ಜು.19-ಆ. 13 ರವರೆಗೆ ಸಂಸತ್ತಿನ ಮಾನ್ಸೂನ್ ಅಧಿವೇಶನ ಸಾಧ್ಯತೆ
ನವದೆಹಲಿ, ಜೂ.29: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನ ಈ ವರ್ಷ ಜುಲೈ 19 ರಿಂದ ಆಗಸ್ಟ್ 13 ರವರೆಗೆ ನಡೆಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಶಿಫಾರಸು ಮಾಡಿದೆ. ದಿನಾಂಕಗಳನ್ನು ರೂಪಿಸಲು ಸಿಸಿಪಿಎ ಕಳೆದ ವಾರ ಸಭೆ ಸೇರಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯ ಅಂತಿಮ ಅನುಮೋದನೆ ನಿರೀಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ಅಧಿವೇಶನದಲ್ಲಿ ಕೆಲವು ಸುಗ್ರೀವಾಜ್ಞೆಗಳನ್ನು ಅಂಗೀಕರಿಸುವುದು ಸೇರಿದಂತೆ ಹಲವಾರು ಮಸೂದೆಗಳನ್ನು ಸರ್ಕಾರ ಜಾರಿಗೆ ತರುವ ಸಾಧ್ಯತೆಯಿದೆ. ಒಟ್ಟು 20 ದಿನ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆ, ಲಸಿಕೆ ಕೊರತೆ, ಆಮ್ಲಜನಕ ಕೊರತೆ ವಿಚಾರವನ್ನು ವಿಪಕ್ಷಗಳು ಚರ್ಚೆಗೆ ತರುವ ಸಾಧ್ಯತೆ ಅಧಿಕವಾಗಿದೆ. ಹಾಗೆಯೇ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯ ಮಾಡಲಿದೆ.
ಭಾರತವು ಕೋವಿಡ್ -19 ರ ಎರಡನೇ ಅಲೆಯನ್ನು ಎದುರಿಸುವ ಬಗ್ಗೆ ಕಳೆದ ಬಜೆಟ್ ಅಧಿವೇಶನದವರೆಗೆ ಸಂಸತ್ತಿನಲ್ಲಿ ಸಾಕ್ಷಿಯಾಗಿದ್ದ, ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳು ಮುಂದುವರಿಯುವ ಸಾಧ್ಯತೆಯಿದೆ. ಈ ಮಾರ್ಗಸೂಚಿಯಲ್ಲಿ ಸಂಸತ್ತಿನ ಆವರಣಕ್ಕೆ ಸಂದರ್ಶಕರ ನಿರ್ಬಂಧವೂ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಅನೇಕ ಸಂಸದರಿಗೆ ಸಂಪೂರ್ಣವಾಗಿ ಲಸಿಕೆ ನೀಡಲಾಗುತ್ತಿರುವುದರಿಂದ ಮತ್ತು ಸಚಿವಾಲಯದ ಹೆಚ್ಚಿನ ಸಿಬ್ಬಂದಿಗಳು ಒಂದು ಅಥವಾ ಎರಡೂ ಡೋಸ್ ಲಸಿಕೆ ತೆಗೆದುಕೊಂಡಿರುವುದರಿಂದ, ಸಂಸತ್ತಿನೊಳಗೆ ಕೋವಿಡ್ ಆತಂಕ ಕಡಿಮೆಯಾಗಿದೆ ಎಂದು ವರದಿಯಾಗಿದೆ.
ಮಾಧ್ಯಮಗಳಿಗೆ ಸೇರಿದಂತೆ ಸಂಸತ್ತಿಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರ ಇರಬೇಕೋ ಬೇಡವೋ ಎಂಬ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. ಅಧಿವೇಶನವು ಕೆಳ ಮನೆ, ಮೇಲ್ಪನೆಯಲ್ಲಿ ಏಕಕಾಲಕ್ಕೆ ನಡೆಯಬಹುದೇ? ತಲಾ ನಾಲ್ಕು ಗಂಟೆಗಳ ಕಾಲ ಅಧಿವೇಶನ ನಡೆಯಬಹುದೇ? ಎಂಬುದು ಇನ್ನೂ ತಿಳಿದು ಬಂದಿಲ್ಲ.
ಸಂಸತ್ತಿನಲ್ಲಿ ಶಾಸಕರು, ಅವರ ಕುಟುಂಬಕ್ಕೆ ಮತ್ತು ಸಂಸದೀಯ ಸಿಬ್ಬಂದಿಗೆ ಲಸಿಕೆ ನೀಡುವಿಕೆ ಜಾರಿಯಲ್ಲಿದೆ.
(ಒನ್ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications