ಗಾಯತ್ರಿ ಮಂತ್ರದೊಂದಿಗೆ ಸಂಸತ್ ಕಲಾಪ ಆರಂಭವಾಲಿ
ಬೆಂಗಳೂರು, ಜು 28: ಗಾಯತ್ರಿ ಮಂತ್ರದೊಂದಿಗೆ ಸಂಸತ್ತು ಮತ್ತು ವಿಧಾನಸಭೆಯ ಕಲಾಪ ಆರಂಭಿಸಿದರೆ ದೇಶ ಅಭಿವೃದ್ದಿ ಪಥದತ್ತ ಸಾಗುತ್ತದೆ. ಹಾಗಾಗಿ, ಗಾಯತ್ರಿ ಮಂತ್ರದೊಂದಿಗೆ ಕಲಾಪ ಆರಂಭಿಸುವುದಕ್ಕೆ ನನ್ನ ಸಹಮತವಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆ ನೀಡುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಗಾಯತ್ರಿ ಮಂತ್ರದೊಂದಿಗೆ ಸಂಸತ್ ಕಲಾಪ ಆರಂಭವಾಗಲಿ ಎಂದು ಸಲಹೆ ನೀಡಿದ್ದರು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. (ಬಿಪಶಾ ಬಸು ಜೀವ ಉಳಿಸಿದ ಗಾಯತ್ರಿ ಮಂತ್ರ)
ನಗರದಲ್ಲಿ ಭಾನುವಾರ (ಜು 27) ದಕ್ಷಿಣಕನ್ನಡ ಕೂಟ ಬ್ರಾಹ್ಮಣರ ಒಕ್ಕೂಟದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅನಂತ್, ಗಾಯತ್ರಿ ಮಂತ್ರದೊಂದಿಗೆ ಕಲಾಪ ಆರಂಭಿಸಿದರೆ ದೇಶ ಉನ್ನತಿಯತ್ತ ಸಾಗುತ್ತದೆ ಎಂದು ನಂಬಿದವರಲ್ಲಿ ನಾನೂ ಒಬ್ಬ ಎಂದು ಸಭೆಯಲ್ಲಿ ತಿಳಿಸಿದ್ದಾರೆ. (ಬ್ರಾಹ್ಮಣರನ್ನು ಕಂಡರೆ ನಗಬೇಕೋ ಅಳಬೇಕೋ)
ವಿಧಾನಸಭೆ ಮತ್ತು ಲೋಕಸಭೆಯ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ದಾಂಜಲಿ ಅರ್ಪಿಸಿ ಕಲಾಪ ಆರಂಭಿಸಲಾಗುತ್ತದೆ. ಇದರಿಂದ ಮೊದಲ ದಿನವೇ ಸದನದಲ್ಲಿ ಸೂತಕದ ಛಾಯೆ ಆವರಿಸುತ್ತದೆ ಎಂದು ಅನಂತ್ ಕುಮಾರ್ ಹೇಳಿದ್ದಾರೆ.
ಬ್ರಾಹ್ಮಣರಿಗೂ ಮೀಸಲು. ಮುಂದೆ ಓದಿ..

ವಿದೇಶದಲ್ಲಿ ಆಯಾಯ ಧರ್ಮದ ಮೂಲಕ ಕಲಾಪ ಆರಂಭ
ಇಸ್ಲಾಂ ಮತ್ತು ಕ್ರೈಸ್ತಧರ್ಮದ ರಾಷ್ಟ್ರಗಳಲ್ಲಿ ಖುರಾನ್ ಅಥವಾ ಬೈಬಲ್ ಪಠಿಸಿ ಕಲಾಪವನ್ನು ಆರಂಭಿಸಲಾಗುತ್ತದೆ. ನಮ್ಮದು ಹಿಂದೂ ರಾಷ್ಟ್ರವಾದರೂ ಜಾತ್ಯಾತೀತ ರಾಷ್ಟ್ರ. ಅಟಲ್ ಅಂದು ಸಲ್ಲಿಸಿದ್ದ ಪ್ರಸ್ತಾವನೆಗೆ ನನ್ನ ಬೆಂಬಲವಿದೆ - ಅನಂತ್ ಕುಮಾರ್

ದಿನೇಶ್ ಗುಂಡೂರಾವ್ ಹೇಳಿದ್ದು
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆಯ ರಾಜ್ಯ ಸಚಿವ ದಿನೇಶ್, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಮತ್ತು ವೈಶ್ಯರಿಗೂ ಮೀಸಲಾತಿ ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಯುವ ಪೀಳಿಗೆ ನಮ್ಮ ಸಂಸ್ಕೃತಿ ಅನುಸರಿಸುತ್ತಿಲ್ಲ
ದೇಶದ ಯುವ ಪೀಳಿಗೆ ನಮ್ಮ ಆಚಾರ, ವಿಚಾರ ಮತ್ತು ಸಂಸ್ಕೃತಿ ಅನುಸರಿಸುತ್ತಿಲ್ಲ. ಅವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ - ಅನಂತ್ ಕುಮಾರ್

ಸಂಸದರ ನಿಧಿಯಿಂದ ಅನುದಾನ
ಡಾ.ಶಿವರಾಮ ಕಾರಂತ ಸಭಾಂಗಣ ನಿರ್ಮಿಸಲು ಸಂಸದರ ನಿಧಿಯಿಂದ 25 ಲಕ್ಷ ಅನುದಾನ ನೀಡುವುದಾಗಿ ಸಚಿವ ಅನಂತ್ ಕುಮಾರ್ ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

ಜೈನ ಸಮುದಾಯದವರಿಗೆ ಕಲ್ಪಿಸಲಾಗಿದೆ
ಮೀಸಲಾತಿ ಸೌಲಭ್ಯದಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರು ವಂಚಿತರಾಗಿದ್ದಾರೆ. ಜೈನ ಸಮುದಾಯದವರಿಗೆ ಮೀಸಲಾತಿ ಸೌಲಭ್ಯವನ್ನು ಈಗಾಗಲೇ ಕಲ್ಪಿಸಲಾಗಿದೆ. ಬ್ರಾಹ್ಮಣ ಮತ್ತು ವೈಶ್ಯ ಸಮುದಾಯವನ್ನೂ ಮೀಸಲಾತಿ ಸೌಲಭ್ಯದಡಿ ತರಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications