಮಾಡುತ್ತಿದೆ. ಹಾಗೇ ಅಂತಾರಾಷ್ಟ್ರೀಯ ಮಾಧ್ಯಮಗಳು ಈ ವಿಚಾರವಾಗಿ ಚರ್ಚೆ ಆರಂಭಿಸಿವೆ.

ಒಟ್ನಲ್ಲಿ ಇಂದು ಸಂಸತ್ ಭವನದಲ್ಲಿ ನಡೆದ ಘಟನೆ ಖಂಡನೀಯ. ಅಲ್ಲದೆ ಭಾರತ ದೇಶದ ಹೃದಯ ಎಂದೇ ಕರೆಯಲಾಗುವ ಸಂಸತ್ ಭವನದ ಒಳಗೆ ಅಪರಿಚಿತ ವ್ಯಕ್ತಿಗಳು ನಡೆಸಿದ ಕೃತ್ಯ ಸಾಕಷ್ಟು ಚರ್ಚೆಗೆ ಕೂಡ ಗ್ರಾಸವಾಗಿದೆ. ಹಾಗೇ ಅವರ ವಿರುದ್ಧ ಕಠಿಣ ಕ್ರಮಕ್ಕಾಗಿ, ರಣಕಹಳೆ ಮೊಳಗಿದೆ. ಹೀಗಾಗಿ ಈ ವಿಚಾರ ದೇಶಾದ್ಯಂತ ರಾಜಕೀಯದ ಕಿಡಿ ಹೊತ್ತಿಸುವ ಮುನ್ಸೂಚನೆ ಕೂಡ ಗೋಚರಿಸುತ್ತಿದೆ.
-
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications