Train Cancelled in August: ಬೆಂಗಳೂರು ವಿಭಾಗದ ಕೆಲವು ರೈಲುಗಳ ಸಂಚಾರ ರದ್ದು, ಮಾರ್ಗಗಳ ವಿವರ
ಬೆಂಗಳೂರು, ಜುಲೈ 30: ನೈಋತ್ಯ ರೈಲ್ವೆ ವಲಯ (SWR) ಬೆಂಗಳೂರು ವಿಭಾಗದ ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ಮಧ್ಯೆ ಇಂಜಿನಿಯರಿಂಗ್ ಮತ್ತು ಸುರಕ್ಷತಾ ಕಾರ್ಯಗಳನ್ನು ನಡೆಸಲಾಗುತ್ತಿದೆ. ಈ ತುರ್ತುನಿರ್ವಹಣಾ ಕೆಲಸ ಪ್ರಯುಕ್ತ ಕಾಚೆಗುಡ-ಯಶವಂತಪುರ, KSR ಬೆಂಗಳೂರು-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಸೇರಿದಂತೆ ವಿವಿಧ ರೈಲುಗಳನ್ನು ಆಗಸ್ಟ್ ಈ ದಿನಾಂಕಗಳಂದು ಭಾಗಶಃ ರದ್ದುಗೊಳಿಸಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನೈಋತ್ಯ ರೈಲ್ವೆ ವಲಯ (SWR)ವು ಮುಂದಿನ ಆಗಸ್ಟ್ ಮೊದಲ ವಾರ ಈ ಕೆಳಗಿನ ನಿಲ್ದಾಣಗಳ ಮಧ್ಯೆ ಕೆಲವು ರೈಲುಗಳ ಸಂಚಾರ ಸ್ಥಗಿತವಾಗಿರುತ್ತದೆ. ಪ್ರಯಾಣಿಕರು ಗಮನಿಸಿ ಸಂಚರಿಸಬೇಕು ಎಂದು ಮನವಿ ಮಾಡಿಕೊಂಡಿದೆ.

ರೈಲುಗಳ ಭಾಗಶಃ ರದ್ದತಿ ಪಟ್ಟಿ
* KSR ಬೆಂಗಳೂರು-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು (ಸಂಖ್ಯೆ 06515) ಆಗಸ್ಟ್ 1 ರಿಂದ 6 ಮತ್ತು ಆಗಸ್ಟ್ 9 ರಿಂದ 11, 2024 ರವರೆಗೆ ಪ್ರಾರಂಭವಾಗುವ ಪ್ರಯಾಣವು ಹಿಂದೂಪುರ- ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ರೈಲು ಹಿಂದೂಪುರದಲ್ಲಿಯೇ ಕೊನೆಗೊಳ್ಳುತ್ತದೆ.
* ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷವು ರೈಲು (ಸಂಖ್ಯೆ 06516) ಹಿಂದೂಪುರದಿಂದ ಆಗಸ್ಟ್ 1 ರಿಂದ 6 ರವರೆಗೆ ಮತ್ತು ಆಗಸ್ಟ್ 9 ರಿಂದ 11, 2024 ರವರೆಗೆ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದ ಬದಲಾಗಿ ತನ್ನ ನಿಗದಿತ ನಿರ್ಗಮನದ ಸಮಯದಲ್ಲಿ ಪ್ರಯಾಣ ಆರಂಭಿಸುತ್ತದೆ. ಹೀಗಾಗಿ ಈ ರೈಲು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ-ಹಿಂದೂಪುರ ನಿಲ್ದಾಣದ ನಡುವೆ ರದ್ದಾಗಿದೆ.

* ಗುಂತಕಲ್-ಹಿಂದೂಪುರ ಮೆಮು ವಿಶೇಷ ರೈಲು (ಸಂಖ್ಯೆ 07693) ಆಗಸ್ಟ್ 8 ರಿಂದ 10 ರವರೆಗೆ ಪ್ರಯಾಣ ಆರಂಭವಾಗುತ್ತದೆ. ಈ ರೈಲಿನ ಪ್ರಮಾಣ ಧರ್ಮವರಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಧರ್ಮಾವರಂನಲ್ಲಿ ಚಿಕ್ಕದಾಗಿ ಕೊನೆಗೊಳ್ಳುತ್ತದೆ.
* ಹಿಂದೂಪುರ-ಗುಂತಕಲ್ ಮೆಮು ವಿಶೇಷವು ರೈಲು (ಸಂಖ್ಯೆ 07694) ಹಿಂದೂಪುರ ನಿಲ್ದಾಣದ ಬದಲಿಗೆ ಆಗಸ್ಟ್ 9 ರಿಂದ 11 ರವರೆಗೆ ನಿಗದಿತ ನಿರ್ಗಮನದ ಸಮಯದಲ್ಲಿ ಧರ್ಮವರಂನಿಂದ ತನ್ನ ಸಂಚಾರ ಆರಂಭಿಸುತ್ತದೆ. ಹಿಂದೂಪುರ-ಧರ್ಮಾವರಂ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.
ಈ ರೈಲುಗಳು ಮಾರ್ಗ ಬದಲು
* ಕಾಚೆಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 20703) ಆಗಸ್ಟ್ 3, 6 ಮತ್ತು 11ರಂದು ಪ್ರಾರಂಭವಾಗುವ ಪ್ರಯಾಣ ಧರ್ಮವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
* CSMT ಮುಂಬೈ-ತಿರುವನಂತಪುರಂ ಸೆಂಟ್ರಲ್ ವೀಕ್ಲಿ ಎಕ್ಸ್ಪ್ರೆಸ್ ರೈಲು (ಸಂಖ್ಯೆ 16331) ಆಗಸ್ಟ್ 4ರಂದು ಸಂಚಾರ ಆರಂಭಿಸಿ ಧರ್ಮವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಚಲಿಸಲಿದೆ.
* ಟುಟಿಕೋರಿನ್-ಓಖಾ ವಿವೇಕ್ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು (ಸಂಖ್ಯೆ 19567) ಆಗಸ್ಟ್ 4ರಂದು ಸಂಚಾರ ಆರಂಭಿಸುವ ರೈಲು ಹಿಂದೂಪುರ, ಪೆನುಕೊಂಡ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮತ್ತು ಧರ್ಮಾವರಂ ನಿಲ್ದಾಣಗಳ ಮೂಲಕ ಚಲಿಸುವಂತೆ ತಿರುಗಿಸಲಾಗಿದೆ.
* ಕಲಬುರಗಿ-SMVT ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 22231) ಆಗಸ್ಟ್ 6 ರಂದು ಪ್ರಾರಂಭವಾಗುವ ರೈಲಿನ ಪ್ರಯಾಣ ಅನಂತಪುರ ಮೂಲಕ ಕಾರ್ಯಾಚರಣೆಗೊಳ್ಳಲಿದೆ. ಈ ವೇಳೆ ಅದು ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications