Heart Attack : ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಜನರ ಸಾವು
ಲಖನೌ, ಜನವರಿ 09: ತೀವ್ರ ಚಳಿ ವಾತಾವರಣದ ಪರಿಣಾಮವಾಗಿ ಉತ್ತರ ಪ್ರದೇಶದ ಲಖನೌನಲ್ಲಿ ಹೃದಯಾಘಾತ ಮತ್ತು ಮೆದುಳು ನಿಷ್ಕ್ರೀಯದಿಂದ ಕಳೆದ ಐದೇ ದಿನದಲ್ಲಿ ಒಟ್ಟು 98 ಮಂದಿ ಮೃತಪಟ್ಟಿದ್ದಾರೆ.
ಉತ್ತರ ಭಾರತದಾದ್ಯಂತ ಕಳೆದ ಕೆಲವು ವಾರಗಳಿಂದ ತೀವ್ರವಾಗಿ ಚಳಿ ಗಾಳಿ ಬೀಸುತ್ತಿದೆ. ನಿತ್ಯ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ದಾಖಲಾಗುತ್ತಿದೆ. ಈ ಕಾರಣದಿಂದ ಯಾರೂ ಮನೆಯಿಂದ ಹೊರ ಬರುತ್ತಿಲ್ಲ. ಎದುರಿಗಿನ ಹತ್ತಿರದ ವ್ಯಕ್ತಿಗಳೇ ಕಾಣದಷ್ಟು ಮಂಜು ಕವಿಯುತ್ತಿದೆ. ಈ ತೀವ್ರ ಶೀತದಿಂದ ಅನಾರೋಗ್ಯಕ್ಕೆ ಒಳಗಾಗುವುದು ಸಾಮಾನ್ಯವಾಗಿತ್ತು. ಆದರೆ ಇದೇ ಕಾರಣದಿಂದ ಇದೀಗ ಕಾನ್ಪುರದಲ್ಲಿ ಸರಣಿ ಸಾವುಗಳು ಸಂಭವಿಸಿವೆ.
ಒಟ್ಟು 98 ಸಾವುಗಳ ಪೈಕಿ 44 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆ, 54 ಮಂದಿ ಆಸ್ಪತ್ರೆಗೆ ಬರುವ ದಾರಿ ಮಧ್ಯದಲ್ಲೇ ಉಸಿರು ಚೆಲ್ಲಿದ್ದಾರೆ. ಈ ಬಗ್ಗೆ ಅಧಿಕೃತ ಕಾರಣ ತಿಳಿಸಿದ ಕಾನ್ಪುರದ ಎಲ್ಪಿಎಸ್ ಹೃದ್ರೋಗ ಸಂಸ್ಥೆಯ ಹೃದ್ರೋಗ ತಜ್ಞರ ಮತ್ತು ಕಾರ್ಡಿಯಾಕ್ ಸರ್ಜನ್ ಲಕ್ಷ್ಮೀಪಥ್ ಸಿಂಗಾನಿಯ ಅವರು ಅಂಕಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ನಮ್ಮ ಹೃದ್ರೋಗ ಸಂಸ್ಥೆಗೆ 723 ಮಂದಿ ಹೃದಯ ಸಂಬಂಧಿ ತೀವ್ರ ಅನಾರೋಗ್ಯಕ್ಕೆ ಒಳಗಾದವರು ಆಗಮಿಸಿದ್ದರು. ಅದರಲ್ಲಿ 14 ಮಂದಿ ತೀವ್ರ ಶೀತದಿಂದ ಬಳಲುತ್ತಿದ್ದರು. ಅದರಲ್ಲಿ ಆರು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬುದು ತಪಾಸಣೆ ವೇಳೆ ತಿಳಿದು ಬಂದಿದೆ. ಬಾಕಿ ಎಂಟು ಮಂದಿ ಆಸ್ಪತ್ರೆ ಬರುವ ಮುನ್ನವೇ ಮೃತಪಟ್ಟಿದ್ದರು ಎಂದು ಅವರು ತಿಳಿಸಿದರು.
ಶೀತದಿಂದ ತಪ್ಪಿಸಿಕೊಂಡರೆ ಆರೋಗ್ಯ ಸುರಕ್ಷಿತ
ಒಟ್ಟು 14 ಮಂದಿ 24 ಗಂಟೆಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೇ ಒಟ್ಟು 604 ಮಂದಿ ರೋಗಿಗಳು ಹೃದ್ರೋಗ ಸಂಸ್ಥೆಗೆ ದಾಖಲಾಗಿದ್ದಾರೆ. ಅದರಲ್ಲಿ 54 ಮಂದಿ ಹೊಸ ರೋಗಿಗಳಿದ್ದು, 27ಮಂದಿ ಈಗಾಗಲೇ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆದ ಹಳೆ ರೋಗಿಗಳು ಇದ್ದಾರೆ.
ಹೃದ್ರೋಗ ಸಂಸ್ಥೆಯ ನಿರ್ದೇಶಕ ವಿನಯ ಕೃಷ್ಣ ಅವರು, ಜನರು ತೀವ್ರ ಶೀತದಿಂದ ರಕ್ಷಿಸಿಕೊಳ್ಳಬೇಕು. ಸದಾ ಬೆಚ್ಚಿನ ವಾತಾವರಣದಲ್ಲಿ ಇರುವ ಮೂಲಕ ಆರೋಗ್ಯವಾಗಿರಬೇಕು ಎಂದರು.

ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (ಕೆಜಿಎಂಯು) ಅಧ್ಯಾಪಕರೊಬ್ಬರು,ಈ ಶೀತ ವಾತಾವರಣದಲ್ಲಿ ಹೃದಯಾಘಾತವು ಕೇವಲ ವಯಸ್ಸಾದವರಿಗೆ ಸೀಮಿತವಾಗದೇ ಹದಿ ಹರೆಯದವರೂ ಸಹ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಶೀತಕ್ಕೆ ಮೈಯೊಡ್ಡದೇ ಸದಾ ಬೆಚ್ಚಗಿದ್ದು, ಆರೋಗ್ಯವಾಗಿರಬೇಕು ಎಂದು ಅವರು ಸಲಹೆ ನೀಡಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications