ಪಠಾಣ್ ವಿವಾದ: ಸರ್ಕಾರದ ಮಧ್ಯಸ್ಥಿಕೆ ಕೋರಿದ ಗುಜರಾತ್ನ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್
ದೆಹಲಿ ಜನವರಿ 17: ಪಠಾಣ್ ಚಿತ್ರದ ಬೇಷರಂ ರಂಗ್ ಹಾಡು ಬಿಡುಗಡೆಯಾದಾಗಿನಿಂದ ಶಾರೂಕ್ ಖಾನ್ ವಿರುದ್ಧ ವಿವಾದ ಬೆನ್ನತ್ತಿ ಹೋಗುತ್ತಲೇ ಇದೆ. ಶಾರೂಕ್ ಖಾನ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಹ ಅಪಸ್ವರ ಎತ್ತಿವೆ. ಈ ನಡುವೆ ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರದ ಪ್ರದರ್ಶನದ ವಿರುದ್ಧ ಹಲವಾರು ಚಿತ್ರಮಂದಿರಗಳಿಗೆ ಬೆದರಿಕೆಗಳು ಬಂದಿರುವುದರಿಂದ ಗುಜರಾತ್ನ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಸರ್ಕಾರದ ಮಧ್ಯಸ್ಥಿಕೆಯನ್ನು ಕೋರಿದೆ. ಜನವರಿ 25 ರಂದು ಚಿತ್ರ ಬಿಡುಗಡೆಯಾಗುವ ಸಂದರ್ಭದಲ್ಲಿ ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ ಮಲ್ಟಿಪ್ಲೆಕ್ಸ್ಗಳು ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಅವರನ್ನು ಒತ್ತಾಯಿಸಿವೆ.
ಅಸೋಸಿಯೇಷನ್ ತನ್ನ ಪತ್ರದಲ್ಲಿ ಕಳೆದ 20 ದಿನಗಳಲ್ಲಿ ಬಹುತೇಕ ಸಿನಿಮಾ ಪ್ರದರ್ಶಕರು ಪಠಾಣ್ ಸಿನಿಮಾವನ್ನು ಪ್ರದರ್ಶಿಸದಂತೆ ಮೌಖಿಕ ಮತ್ತು ಲಿಖಿತ ನೇರ ಮತ್ತು ಪರೋಕ್ಷ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಚಿತ್ರದಲ್ಲಿ ಲೋಪವಿದ್ದರೆ ಅದನ್ನು ಸರಿಪಡಿಸಲು ನೇರಾನೇರ ಮಾತುಕತೆ ನಡೆಸುವುದು ಉತ್ತಮ ಆದರೆ ಈ ರೀತಿ ಬೆದರಿಕೆಗಳು ಸಮಂಜಸವಲ್ಲ ಎಂದು ಮಲ್ಟಿಪ್ಲೆಕ್ಸ್ಗಳು ಹೇಳಿವೆ.

"ಪಠಾಣ್ ಚಲನಚಿತ್ರವನ್ನು ಪ್ರದರ್ಶಿಸಿದರೆ ಸಿಬ್ಬಂದಿ ಮತ್ತು ಚಲನಚಿತ್ರ ಪ್ರೇಕ್ಷಕರ ಸುರಕ್ಷತೆ ಬಗ್ಗೆ ಹಾಗೂ ಚಲನಚಿತ್ರ ಪ್ರದರ್ಶಕರಿಗೆ ಕಾನೂನುಬಾಹಿರವಾಗಿ ಬೆದರಿಕೆ ಹಾಕಲಾಗುತ್ತಿದೆ. ತಮ್ಮ ಅಜೆಂಡಾಗಳ ಆಧಾರದ ಮೇಲೆ ಚಲನಚಿತ್ರ ಪ್ರದರ್ಶಕರನ್ನು ಗುರಿಯಾಗಿಸುವ ಹಲವಾರು ಗುಂಪುಗಳಿವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ. "ಆದ್ದರಿಂದ ನಾವು ನಮ್ಮ ಆಸ್ತಿಗಳು ಮತ್ತು ವ್ಯವಹಾರದ ಆಸಕ್ತಿಯನ್ನು ರಕ್ಷಿಸುವ ಬಗ್ಗೆ ನಿಮ್ಮ ಕಡೆಯಿಂದ ಎಲ್ಲಾ ರೀತಿಯ ಬೆಂಬಲವನ್ನು ಕೋರುತ್ತೇವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಡಿಸೆಂಬರ್ 12 ರಂದು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾದ ಬೇಶರಂ ರಂಗ್ ಹಾಡನ್ನು ಬಿಡುಗಡೆ ಮಾಡಲಾಯಿತು. ಪಠಾಣ್ ಸಿನಿಮಾ ವಿವಾದವನ್ನು ಎದುರಿಸುತ್ತಿದೆ. ಜೊತೆಗೆ ಸಿನಿಮಾವನ್ನು ನಿಷೇಧಕ್ಕೆ ಹಲವಾರು ಕರೆ ಬಂದಿವೆ.

ಕೇಸರಿ ಬಿಕಿನಿಯಲ್ಲಿ ದೀಪಿಕಾಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಇದು "ಹಿಂದೂ ಭಾವನೆಗಳನ್ನು" ಘಾಸಿಗೊಳಿಸಿದೆ ಎಂದು ಆರೋಪಿಸಿ ಭಾರತದಾದ್ಯಂತ ಪ್ರತಿಭಟನೆ ನಡೆದಿವೆ. ಜೊತೆಗೆ ಪಠಾಣ್ ಸಿನಿಮಾ ಪ್ರದರ್ಶಿಸದಂತೆ ಒತ್ತಡಗಳನ್ನು ಹಾಕಲಾಗಿದೆ. ಜಾನ್ ಅಬ್ರಹಾಂ ಸಹ ನಟಿಸಿರುವ ಪಠಾನ್ ಜನವರಿ 25 ರಂದು ಥಿಯೇಟರ್ಗಳಿಗೆ ಬರಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications