ವಿಮಾನದಲ್ಲಿ ಮಾರ್ಗಮಧ್ಯೆ ಮದ್ಯ ಮಾಡಿದ ಗಲಾಟೆ: ದೆಹಲಿಗೆ ವಾಪಸ್ಸಾದ ವಿಮಾನ- ಎಫ್ಐಆರ್ ದಾಖಲು!
ದೆಹಲಿ ಏಪ್ರಿಲ್ 10: ವಿಮಾನದಲ್ಲಿ ಪ್ರಯಾಣಿಕರು ಅಶಿಸ್ತಿನಿಂದ ವರ್ತಿಸುತ್ತಿರುವ ಘಟನೆಗಳು ಪ್ರತಿ ದಿನ ಕಂಡು ಬರುತ್ತಿವೆ. ಇತ್ತೀಚೆಗೆ ಪಾನಪತ್ತ ಪ್ರಯಾಣಿಕರು ವಿಮಾನ ಸಿಬ್ಬಂದಿಗಳಿಗೆ ಹಾಗೂ ಸಹ ಪ್ರಯಾಣಿಕರಿಗೆ ತೊಂದರೆಗಳನ್ನು ನೀಡುವ ಮೂಲಕ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿರುವುದು ವಿಮಾನದಲ್ಲಿ ಪ್ರಯಾಣಿಕರ ಸುರಕ್ಷತೆಯ ಪ್ರಶ್ನೆ ಉದ್ಬವಿಸಿದೆ.
ಇಂದು ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ. ಏರ್ ಇಂಡಿಯಾ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನು ವಿಮಾನದಲ್ಲಿ ಅಶಿಸ್ತಿನಿಂದ ವರ್ತಿಸಿದ್ದಕ್ಕೆ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ-ಲಂಡನ್ AI 111 ವಿಮಾನದಲ್ಲಿ ಈ ಘಟನೆ ನಡೆದಿದೆ. ಈ ಕಾರಣದಿಂದ ಏರ್ ಇಂಡಿಯಾ ದೆಹಲಿ-ಲಂಡನ್ ವಿಮಾನವನ್ನು ದೆಹಲಿಗೆ ಹಿಂದಿರುಗಿಸಲಾಗಿದೆ. ಅಶಿಸ್ತಿನ ಪುರುಷ ಪ್ರಯಾಣಿಕರಿದ್ದ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (IGIA) ಮರಳಿದೆ.

ವಿಮಾನಯಾನ ಸಂಸ್ಥೆಯ ಅಧಿಕಾರಿಯ ಪ್ರಕಾರ, ಪ್ರಯಾಣಿಕನೊಬ್ಬ ವಿಮಾನ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಾನೆ. ಹೀಗಾಗಿ ಏರ್ ಇಂಡಿಯಾ, ಪ್ರಯಾಣಿಕನನ್ನು ಲ್ಯಾಂಡಿಂಗ್ ನಂತರ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದೆ. ವರದಿಯ ನಂತರ, ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿದೆ.
Air India Delhi-London (AI-111) flight turns around due to an 'unruly' passenger onboard
— ANI (@ANI) April 10, 2023
According to an airline official the passenger had a fight with flight crew members in mid-air. The airline has lodged a complaint with the Delhi Airport Police on the incident. The said…
"ಏರ್ ಇಂಡಿಯಾ ದೆಹಲಿ-ಲಂಡನ್ AI 111 ವಿಮಾನವನ್ನು ಇಂದು ದೆಹಲಿಗೆ ಹಿಂದಿರುಗಿಸಲು ನಿರ್ಧರಿಸಲಾಗಿದೆ. ವಿಮಾನದಲ್ಲಿದ್ದ ಪ್ರಯಾಣಿಕನ ಗಂಭೀರ ಅಶಿಸ್ತಿನ ವರ್ತನೆಯಿಂದಾಗಿ ನಿರ್ಗಮನದ ಸ್ವಲ್ಪ ಸಮಯದ ನಂತರ ದೆಹಲಿಗೆ ಮರಳಿತು. ಮೌಖಿಕ ಮತ್ತು ಲಿಖಿತ ಎಚ್ಚರಿಕೆಗಳಿಗೆ ಕಿವಿಗೊಡದೆ, ಇಬ್ಬರು ಕ್ಯಾಬಿನ್ ಸಿಬ್ಬಂದಿಗಳಿಗೆ ಪ್ರಯಾಣಿಕರು ದೈಹಿಕ ಹಾನಿಯನ್ನುಂಟುಮಾಡುವುದು ಸೇರಿದಂತೆ ಅಶಿಸ್ತಿನ ವರ್ತನೆಯನ್ನು ಮುಂದುವರೆಸಿದರು. ಹೀಗಾಗಿ ಪ್ರಯಾಣಿಕನನ್ನು ದೆಹಲಿ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಲಾಯಿತು. ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದಾರೆ" ಎಂದು ಟಾಟಾ ಗ್ರೂಪ್ನ ಏರ್ಲೈನ್ ಮಾಧ್ಯಮಕ್ಕೆ ತಿಳಿಸಿದೆ.
ಈ ಪ್ರಯಾಣಿಕ ಪ್ರಸ್ತುತ ದೆಹಲಿ ವಿಮಾನ ನಿಲ್ದಾಣದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ವಿಮಾನದಲ್ಲಿ ಸುಮಾರು 225 ಪ್ರಯಾಣಿಕರಿದ್ದರು. ಅಶಿಸ್ತಿನ ಪ್ರಯಾಣಿಕನನ್ನು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಮತ್ತು ನಂತರ ವಿಮಾನವು ಲಂಡನ್ ಹೀಥ್ರೂಗೆ ಹೊರಟಿದೆ.

ಇತ್ತೀಚಿನ ದಿನಗಳಲ್ಲಿ, ಪುರುಷ ಪ್ರಯಾಣಿಕನೊಬ್ಬ ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆಗಳು ಮತ್ತು ವಿಮಾನಗಳ ಶೌಚಾಲಯದಲ್ಲಿ ಜನರು ಧೂಮಪಾನ ಮಾಡುವುದು ಸೇರಿದಂತೆ ವಿಮಾನ ಪ್ರಯಾಣಿಕರು ಅಶಿಸ್ತಿನ ವರ್ತನೆಯ ಅನೇಕ ಪ್ರಕರಣಗಳಿವೆ.
ಆದ್ದರಿಂದ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ಘಟನೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಮತ್ತು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳು ಸಂಬಂಧಿಸಿದ ಪ್ರಯಾಣಿಕರಿಗೆ ಹಾರಾಟದ ನಿಷೇಧವನ್ನು ವಿಧಿಸಿವೆ. ಇತ್ತೀಚೆಗೆ ಡಿಜಿಸಿಎ ಮುಖ್ಯಸ್ಥರು ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯಲ್ಲಿ ತೊಡಗಿರುವ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಅಧಿಕಾರವಿದೆ ಎಂದು ಹೇಳಿದರು.

ಜನವರಿಯಲ್ಲಿ, DGCA ಎರಡು ಬಾರಿ ಪ್ರಯಾಣಿಕರ ಅಶಿಸ್ತಿನ ವರ್ತನೆಯ ಘಟನೆಗಳಿಗೆ ಸಂಬಂಧಿಸಿದಂತೆ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಗೆ ದಂಡ ವಿಧಿಸಿತು. ಜನವರಿ 24 ರಂದು, ಡಿಸೆಂಬರ್ 6, 2022 ರಂದು ಪ್ಯಾರಿಸ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆಯ ಎರಡು ಘಟನೆಗಳನ್ನು ವರದಿ ಮಾಡದಿದ್ದಕ್ಕಾಗಿ ನಿಯಂತ್ರಕರು ಏರ್ಲೈನ್ಗೆ 10 ಲಕ್ಷ ರೂ. ದಂಡವನ್ನು ವಿಧಿಸಿದರು.
ಜನವರಿ 20 ರಂದು ವಾಚ್ಡಾಗ್ ಏರ್ ಇಂಡಿಯಾಕ್ಕೆ 30 ಲಕ್ಷ ದಂಡವನ್ನು ವಿಧಿಸಲಾಗಿತ್ತು. ನವೆಂಬರ್ನಲ್ಲಿ ಮಹಿಳಾ ಸಹ-ಪ್ರಯಾಣಿಕರ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್-ಕಮಾಂಡ್ ಪರವಾನಗಿಯನ್ನು ಅಮಾನತುಗೊಳಿಸಲಾಯಿತು. ಘಟನೆಗೆ ಸಂಬಂಧಿಸಿದಂತೆ, ತನ್ನ ಕರ್ತವ್ಯವನ್ನು ನಿರ್ವಹಿಸಲು ವಿಫಲವಾದ ಏರ್ ಇಂಡಿಯಾದ ವಿಮಾನದೊಳಗಿನ ಸೇವೆಗಳ ನಿರ್ದೇಶಕರಿಗೆ 3 ಲಕ್ಷ ದಂಡವನ್ನು ವಿಧಿಸಲಾಗಿದೆ. 2017 ರಿಂದ ಒಟ್ಟು 143 ಪ್ರಯಾಣಿಕರನ್ನು 'ನೊ ಫ್ಲೈ ಲಿಸ್ಟ್'ಗೆ ಸೇರಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications