ಲಾಕ್ಡೌನ್ನಿಂದಾಗಿ 37-78 ಸಾವಿರ ಜನರ ಮರಣ ನಿಯಂತ್ರಣ: ಆರೋಗ್ಯ ಸಚಿವ
ನವದೆಹಲಿ, ಸೆಪ್ಟೆಂಬರ್ 14: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಹಾಗೂ ಅದರ ಸಂಬಂಧಿ ಮರಣ ಪ್ರಕರಣಗಳು ನಿಯಂತ್ರಣದಲ್ಲಿವೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಲೋಕಸಭೆಗೆ ತಿಳಿಸಿದ್ದಾರೆ.
ಸೋಮವಾರ ಆರಂಭವಾದ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ಅವರು, ಗರಿಷ್ಠ ಪ್ರಕರಣಗಳು ಮತ್ತು ಸಾವುಗಳು ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಬಿಹಾರ, ತೆಲಂಗಾಣ, ಒಡಿಶಾ, ಅಸ್ಸಾಂ, ಕೇರಳ ಮತ್ತು ಗುಜರಾತ್ಗಳಲ್ಲಿ ವರದಿಯಾಗಿವೆ. ಈ ಎಲ್ಲ ರಾಜ್ಯಗಳಲ್ಲಿಯೂ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.
ಕೋವಿಡ್ 19 ನಿರ್ವಹಣೆಯ ಪ್ರಯತ್ನದಲ್ಲಿ ಭಾರತವು ಪ್ರತಿ ಮಿಲಿಯನ್ ಕೊರೊನಾ ವೈರಸ್ ಪ್ರಕರಣಗಳಿಗೆ 3,328 ಮರಣಗಳು ಹಾಗೂ ಪ್ರತಿ ಒಂದು ಮಿಲಿಯನ್ ಜನಸಂಖ್ಯೆಗೆ 55 ಸಾವುಗಳಿಗೆ ನಿಯಂತ್ರಿಸುವಲ್ಲಿ ಸಫಲವಾಗಿದೆ. ಇದೇ ರೀತಿ ಕೊರೊನಾ ವೈರಸ್ಗೆ ತುತ್ತಾದ ಜಗತ್ತಿನ ದೇಶಗಳಿಗೆ ಹೋಲಿಸಿದರೆ ನಮ್ಮದು ಕಡಿಮೆ ಮರಣ ಪ್ರಮಾಣ ಇರುವ ದೇಶಗಳಲ್ಲಿ ಒಂದು ಎಂದು ತಿಳಿಸಿದ್ದಾರೆ. ಮುಂದೆ ಓದಿ.

ಲಾಕ್ಡೌನ್ ಗಟ್ಟಿಯಾದ ನಿರ್ಧಾರ
ರಾಷ್ಟ್ರವ್ಯಾಪಿ ಲಾಕ್ಡೌನ್ ಬಹಳ ಗಟ್ಟಿತನ ನಿರ್ಧಾರ ಎಂದು ಬಣ್ಣಿಸಿದ ಹರ್ಷವರ್ಧನ್, ಕೋವಿಡ್ ಸಂಬಂಧಿತ ತುರ್ತು ಸಂದರ್ಭಗಳಿಗಾಗಿ ಮಾಹಿತಿ ನಿರ್ಧಾರಗಳನ್ನು ತೆಗೆದುಕೊಳ್ಳಲು 11 ಸ್ವಶಕ್ತ ಗುಂಪುಗಳನ್ನು ರಚಿಸಲಾಗಿದೆ.ಕೋವಿಡ್ 19 ನಿಯಂತ್ರಣಕ್ಕೆ ಜಾರಿ ಮಾಡಿದ ನಾಲ್ಕು ತಿಂಗಳ ಲಾಕ್ಡೌನ್ನಿಂದ 14-29 ಲಕ್ಷ ಪ್ರಕರಣಗಳು ಮತ್ತು 37-78,000 ಮರಣಗಳನ್ನು ತಡೆದಿವೆ. ಈ ನಾಲ್ಕು ತಿಂಗಳನ್ನು ಆರೋಗ್ಯ ಮೂಲಸೌಕರ್ಯ, ಮಾನವ ಸಂಪನ್ಮೂಲ ವೃದ್ಧಿ ಮತ್ತು ದೇಶದೊಳಗೆ ಪಿಪಿಇ, ಎನ್ 95 ಮಾಸ್ಕ್ ಮತ್ತು ವೆಂಟಿಲೇಟರ್ಗಳಂತಹ ಪ್ರಮುಖ ವಸ್ತುಗಳ ಉತ್ಪಾದನೆ ಮಾಡಲು ಬಳಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಗೆ ಕೊಕ್
ಅಧಿವೇಶನದ ಆರಂಭದಲ್ಲಿ ಸಚಿವ ಪ್ರಹ್ಲಾದ್ ಜೋಷಿ ಪ್ರಶ್ನೋತ್ತರ ಕಲಾಪವನ್ನು ತೆಗೆದುಹಾಕುವ ನಿರ್ಣಯವನ್ನು ಮಂಡಿಸಿದರು. ಜತೆಗೆ ಖಾಸಗಿ ಸದಸ್ಯರ ವ್ಯವಹಾರವನ್ನು ಮಂಡಿಸಿದರು. ಇದಕ್ಕೆ ವಿರೋಧಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರಶ್ನೋತ್ತರ ವೇಳೆ ಸುವರ್ಣ ಸಮಯ. ಅದನ್ನು ತೆಗೆದುಹಾಕುವುದು ಪ್ರಜಾಪ್ರಭುತ್ವದ ಕತ್ತು ಹಿಸುಕಿದಂತೆ ಎಂದು ಟೀಕಿಸಿದರು.

ಭಾರತ-ಚೀನಾ ವಿವಾದ ಚರ್ಚೆ ಇಲ್ಲ
ಪ್ರಶ್ನೋತ್ತರ ಕಲಾಪವು ಸಂವಿಧಾನದ ಮೂಲ ಸಂರಚನೆಯ ಭಾಗ ಎಂದು ಅಸಾದುದ್ದೀನ್ ಓವೈಸಿ ಹೇಳಿದರು. ಶೂನ್ಯ ಅವಧಿಯಲ್ಲಿ ಡಿಎಂಕೆ ಸಂಸದ ಟಿಆರ್ ಬಾಲು, ನೀಟ್ ಪರೀಕ್ಷೆ ಬರೆಯಬೇಕಿದ್ದ ಗ್ರಾಮೀಣ ಭಾಗದ ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆಗಳನ್ನು ಪ್ರಸ್ತಾಪಿಸಿದರು. ಭಾರತ ಮತ್ತು ಚೀನಾ ಗಡಿ ಉದ್ವಿಗ್ನತೆಯ ಬಗ್ಗೆ ಕಾಂಗ್ರೆಸ್ನ ಅಧೀರ್ ರಂಜನ್ ಚೌಧುರಿ ಪ್ರಸ್ತಾಪಿಸಲು ಮುಂದಾದಾಗ ಅದು ಬಹಳ ಸಂವೇನಾಕಾರಿ ಸಂಗತಿ ಎಂದು ಸ್ಪೀಕರ್ ಓಂ ಬಿರ್ಲಾ ಅಡ್ಡಿಪಡಿಸಿದರು.
Recommended Video

ಹಣಕಾಸು ಗೊತ್ತುವಳಿ ಮಂಡನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 2020-21ರ ಮೊದಲ ಭಾಗದ ಅನುದಾನಗಳಿಗೆ ಪೂರಕ ಬೇಡಿಕೆ ಹಾಗೂ 2016-17ನೇ ಸಾಲಿನ ಹೆಚ್ಚುವರಿ ಅನುದಾನದ ಬೇಡಿಕೆಯ ನಿಲುವಳಿಗಳನ್ನು ಮಂಡಿಸಿದರು. ಜತೆಗೆ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ 2020ಯನ್ನು ಹಿಂದಕ್ಕೆ ಪಡೆಯುವ ನಡೆ ಮಂಡಿಸಿದರು. ಅದಕ್ಕೆ ವಿರೋಧ ವ್ಯಕ್ತವಾದರೂ ಮಸೂದೆಯನ್ನು ಹಿಂಪಡೆಯಲಾಯಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications