ರೈಲ್ವೆ ಟಿಕೆಟ್ ಮೇಲೆ ಶೇ 20ರ ರಿಯಾಯಿತಿ: ಯಾರಿಗೆ ಸಿಗಲಿದೆ ಈ ಆಫರ್?
ಚೆನ್ನೈ, ನವೆಂಬರ್ 12: ರಾಜಧಾನಿ, ಶತಾಬ್ದಿ ಮತ್ತು ದುರಂತೋ ಸ್ಪೆಷಲ್ನಂತಹ ಪ್ರಮುಖ ರೈಲುಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್ನ ಮೂಲ ದರದ ಮೇಲೆ ಶೇ 20ರವರೆಗೂ ರಿಯಾಯಿತಿ ಸಿಗಲಿದೆ ಎಂದು ಭಾರತೀಯ ರೈಲ್ವೆ ಪ್ರಕಟಿಸಿದೆ. ವಿಮಾನಯಾನ ಸಂಸ್ಥೆಗಳ ರೀತಿಯಲ್ಲಿಯೇ ರೈಲ್ವೇ ಕೂಡ ಟಿಕೆಟ್ ದರದ ಮೇಲಿನ ರಿಯಾಯಿತಿ ನೀಡಲು ಮುಂದಾಗಿದೆ. ಇದು ಸೀಟುಗಳ ಭರ್ತಿಯಾಗುವಿಕೆಯ ಮಟ್ಟವನ್ನು ಅವಲಂಬಿಸಿರುತ್ತದೆ.
ಲಾಕ್ಡೌನ್ ಸಂದರ್ಭದಲ್ಲಿ ಪ್ರೀಮಿಯರ್ ಟ್ರೈನುಗಳಲ್ಲಿನ ಓಡಾಟಕ್ಕೆ ಜನರು ಹೆಚ್ಚಿನ ಆದ್ಯತೆ ನೀಡುವ ಉದ್ದೇಶದೊಂದಿಗೆ ರೈಲ್ವೇಸ್ ಈ ರಿಯಾಯಿತಿ ಯೋಜನೆಯನ್ನು ಆರಂಭಿಸಿದೆ.
ರೈಲ್ವೆ ಟಿಕೆಟ್ ಕಾಯ್ದಿರಿಸುವ ಸಂದರ್ಭದಲ್ಲಿ ಶೇ 60ರಷ್ಟು ಸೀಟುಗಳು ಭರ್ತಿಯಾಗಿದ್ದರೆ ಪ್ರಯಾಣಿಕರಿಗೆ ಮೂಲ ದರದ ಮೇಲೆ ಶೇ 20ರಷ್ಟು ರಿಯಾಯಿತಿಯ ಆಫರ್ ಸಿಗಲಿದೆ. ಹಾಗೆಯೇ ಶೇ 70-80ರಷ್ಟು ಸೀಟುಗಳು ಭರ್ತಿಯಾಗಿದ್ದರೆ ಪ್ರಯಾಣಿಕರು ಶೇ 10ರಷ್ಟು ರಿಯಾಯಿತಿ ಪಡೆಯಲಿದ್ದಾರೆ. ಶೇ 80ಕ್ಕಿಂತ ಹೆಚ್ಚಿನ ಸೀಟುಗಳು ಭರ್ತಿಯಾಗಿದ್ದರೆ ಯಾವುದೇ ರಿಯಾಯಿತಿಯ ಆಫರ್ ಸಿಗುವುದಿಲ್ಲ.

ಆದರೆ ಈ ದರದಲ್ಲಿನ ವಿನಾಯಿತಿಯು ಥರ್ಡ್ ಟೈರ್ ಎಸಿ ಕ್ಲಾಸ್ ಮತ್ತು ಎಸಿ ಚೇರ್ ಕಾರ್ನಲ್ಲಿನ ಟಿಕೆಟ್ ಬುಕ್ಕಿಂಗ್ಗೆ ಮಾತ್ರ ಅನ್ವಯಿಸುತ್ತದೆ. ಕಾಯ್ದಿರಿಸುವಿಕೆಯ ಶುಲ್ಕ, ಸುಪರ್ ಫಾಸ್ಟ್ ಮತ್ತು ಜಿಎಸ್ಟಿಗಳಂತಹ ಇತರೆ ದರಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.
ರೈಲುಗಳು ಹೊರಡುವ ನಿಗದಿತ ಸಮಯದ ನಾಲ್ಕು ದಿನಗಳಿಗೂ ಮುಂಚಿನವರೆಗೆ ಟಿಕೆಟ್ಗಳನ್ನು ಕಾಯ್ದಿರಿಸುವ ಎಲ್ಲ ಪ್ರಯಾಣಿಕರಿಗೂ ಈ ರಿಯಾಯಿತಿ ಸಿಗಲಿದೆ. ಆದರೆ ಪ್ರಯಾಣದ ದಿನ ಟಿಕೆಟ್ ಬುಕ್ ಮಾಡಿದರೆ ದರದಲ್ಲಿ ಯಾವುದೇ ಕಡಿತವಾಗುವುದಿಲ್ಲ.
ಉದಾಹರಣೆಗೆ ಪ್ರಯಾಣಿಕರು ನವೆಂಬರ್ 15ರಂದು ಟ್ರೈನಿನಲ್ಲಿ ಪ್ರಯಾಣಿಸಬೇಕಿದ್ದರೆ, ನವೆಂಬರ್ 11ರಿಂದ 14ರವರೆಗೆ ಟಿಕೆಟ್ಗಳನ್ನು ಕಾಯ್ದಿರಿಸಿದರೆ ಈ ಯೋಜನೆಯಡಿ ರಿಯಾಯತಿ ಸಿಗುತ್ತದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ










Click it and Unblock the Notifications