ಹಿನ್ನೆಲೆಯಲ್ಲಿ ಈಗಾಗಲೇ ಆಡಳಿತರೂಢ ಬಿಜೆಪಿ ತನ್ನ ಎಲ್ಲಾ ಸದಸ್ಯರಿಗೆ ಇಂದು ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ಇದರ ಜೊತೆಗೆ ಕಾಂಗ್ರೆಸ್ ಕೂಡ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಉಭಯ ಸದನಗಳಲ್ಲಿ ಕೃಷಿ ಕಾಯ್ದೆಯನ್ನು ಮಂಡಿಸಿ ಕಾನೂನಾತ್ಮಕವಾಗಿ ಅದನ್ನು ಹಿಂದಕ್ಕೆ ಪಡೆಯುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.
ರೈತರಿಗೆ ಮಾರಕವಾಗುವ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ರೈತರು ದೆಹಲಿಯ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ನಲ್ಲಿ ಕಾಯ್ದೆಯನ್ನು ಮಂಡಿಸಿ ಸಂಪೂರ್ಣವಾಗಿ ವಾಪಸ್ ಪಡೆಯುವ ತನಕ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಬಿಗಿಪಟ್ಟಿ ಪಟ್ಟುಹಿಡಿದಿದ್ದಾರೆ.
ಸಂಸತ್ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಿತು.
ಡಿಸೆಂಬರ್ 23 ತನಕ ನಡೆಯಲಿರುವ ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಪಕ್ಷಗಳ ರಾಜಕೀಯ ನಾಯಕರಿಗೆ ಮನವಿ ಮಾಡಿದ್ದಾರೆ.
ಕೃಷಿ ಕಾಯ್ದೆಗಳನ್ನು ಅಧಿಕೃತವಾಗಿ ಸಂಸತ್ತಿನ ಎರಡೂ ಸದನಗಳಲ್ಲಿ ಮಂಡಿಸಿ ವಾಪಸ್ ಪಡೆಯುವ ಕಾನೂನು ಪ್ರಕ್ರಿಯೆಗಳನ್ನು ಪೂರ್ಣ ಮಾಡಲಾಗುವುದು ಇದಕ್ಕೆ ಎಲ್ಲ ಪಕ್ಷಗಳ ಸಹಕಾರ ಇರಲಿ ಎಂದು ಮನವಿ ಮಾಡಿದ ಅವರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದು ಅದರಲ್ಲೂ ಕನಿಷ್ಠ ಬೆಂಬಲ ಬೆಲೆ ನೀಡುವ ಸಂಬಂಧ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎನ್ನುವ ವಿಷಯವನ್ನು ಅವರು ರಾಜಕೀಯ ಪಕ್ಷಗಳ ನಾಯಕರ ಗಮನಕ್ಕೆ ತಂದಿದ್ದಾರೆ
Dec 16, 2021, 9:47 am IST
ಇನ್ನೊಂದು ಕಡೆ ರಾಜ್ಯಸಭೆಯ 12 ಸಂಸದರ ಅಮಾನತು ಆದೇಶವನ್ನು ವಿರೋಧಿಸಿ ವಿರೋಧ ಪಕ್ಷದ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಈ ಕ್ಷಣವೇ ಸಂಸದರ ಅಮಾನತು ಆದೇಶವನ್ನು ವಾಪಸ್ ಪಡೆಯುವಂತೆ ಪ್ರತಿಪಕ್ಷ ನಾಯಕರು ಆಗ್ರಹಿಸುತ್ತಿದ್ದಾರೆ.
Dec 16, 2021, 9:47 am IST
ಸಂಸತ್ ಚಳಿಗಾಲ ಅಧಿವೇಶನ ಗುರುವಾರ 14ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಸಭೆಯು ಬುಧವಾರ ಕೇಂದ್ರೀಯ ಜಾಗೃತ ಆಯೋಗವನ್ನು ಅಂಗೀಕರಿಸಿದೆ. ಈ ತಿದ್ದುಪಡಿ ಮಸೂದೆಯು ಐದು ವರ್ಷಗಳ ಜೊತೆಗೆ ಒಂದು ವರ್ಷ ಅವಧಿಯನ್ನು ವಿಸ್ತರಿಸುವುದಕ್ಕೆ ಅನುಮತಿ ನೀಡುತ್ತದೆ.
Dec 13, 2021, 11:57 am IST
12 ಮಂದಿ ಸಂಸದರ ಅಮಾನತು ಕುರಿತು ಮುಂದುವರೆದ ಪ್ರತಿಭಟನೆ ರಾಜ್ಯಸಭೆ ಕಲಾಪ ಮಧ್ಯಾಹ್ನ 12ರವರೆಗೆ ಮುಂದೂಡಿಕೆ
Dec 13, 2021, 11:23 am IST
ರಾಜ್ಯಸಭೆಯಿಂದ 12 ಸಂಸದರನ್ನು ಅಮಾನತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ಕೆಲವು ಪ್ರತಿಪಕ್ಷ ಸದಸ್ಯರು ಬೇಡಿಕೆಯನ್ನು ಮುಂದುವರಿಸಿದರು. ಈ ಹಂತದಲ್ಲಿ ಕಲಾಪಕ್ಕೆ ಅಡೆತಡೆ ಉಂಟಾಗಿದ್ದು, ಸದನವನ್ನು ಮುಂದೂಡಲಾಗಿತ್ತು. ಎರಡನೇ ವಾರದಲ್ಲಿ ರಾಜ್ಯಸಭೆಯ ಕಲಾಪದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹಿಂದಿನ ವಾರಕ್ಕಿಂತ ಶೇ.5.6ರಷ್ಟು ಹೆಚ್ಚಳವಾಗಿದೆ.
ಸಂಸತ್ ಚಳಿಗಾಲ ಅಧಿವೇಶನ ಸೋಮವಾರ 10ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಸಭೆಯ 12 ಸಂಸದರ ಅಮಾನತು ಕುರಿತು ವಿರೋಧದ ಮಧ್ಯೆ ರಾಜ್ಯಸಭೆಯು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ (ವೇತನ ಮತ್ತು ಸೇವಾ ಷರತ್ತು) ತಿದ್ದುಪಡಿ ಮಸೂದೆ, 2021 ಅನ್ನು ಪರಿಗಣಿಸಿದೆ. ಇದೇ ವೇಳೆ ಲೋಕಸಭೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ತಿದ್ದುಪಡಿ) ಮಸೂದೆ, 2021 ಅನ್ನು ಅಂಗೀಕರಿಸಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ, ಮಿಲಿಟರಿ ಗೌರವದೊಂದಿಗೆ ನಡೆಸಲಾಗುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು.
Dec 09, 2021, 11:08 am IST
ಗ್ರೂಪ್ ಕ್ಯಾಪ್ಟನ್ ವುರಣ್ ಸಿಂಗ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಅತ್ಯುನ್ನತ ಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದರು.
Dec 09, 2021, 11:06 am IST
ಹೆಲಿಕಾಪ್ಟರ್ ಲ್ಯಾಂಡ್ ಆಗುವ 7 ನಿಮಿಷಗಳ ಮೊದಲು ಪತನಗೊಂಡಿದೆ ಎಂದು ರಾಜನಾಥ್ ಸಿಂಗ್ ಹೇಳಿಕೆ ನೀಡಿದರು.
Dec 09, 2021, 11:05 am IST
ಸುಲೂರು ವಾಯುನೆಯಿಂದ 11.48ಕ್ಕೆ ಹೆಲಿಕಾಪ್ಟರ್ ಟೇಕಾಫ್ ಆಗಿತ್ತು.
Dec 09, 2021, 11:04 am IST
12.08ಕ್ಕೆ ಹೆಲಿಕಾಪ್ಟರ್ ಸಂಪೂರ್ಣ ಸಂಪರ್ಕ ಕಳೆದುಕೊಂಡಿತು ಎಂದು ರಾಜನಾಥ್ ಸಿಂಗ್ ಲೋಕಸಭೆಗೆ ಹೇಳಿದರು.
Dec 09, 2021, 11:03 am IST
ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ಹೆಲಿಕಾಪ್ಟರ್ ದುರಂತದ ಬಗ್ಗೆ ಹೇಳಿಕೆ ನೀಡಲು ಆರಂಭಿಸಿದ್ದಾರೆ.
Dec 09, 2021, 10:31 am IST
11 ಗಂಟೆಗೆ ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆ ನೀಡಲಿದ್ದಾರೆ.
Defence Minister Rajnath Singh will make a statement in Lok Sabha at 11 am today followed by the statement at Rajya Sabha on the military helicopter crash in Tamil Nadu.
ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ನಲ್ಲಿ ಹೇಳಿಕೆ ನೀಡಲಿದ್ದಾರೆ.
Dec 08, 2021, 2:22 pm IST
ತಮಿಳುನಾಡಿನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಲಿದ್ದಾರೆ.
Dec 08, 2021, 1:15 pm IST
2018-2020ರ ತನಕ ನಡೆದ ಗಲಭೆ ಪ್ರಕರಣಗಳಲ್ಲಿ 101 ಜನರು ಮೃತಪಟ್ಟಿದ್ದಾರೆ. 3,366 ಜನರು ಗಾಯಗೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದೆ.
Dec 08, 2021, 11:31 am IST
ರಾಜ್ಯಸಭೆಯ ಕಲಾಪದಲ್ಲಿ 12 ಸದಸ್ಯರ ಅಮಾನತು ವಿಚಾರದಲ್ಲಿ ಗದ್ದಲ ಉಂಟಾಗಿದೆ. ಕಲಾಪವನ್ನು 12 ಗಂಟೆಗೆ ಮುಂದೂಡಲಾಗಿದೆ.
Dec 08, 2021, 10:59 am IST
ಪ್ರಧಾನಿ ನರೇಂದ್ರ ಮೋದಿ ಸಂಸತ್ನಲ್ಲಿ ಹಿರಿಯ ಸಚಿವರ ಜೊತೆ ಸಭೆ ನಡೆಸುತ್ತಿದ್ದಾರೆ.
Dec 08, 2021, 10:26 am IST
ಲೋಕಸಭೆಯಲ್ಲಿ ಗಡಿ ವಿಚಾರದ ಕುರಿತು ಸಂಪೂರ್ಣ ಚರ್ಚೆ ನಡೆಸಲು ನಾವು ಆಗ್ರಹಿಸುತ್ತೇವೆ ಎಂದು ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
Dec 07, 2021, 11:49 am IST
12 ಸದಸ್ಯರನ್ನು ಅಮಾನತು ಮಾಡಿರುವ ವಿಚಾರದಲ್ಲಿ ರಾಜ್ಯಸಭೆಯಲ್ಲಿ ಗದ್ದಲ ನಡೆದಿದೆ. ಇದರಿಂದಾಗಿ ಕಲಾಪವನ್ನು 12 ಗಂಟೆಗೆ ಮುಂದೂಡಲಾಗಿದೆ.
Dec 07, 2021, 10:16 am IST
ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವಾಗ ಮೃತಪಟ್ಟ ರೈತರಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
Congress MP Rahul Gandhi gives adjournment motion notice in Lok Sabha over the issue of compensation to the farmers who died during farmers' agitation over the three farm laws.
ಲೋಕಸಭೆ ಕಲಾಪವನ್ನು ಡಿಸೆಂಬರ್ 6ರ ಸೋಮವಾರಕ್ಕೆ ಮುಂದೂಡಲಾಗಿದೆ.
Dec 03, 2021, 1:07 pm IST
ಕೇಂದ್ರ ವಿಚಕ್ಷಣ ಆಯೋಗ ತಿದ್ದುಪಡಿ ಮಸೂದೆ 2021 ಹಾಗೂ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು.
Dec 03, 2021, 12:39 pm IST
ಬಿಜೆಪಿ ಸಚಿವರೊಬ್ಬರು ಸಂಸತ್ತಿನಲ್ಲಿ ಎನ್ಆರ್ಸಿಯನ್ನು ಭಾರತದಾದ್ಯಂತ ಜಾರಿಗೆ ತರುವುದಿಲ್ಲ ಎಂದು ಹೇಳಿದ್ದಾರೆ, ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ್ದಾರೆ, ಎನ್ಆರ್ಸಿಯನ್ನು ಕೂಡ ರದ್ದುಗೊಳಿಸುತ್ತಾರೆ. ಡೋಲಾ ಸೇನೆ, ಟಿಎಂಸಿ ಸಂಸದ
ಕೋವಿಡ್ 19ಗೆ ಸಂಬಂಧಿಸಿದಂತೆ ವರದಿ ಇರಲಿದೆ. 2021-22ರ ಅನುದಾನ ಬೇಡಿಕೆ ಕುರಿತು ನಿರ್ಮಲಾ ಸೀತಾರಾಮನ್ ಮಾತನಾಡಲಿದ್ದಾರೆ.
ಜನರಿಗೆ ಉಚಿತ ಮತ್ತು ಕಡ್ಡಾಯ ಆರೋಗ್ಯ ಸೇವೆಗಳು ಹಾಗೂ ಸಾರ್ವತ್ರಿಕ ಆರೋಗ್ಯದ ಹಕ್ಕನ್ನು ಒದಗಿಸುವ ಮಸೂದೆಯನ್ನು ಡಾ. ಅಭಿಷೇಕ್ ಮನು ಸಿಂಗ್ವಿ ಮಂಡಿಸಲಿದ್ದಾರೆ.
Dec 03, 2021, 10:56 am IST
ಶಿಕ್ಷಣ ಸಂಸ್ಥೆಗಳಲ್ಲಿ ಭಗವದ್ಗೀತೆಯನ್ನು ಪಠ್ಯದ ಭಾಗವಾಗಿ ಕಲಿಕೆಗೆ ಸಂಬಂಧಿಸಿದಂತೆ ವಿಧೇಯಕವನ್ನು ರಮೇಶ್ ಬಿಧುರಿ ಮಂಡಿಲಿದ್ದಾರೆ.
Dec 03, 2021, 10:55 am IST
ಕೋವಿಡ್ 19 ಹಾಗೂ ಅದಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಚರ್ಚೆ ನಡೆಯಲಿದೆ. ಸಂವಿಧಾನವನ್ನು ಮತ್ತಷ್ಟು ತಿದ್ದುಪಡಿ ಮಾಡಲು ಕೆಲವು ವಿರೋಧಪಕ್ಷಗಳು ಮಸೂದೆಯನ್ನು ಪರಿಚಯಿಸಲು ಪ್ರಯತ್ನಿಸುತ್ತಿವೆ.
Dec 03, 2021, 10:55 am IST
ಡಾ. ಜಿತೇಂದ್ರ ಸಿಂಗ್ ಅವರು ಕೇಂದ್ರ ವಿಚಕ್ಷಣ ಆಯೋಗದ ಕಾಯ್ದೆ 2003 ಅನ್ನು ತಿದ್ದುಪಡಿ ಮಾಡಲು ಮಸೂದೆಯನ್ನು ಮಂಡಿಸಲು ಅವಕಾಶ ಕೋರಲಿದ್ದಾರೆ.
ಡಾ. ಜಿತೇಂದ್ರ ಸಿಂಗ್ ಅವರು ದೆಹಲಿ ಪೊಲೀಸ್ ವಿಶೇಷ ಸ್ಥಾಪನೆ ಕಾಯ್ದೆ 1946 ಅನ್ನು ಮತ್ತಷ್ಟು ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಲಿದ್ದಾರೆ.
ಡಾ. ಮನ್ಸುಖ್ ಮಾಂಡವೀಯ ಅವರು ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ಕಾಯ್ದೆ 1998ಅನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಲಿದ್ದಾರೆ.
READ MORE
6:33 AM, 29 Nov
ಬೆಲೆ ಏರಿಕೆ ರೈತರ ಹೋರಾಟ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿರೋಧಪಕ್ಷಗಳು ಕೇಂದ್ರ ಸರ್ಕಾರದ ಚಳಿ ಬಿಡಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
6:36 AM, 29 Nov
ಸಂಸತ್ ಅಧಿವೇಶನದಲ್ಲಿ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅನುಕೂಲವಾಗುವಂತೆ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರಮುಖ ವಿರೋಧ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ.
6:52 AM, 29 Nov
ವಿರೋಧಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದ್ದು ಅದಕ್ಕೆ ಸೂಕ್ತ ತಿರುಗೇಟು ನೀಡಲು ಕೂಡ ಆಡಳಿತ ಪಕ್ಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ
10:05 AM, 29 Nov
ಲೋಕಸಭೆಯ ಬ್ಯುಸಿನೆಸ್ ಅಡ್ವೈಸರಿ ಸಭೆ ಬೆಳಗ್ಗೆ 10.30ಕ್ಕೆ ನಡೆಯಲಿದೆ.
10:07 AM, 29 Nov
ಕಲಾಪದ ಮೊದಲ ದಿನವೇ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಹಿಂಪಡೆಯುವ ವಿಧೇಯಕವನ್ನು ಕೇಂದ್ರ ಸರ್ಕಾರ ಮಂಡಿಸಲಿದೆ. ಹೀಗಾಗಿ ಇಂದೇ ಅಧಿವೇಶನದಲ್ಲಿ ಖಡ್ಡಾಯವಾಗಿ ಹಾಜರು ಇರಬೇಕೆಂದು ಬಿಜೆಪಿ ತನ್ನೆಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದೆ. ಮೂರು ಕಾಯ್ದೆಗಳನ್ನು ಹಿಂಪಡೆಯುವ ಮೂಲಕ ಕೃಷಿಕರ ಹೋರಾಟವನ್ನು ಆದಷ್ಟು ಬೇಗ ಮುಗಿಸುವಂತೆ ಓಲೈಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಆದರೆ ಈ ಬಗ್ಗೆ ಚರ್ಚೆಗೆ ಕಾಂಗ್ರೆಸ್ ಪಟ್ಟು ಹಿಡಿಯುವ ಸಂಭವ ಇದೆ.
10:07 AM, 29 Nov
ಕಾಂಗ್ರೆಸ್ ತನ್ನ ರಾಜ್ಯಸಭಾ ಸಂಸದರಿಗಾಗಿ ಸಿಪಿಪಿಯಲ್ಲಿ ಸಭೆಯನ್ನು ಆಯೋಜಿಸಿದೆ
10:17 AM, 29 Nov
ಸಂಸತ್ಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
Delhi | Union Home Minister Amit Shah arrives at the Parliament as its Winter Session begins today, 26 new bills are on the agenda of the BJP-led government pic.twitter.com/R73SRcQRcE
ಹಿಂದೂಸ್ತಾನದಲ್ಲಿ ನಾಲ್ಕೂ ದಿಕ್ಕುಗಳಲ್ಲಿ ಆಜಾದಿ ಅಮೃತ ಮಹೋತ್ಸವ, ರಾಷ್ಟ್ರಹಿತ, ಜನಹಿತಕ್ಕಾಗಿ ಸಾಮಾನ್ಯ ನಾಗರಿಕರು ಅನೇಕ ಕಾರ್ಯಕ್ರಮ ನಡೆಸುತ್ತಿದ್ದಾರೆ. ಸ್ವಾತಂತ್ರ್ಯದ ಕನಸು ಕಂಡಿದ್ದರೋ ಅದನ್ನು ನನಸು ಮಾಡಲು ಜನರು ಪ್ರಯತ್ನಿಸುತ್ತಿದ್ದಾರೆ- ಮೋದಿ
10:31 AM, 29 Nov
ದೇಶದ ಪ್ರಗತಿಗಾಗಿ ಹೊಸ ಉಪಾಯಗಳನ್ನು ಮಾಡಬೇಕಿದೆ, ಹೊಸ ದಾರಿಗಳನ್ನು ಹುಡುಕಬೇಕಿದೆ. ದೂರಗಾಮಿ ಸಕಾರಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಬೇಕು.-ಮೋದಿ
10:32 AM, 29 Nov
ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ, ಸರ್ಕಾರದ ನೀತಿಗಳ ವಿರುದ್ಧ ಎಷ್ಟು ಬೇಕಾದರೂ ಧ್ವನಿ ಎತ್ತಿ, ಆದರೆ ಸ್ಪೀಕರ್, ಸಂಸತ್ತಿನ ಗೌರವ ಕಾಪಾಡಿ- ಮೋದಿ
10:34 AM, 29 Nov
ಸಂಸತ್ತು ಎಷ್ಟು ದಿನ ನಡೆದಿತ್ತು, ಯಾರ್ಯಾರು ಅಧಿವೇಶನ ತಡೆಯಲು ಪ್ರಯತ್ನಿಸಿದ್ದರು ಎಂಬುದು ಭವಿಷ್ಯದಲ್ಲಿ ನೆನಪಿರಬಾರದು ಆದರೆ ಅಧಿವೇಶನದಲ್ಲಿ ಸರ್ಕಾರ ಏನೇನು ಸಕಾರಾತ್ಮಕ ನಿರ್ಣಯವನ್ನು ಕೈಗೊಂಡಿದೆ ಎಂಬುದನ್ನು ಜನರು ನೆನಪಿಟ್ಟುಕೊಳ್ಳಬೇಕು-ಮೋದಿ
10:35 AM, 29 Nov
ಸರ್ಕಾರ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲಿದೆ, ಎಲ್ಲರಿಗೂ ಪ್ರಶ್ನೆ ಮಾಡಲು ಅವಕಾಶವಿದೆ, ಆದರೆ ಶಾಂತಿ ಕಾಪಾಡಿಕೊಳ್ಳಿ ಎಂದು ಮೋದಿ ಮನವಿ
10:40 AM, 29 Nov
ಕೊರೊನಾ ಹೊಸ ರೂಪಾಂತರಿ ಓಮಿಕ್ರೋನ್ ಬಗ್ಗೆ ತೀವ್ರ ಎಚ್ಚರಿಕೆಯಿಂದಿರಬೇಕು-ಮೋದಿ
10:55 AM, 29 Nov
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ ಸಂಸತ್ಗೆ ಆಗಮನ
ಲೋಕಸಭೆ: ಸಂಸದರಾದ ಸೆಂಗುಟ್ಟುವನ್, ಕಲ್ಯಾಣ್ ಸಿಂಗ್, ಆಸ್ಕರ್ ಫರ್ನಾಂಡಿಸ್, ಗೋಡಿಲ್ ಪ್ರಸಾದ್ ಅನುರಾಗಿ, ಶ್ಯಾಮ್ಸುಂದರ್ ಸೋಮಾನಿ, ಬುಧೋಲಿಯಾ, ದೇವವ್ರತ್ ಸಿಂಗ್ ಹಾಗೂ ಹರಿ ದಾನ್ವೆ ಪುಂಡ್ಲಿಕ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ.
11:09 AM, 29 Nov
ರಕ್ಷಣಾ ದಚಿವ ರಾಜನಾಥ್ ಸಿಂಗ್ , ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಿಯೂಷ್ ಗೋಯಲ್, ಪ್ರಲ್ಹಾದ್ ಜೋಶಿ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ
11:13 AM, 29 Nov
ಲೋಕಸಭೆ ಕಲಾಪ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ
11:14 AM, 29 Nov
ರಾಜ್ಯಸಭೆ: ರಾಜ್ಯಸಭೆಯಲ್ಲಿ ಇತ್ತೀಚೆಗಷ್ಟೇ ಅಗಲಿದ ಆಸ್ಕರ್ ಫರ್ನಾಂಡಿಸ್, ಕೆಬಿ ಶಾನಪ್ಪ, ಡಾ. ಚಂದನ್ ಮಿತ್ರ, ಹರಿ ಸಿಂಗ್ ನಾಲ್ವಾ, ಮೋನಿಕಾ ಹಾಗೂ ಅಬನಿರಾಯ್ಗೆ ಶ್ರದ್ಧಾಂಜಲಿ ಸಲ್ಲಿಕೆ.
11:20 AM, 29 Nov
ರಾಜ್ಯಸಭೆ ಕಲಾಪ ಒಂದು ಗಂಟೆಗಳ ಕಾಲ ಮುಂದೂಡಿಕೆ
12:03 PM, 29 Nov
ಲೋಕಸಭೆ ಕಲಾಪ ಮತ್ತೆ ಆರಂಭ
12:05 PM, 29 Nov
ಕೃಷಿ ಮಸೂದೆ 2021 ಕುರಿತು ವಿಷಯ ಪ್ರಾಸ್ತಾಪಿಸುವಂತೆ ತೃಣಮೂಲ ಕಾಂಗ್ರೆಸ್ ಸಂಸದರು ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
12:11 PM, 29 Nov
ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ
12:33 PM, 29 Nov
ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಅವರು ಲೋಕಸಭೆಯಲ್ಲಿ ಮಸೂದೆಯನ್ನು ಚರ್ಚಿಸಬೇಕೆಂದು ಒತ್ತಾಯಿಸಿದರು.
12:36 PM, 29 Nov
ಕೃಷಿ ಕಾನೂನು ರದ್ದತಿ ಮಸೂದೆ ಲೋಕಸಭೆಯಲ್ಲಿ ಅಂಗೀಕೃತವಾದಾಗಿದೆ, ಇದುವರೆಗೆ ಪ್ರತಿಭಟನೆ ಸಂದರ್ಭದಲ್ಲಿ 750 ಮಂದಿ ರೈತರು ಮೃತಪಟ್ಟಿದ್ದಾರೆ. ಎಂಎಸ್ಪಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಬಾಕಿ ಇದೆ: ರಾಕೇಶ್ ಟೀಕಾಯತ್
ಕೃಷಿ ಮಸೂದೆಗಳ ಅಂಗೀಕಾರ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗಳು ನಡೆಯಿತು, ಇಂದು ಇಡೀ ಪ್ರತಿಪಕ್ಷಗಳು ಕಾನೂನನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿವೆ. ಆದರೆ, ನಾವು ಕಾನೂನು ರದ್ದುಪಡಿಸಲು ಹೋದಾಗ ಪ್ರತಿಪಕ್ಷಗಳು ಗದ್ದಲ ಸೃಷ್ಟಿಸಿದವು. ಹಾಗಾದರೆ ಅವರ ಉದ್ದೇಶವೇನು?: ಪ್ರಲ್ಹಾದ್ ಜೋಶಿ
2:03 PM, 29 Nov
ನವೆಂಬರ್ 30 ರಂದು ಬೆಳಗ್ಗೆ 11 ಗಂಟೆಯವರೆಗೆ ಲೋಕಸಭೆ ಕಲಾಪ ಮುಂದೂಡಿಕೆ
2:05 PM, 29 Nov
ರಾಜ್ಯಸಭೆ: ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಲಖಿಂಪುರ್ ಖೇರಿ ಹಾಗೂ ವಿದ್ಯುತ್ ಬಿಲ್ ಆಂದೋಲನದಲ್ಲಿ ನಡೆದ ಹಲವಾರು ಘಟನೆಗಳ ಬಗ್ಗೆ ಚರ್ಚೆ ನಡೆಸಲು ಒತ್ತಾಯಿಸಿದ್ದೇವೆ-ಮಲ್ಲಿಕಾರ್ಜುನ ಖರ್ಗೆ
2:07 PM, 29 Nov
ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷವಾದ ಬಿಜೆಪಿ ಕಳೆದ ವರ್ಷ ಜಾರಿಗೆ ತಂದಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ವಿರೋಧ ಪಕ್ಷದ ನಾಯಕರು ತೀವ್ರ ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಮಧ್ಯಾಹ್ನದವರೆಗೆ ಮುಂದೂಡಿ ನಂತರ ಪುನಃ ಅಧಿವೇಶನ ಸೇರಿದಾಗ ತರಾತುರಿಯಲ್ಲಿ ಮತ್ತೆ ಪ್ರತಿಪಕ್ಷಗಳ ಗದ್ದಲ ನಡುವೆ ಅಂಗೀಕಾರ ಪಡೆಯಲಾಯಿತು.
Parliament Winter Session 2021 Live Updates in Kannada: The Winter session of Parliament will be held from November 29 till December 23. Stay tuned for live updates, latest news and highlights in Kannada.