ಉದ್ಯೋಗಿಗಳಿಗೆ ಗಿಫ್ಟ್: ತೆರಿಗೆ ರಹಿತ ಗ್ರಾಚ್ಯುಟಿ ಮಿತಿ ಏರಿಕೆ!
ನವದೆಹಲಿ, ಮಾರ್ಚ್ 22: ಗ್ರಾಚ್ಯುಟಿ ತಿದ್ದುಪಡಿ ಮಸೂದೆ 2017ಕ್ಕೆ ಅಂಗೀಕಾರ ಸಿಗುವ ಸಂಸತ್ತಿನಲ್ಲಿ ಗುರುವಾರ(ಮಾರ್ಚ್ 22)ದಂದು ಅಂಗೀಕಾರ ಸಿಕ್ಕಿದೆ. ಇದರಿಂದಾಗಿ ಉದ್ಯೋಗಿಗಳಿಗೆ 20 ಲಕ್ಷ ರೂ.ವರೆಗೂ ತೆರಿಗೆ ಮುಕ್ತ ಗ್ರಾಚ್ಯುಟಿ ಪಡೆಯಲು ಅರ್ಹರಾಗಲಿದ್ದಾರೆ.
ಸದ್ಯ ಐದು ಅಥವಾ ಅದಕ್ಕಿಂತ ಹೆಚ್ಚು ಸೇವಾ ಅವಧಿ ಹೊಂದಿರುವ ಉದ್ಯೋಗಿಗಳು ಉದ್ಯೋಗ ತೊರೆದಾಗ, ನಿವೃತ್ತಿ ಹೊಂದಿದಾಗ 10 ಲಕ್ಷ ರೂ. ವರೆಗೂ ತೆರಿಗೆ ಮುಕ್ತವಾಗಿ ಗ್ರಾಚ್ಯುಟಿ ಗಳಿಸಬಹುದಾಗಿತ್ತು. 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದ ಬಳಿಕ,ಸಂಘಟಿತ ವಲಯದ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮೊತ್ತದ ಮಿತಿಯನ್ನು 20 ಲಕ್ಷ ರೂ.ಗೆ ಏರಿಸಲಾಗಿದೆ.
ಕೇಂದ್ರ ಸರ್ಕಾರಿ ನೌಕರರ ರೀತಿಯಲ್ಲಿಯೇ ಸಂಘಟಿತ ವಲಯದ ಕಾರ್ಮಿಕರಿಗೂ 20 ಲಕ್ಷ ರೂ. ವರೆಗೂ ತೆರಿಗೆ ಮುಕ್ತವಾಗಿ ಸಿಗಲಿದೆ.

ಗಣಿ, ತೈಲಕ್ಷೇತ್ರ, ಫ್ಯಾಕ್ಟರಿ, ಬಂದರು, ರೈಲ್ವೇ ಕಂಪನಿಗಳು ಮೊದಲಾದ ಕಡೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲ ಒದಗಿಸಲು ಗ್ರಾಚುಟಿ ಪಾವತಿ ಕಾಯ್ದೆ 1972 ನ್ನು ಜಾರಿಗೆ ತರಲಾಗಿದೆ. ಗ್ರಾಚ್ಯುಟಿ ಅಧಿನಿಯಮ 1972ರ ಪ್ರಕಾರ ಉದ್ಯೋಗಿಯ ಹೆಸರು ಸೇರ್ಪಡೆಗೊಂಡಿದ್ದರೆ, ನಿಮ್ಮ ಔದ್ಯೋಗಿಕ ಅನುಭವದ ಜತೆ ಲೆಕ್ಕ ಹಾಕಿ ಗ್ರಾಚ್ಯುಟಿ ನೀಡಲಾಗುತ್ತದೆ.
ಉದ್ಯೋಗದಾತರಿಂದ ಉದ್ಯೋಗಿಗಳಿಗೆ ಸಿಗುವ ಕೊಡುಗೆಗಳಲ್ಲಿ ಗ್ರಾಚುಟಿ ಕೂಡಾ ಒಂದಾಗಿದೆ. ಗ್ರಾಚುಟಿ ಅಧಿನಿಯಮದ ಪ್ರಕಾರ ಉದ್ಯೋಗಿ ನಿವೃತ್ತಿ ಹೊಂದಿದ 1 ತಿಂಗಳ ಒಳಗಾಗಿ ಕಡ್ಡಾಯವಾಗಿ ಗ್ರಾಚ್ಯುಟಿ ಹಣವನ್ನು ಪಾವತಿಸಬೇಕಾಗುತ್ತದೆ. ಉದ್ಯೋಗಿ ತನ್ನ ವೃತ್ತಿ ಬದುಕಿನಲ್ಲಿ ಹಲವಾರು ಬಾರಿ ಉದ್ಯೋಗ ಬದಲಾಯಿಸಬೇಕಾಗುತ್ತದೆ. ಗ್ರಾಚುಟಿ ಪಡೆದು ಉದ್ಯೋಗ ತೊರೆಯಬಹುದಾಗಿದೆ.
ಇದರಂತೆ, 10 ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೆಲಸ ಮಾಡುವ ಸಂಸ್ಥೆಗಳಲ್ಲಿನ ಕಾರ್ಮಿಕರು ಕನಿಷ್ಟ 5 ವರ್ಷ ಕೆಲಸ ಮಾಡಿದಲ್ಲಿ ಗ್ರಾಚುಟಿ ಪಡೆಯಲು ಅರ್ಹರಾಗಿರುತ್ತಾರೆ. ಸೇವೆಯನ್ನು ಮಾಡುವ ಪ್ರತಿ ವರ್ಷಕ್ಕೆ 15 ದಿನಗಳ ವೇತನವನ್ನು ಗ್ರಾಚುಟಿ ಎಂದು ಲೆಕ್ಕಹಾಕಲಾಗುವುದು. 2010 ರಲ್ಲಿ ಗ್ರಾಚುಟಿ ಗರಿಷ್ಟ ಮೊತ್ತವನ್ನು 10 ಲಕ್ಷ ರೂ. ನಿಗದಿ ಮಾಡಲಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications