ಚುನಾವಣೆಯಲ್ಲಿ ಸ್ಪರ್ಧಿಸುವ ವಯಸ್ಸು 18 ವರ್ಷಕ್ಕೆ ಇಳಿಸಲು ಮನವಿ: ಚುನಾವಣಾ ಆಯೋಗ ಹೇಳಿದ್ದೇನು
ರಾಷ್ಟ್ರೀಯ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸನ್ನು 25 ವರ್ಷದಿಂದ 18 ವರ್ಷಕ್ಕೆ ಇಳಿಸಲು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ರಾಜಕೀಯದಲ್ಲಿ ಯುವ ಜನತೆ ಹೆಚ್ಚಾಗಿ ಭಾಗವಹಿಸಬೇಕು ಎನ್ನುವ ಉದ್ದೇಶದಿಂದ ಈ ಮನವಿ ಮಾಡಲಾಗಿದೆ.
ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ನೇತೃತ್ವದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಯು ಶುಕ್ರವಾರ ಸಂಸತ್ತಿನಲ್ಲಿ ಮಂಡಿಸಿದ "ಚುನಾವಣಾ ಪ್ರಕ್ರಿಯೆಯ ನಿರ್ದಿಷ್ಟ ಅಂಶಗಳು ಮತ್ತು ಅವುಗಳ ಸುಧಾರಣೆ" ಕುರಿತ 132 ನೇ ವರದಿಯಲ್ಲಿ ಈ ಶಿಫಾರಸು ಮಾಡಲಾಗಿದೆ.

"ಚುನಾವಣೆಗಳಲ್ಲಿ ಉಮೇದುವಾರಿಕೆಗೆ ಕನಿಷ್ಠ ವಯಸ್ಸಿನ ಅಗತ್ಯವನ್ನು ಕಡಿಮೆ ಮಾಡುವುದರಿಂದ ಯುವ ವ್ಯಕ್ತಿಗಳಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶಗಳನ್ನು ನೀಡುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. ಇದರಿಂದ ಯುವಜನರಲ್ಲಿ ಹೆಚ್ಚಿನ ರಾಜಕೀಯ ಪ್ರಜ್ಞೆ ಮೂಡುತ್ತದೆ, ಮತ್ತು ಯುವ ಪ್ರಾತಿನಿಧ್ಯದ ಅನುಕೂಲಗಳನ್ನು ಹೆಚ್ಚಿಸುತ್ತದೆ. ಕೆನಡಾ, ಯುನೈಟೆಡ್ ಕಿಂಗ್ಡಮ್ ಮತ್ತು ಆಸ್ಟ್ರೇಲಿಯಾದಂತಹ ವಿವಿಧ ದೇಶಗಳ ರಾಜಕೀಯ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಮಿತಿ ಈ ಮನವಿ ಮಾಡಿದೆ. ಈ ರಾಷ್ಟ್ರಗಳಲ್ಲಿ ಯುವಕರು ರಾಜಕೀಯದಲ್ಲಿ ತೊಡಗಿಸಿಕೊಂಡ ಬಗ್ಗೆ ಪರಿಶೀಲನೆ ಮಾಡಿದೆ.
ಜಾಗತಿಕ ಮಟ್ಟದಲ್ಲಿ ಫ್ರೈಡೇಸ್ ಫಾರ್ ಫ್ಯೂಚರ್ (ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ನೇತೃತ್ವದ) ಮತ್ತು ಮಾರ್ಚ್ ಫಾರ್ ಅವರ್ ಲೈವ್ಸ್ (ಬಂದೂಕು ನಿಯಂತ್ರಣ ಶಾಸನಕ್ಕಾಗಿ ವಿದ್ಯಾರ್ಥಿ ನೇತೃತ್ವದ ಅಭಿಯಾನ) ನಂತಹ ಯುವಕರ ನೇತೃತ್ವದ ಜಾಗತಿಕ ಅಭಿಯಾನಗಳ ಉದಾಹರಣೆಗಳನ್ನು ಉಲ್ಲೇಖಿಸಿರವ ಸಮಿತಿಯು ಯುವಜನರಲ್ಲಿನ ನಿರ್ಣಾಯಕ ಸಾಮಾಜಿಕ ಮತ್ತು ರಾಜಕೀಯ ಕಾಳಜಿಗಳು, ರ್ಯಾಲಿ ಮತ್ತು ಗೆಲ್ಲುವ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ಎಂದು ಹೇಳಿದೆ.
"ಇದೆಲ್ಲವನ್ನು ಪರಿಗಣಿಸಿ ವಿಧಾನಸಭೆ ಚುನಾವಣೆಯಲ್ಲಿ ಉಮೇದುವಾರಿಕೆಗೆ ಕನಿಷ್ಠ ವಯಸ್ಸಿನ ಮಿತಿಯನ್ನು ಕಡಿಮೆ ಮಾಡಲು ಸಮಿತಿ ಸಲಹೆ ನೀಡಿದೆ. ಸಂವಿಧಾನದ ಪ್ರಕಾರ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯಸ್ಸು 25 ವರ್ಷಗಳು. ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ಮಾಡಲು ಕನಿಷ್ಠ 30 ವರ್ಷ ಆಗಿರಬೇಕು"
ಸಹಮತ ತೋರದ ಚುನಾವಣಾ ಆಯೋಗ
ಭಾರತದ ಚುನಾವಣಾ ಆಯೋಗವು (ECI) ಲೋಕಸಭೆ, ವಿಧಾನಸಭೆ ಅಥವಾ ವಿಧಾನ ಪರಿಷತ್ತುಗಳ ಚುನಾವಣೆಗೆ ಸ್ಪರ್ಧಿಸಲು ಈಗಿರುವ ವಯಸ್ಸಿನ ಮಿತಿಯನ್ನು ಕಡಿಮೆ ಮಾಡಲು ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. 18 ವರ್ಷ ವಯಸ್ಸಿನವರು ಅಗತ್ಯ ಅನುಭವ ಮತ್ತು ಈ ಜವಾಬ್ದಾರಿಗಳನ್ನು ನಿಭಾಯಿಸುವ ಪ್ರಬುದ್ಧತೆಯನ್ನು ಹೊಂದಿರುತ್ತಾರೆ ಎಂದು ನಿರೀಕ್ಷಿಸುವುದು ಅವಾಸ್ತವಿಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಕೇಂದ್ರ ಸರ್ಕಾರ ಮತ್ತು ಇಸಿಐನಿಂದ ತಳ್ಳಲ್ಪಟ್ಟ ಸಾಮಾನ್ಯ ಮತದಾರರ ಪಟ್ಟಿಯಲ್ಲಿ, ಭಾರತದ ಸಂವಿಧಾನದ ಅಧ್ಯಾಯ IX ಮತ್ತು IX A ಅಡಿಯಲ್ಲಿ ಪಟ್ಟಿ ಮಾಡಲಾದ ರಾಜ್ಯ ಅಧಿಕಾರಗಳ ಮೇಲೆ ಸಂಭಾವ್ಯ ಪ್ರಭಾವದ ಬಗ್ಗೆ , ಸಂಸದೀಯ ಸಮಿತಿಯು ಕಳವಳ ವ್ಯಕ್ತಪಡಿಸಿದೆ.
ಆದ್ದರಿಂದ ಸಮಿತಿಯು ಸಾಮಾನ್ಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೊದಲು ಇಸಿಐ ರಾಜ್ಯಗಳ ಸಾಂವಿಧಾನಿಕ ನಿಬಂಧನೆಗಳು ಮತ್ತು ಅಧಿಕಾರಗಳಿಗೆ ಸರಿಯಾದ ಪರಿಗಣನೆಯನ್ನು ನೀಡಬೇಕು ಎಂದು ಸೂಚಿಸಿದೆ. ಸಂವಿಧಾನದ ಅಡಿಯಲ್ಲಿ ಪ್ರತಿಪಾದಿಸಲಾದ ಫೆಡರಲಿಸಂನ ತತ್ವಗಳು ಮತ್ತು ಪಟ್ಟಿ II ನಮೂದು 5 ರ ಅಡಿಯಲ್ಲಿ ರಾಜ್ಯ ಚುನಾವಣಾ ಆಯೋಗಗಳಿಗೆ ಕಾಯ್ದಿರಿಸಿದ ಅಧಿಕಾರಗಳನ್ನು ಇಸಿಐ ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ಅದು ಹೇಳಿದೆ.
"ಕೇಂದ್ರ ಸರ್ಕಾರ ಮತ್ತು ಇಸಿಐ ಪ್ರಸ್ತಾಪಿಸಿದಂತೆ ಸಾಮಾನ್ಯ ಮತದಾರರ ಪಟ್ಟಿಯನ್ನು ಜಾರಿಗೊಳಿಸುವುದು ಪ್ರಸ್ತುತ ಸಂವಿಧಾನದ 325 ನೇ ವಿಧಿಯ ವ್ಯಾಪ್ತಿಯಿಂದ ಹೊರಗಿದೆ" ಎಂದು ಹೇಳಿದೆ. ಈ ನಿಬಂಧನೆಯು ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳ ಚುನಾವಣೆಗಳಿಗೆ ಪ್ರತ್ಯೇಕ ಮತದಾರರ ಪಟ್ಟಿಗಳನ್ನು ಬಳಸಬೇಕು ಎಂದು ಷರತ್ತು ವಿಧಿಸುತ್ತದೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
GBA Polls: ಬೆಂಗಳೂರಿನ 5 ಪಾಲಿಕೆಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಪಟ್ಟಿ ಪರಿಶೀಲನೆ ಮಾಡುವ ವಿಧಾನ ಇಲ್ಲಿದೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications