ಪತಂಜಲಿ ಸಿಇಒ ಬಾಲಕೃಷ್ಣ ಭಾರತದ 8ನೇ ಅತಿ ದೊಡ್ಡ ಶ್ರೀಮಂತ!
Recommended Video

ಮುಂಬೈ, ಸೆಪ್ಟೆಂಬರ್ 26: ಪತಂಜಲಿ ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ (ಸಿಇಒ) ಆಚಾರ್ಯ ಬಾಲಕೃಷ್ಣ ಅವರು, ಹುರೂನ್ ಸಂಸ್ಥೆ ತಯಾರಿಸಿರುವ ಭಾರತದ 2017ನೇ ವರ್ಷದ ಅತಿ ಶ್ರೀಮಂತರ ಪಟ್ಟಿಯಲ್ಲಿ 8ನೇ ಸ್ಥಾನ ಗಳಿಸಿದ್ದಾರೆ.
ಕಳೆದ ವರ್ಷ ಪ್ರಕಟಗೊಂಡಿದ್ದ ಹುರೂನ್ ಟಾಪ್ 10 ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ ಬಾಲಕೃಷ್ಣ ಅವರು, 25ನೇ ಸ್ಥಾನ ಪಡೆದಿದ್ದರು.
ಈ ಒಂದು ವರ್ಷದಲ್ಲಿ ಅವರ ಆಸ್ತಿ ಪ್ರಮಾಣ ಶೇ. 173ರಷ್ಟು ಏರಿಕೆ ಕಂಡಿದ್ದು, ಈಗ ಅದರ ಮೌಲ್ಯ 70 ಸಾವಿರ ಕೋಟಿ ರು. ಎಂದು ಅಂದಾಜಿಸಲಾಗಿದೆ.

ಅವರು ಸ್ಥಾಪಿಸಿರುವ ಪತಂಜಲಿ ಕಂಪನಿಯು ವಾರ್ಷಿಕವಾಗಿ 10,561 ಕೋಟಿ ರು. ವಹಿವಾಟು ನಡೆಸುತ್ತಿರುವುದರಿಂದ ಬಾಲಕೃಷ್ಣ ಅವರ ಶ್ರೀಮಂತಿಕೆ ಹೆಚ್ಚಾಗಲು ಕಾರಣ ಎನ್ನಲಾಗಿದೆ. ಹೀಗಾಗಿ, ಅವರು ಹುರೂನ್ ಪಟ್ಟಿಯ ಟಾಪ್ 10 ಶ್ರೀಮಂತರ ಪಟ್ಟಿಯ ಟಾಪ್ 10ರೊಳಗೆ ಕಾಣಿಸಿಕೊಳ್ಳಲು ಸಾಧ್ಯವಾಗಿದೆ.
ಅಂದಹಾಗೆ, ಈ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಜಿಯೋ ಕಂಪನಿಯ ಮುಖ್ಯಸ್ಥ ಮುಖೇಶ್ ಅಂಬಾನಿ ಅವರು ಕಾಯ್ದುಕೊಂಡಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಅವರ ಆಸ್ತಿಯು ಶೇ. 58ರಷ್ಟು ಹೆಚ್ಚಾಗಿದ್ದು, ಇದೀಗ ಅವರ ಆಸ್ತಿ ಮೌಲ್ಯ 2.57 ಟ್ರಿಲಿಯನ್ ಕೋಟಿ ರು. ಎಂದು ಹೇಳಲಾಗಿದೆ.
ಹುರೂನ್ ಸಂಸ್ಥೆಯು ಚೀನಾ ಮೂಲದ್ದಾಗಿದ್ದು, ಲಂಡನ್ ನಲ್ಲಿರುವ ತನ್ನ ಕಚೇರಿಯ ಮೂಲಕ ಪ್ರತಿ ವರ್ಷ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಶ್ರೀಮಂತರ ಪಟ್ಟಿಗಳನ್ನು ವಾರ್ಷಿಕ ಲೆಕ್ಕಾಚಾರದ ಆಧಾರದ ಮೇಲೆ ಬಿಡುಗಡೆ ಮಾಡುತ್ತದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications