ಪಠಾಣ್ ವಿವಾದ: ಸರ್ಕಾರದ ಮಧ್ಯಸ್ಥಿಕೆ ಕೋರಿದ ಗುಜರಾತ್ನ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್
ದೆಹಲಿ ಜನವರಿ 17: ಪಠಾಣ್ ಚಿತ್ರದ ಬೇಷರಂ ರಂಗ್ ಹಾಡು ಬಿಡುಗಡೆಯಾದಾಗಿನಿಂದ ಶಾರೂಕ್ ಖಾನ್ ವಿರುದ್ಧ ವಿವಾದ ಬೆನ್ನತ್ತಿ ಹೋಗುತ್ತಲೇ ಇದೆ. ಶಾರೂಕ್ ಖಾನ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಹ ಅಪಸ್ವರ ಎತ್ತಿವೆ. ಈ ನಡುವೆ ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರದ ಪ್ರದರ್ಶನದ ವಿರುದ್ಧ ಹಲವಾರು ಚಿತ್ರಮಂದಿರಗಳಿಗೆ ಬೆದರಿಕೆಗಳು ಬಂದಿರುವುದರಿಂದ ಗುಜರಾತ್ನ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಸರ್ಕಾರದ ಮಧ್ಯಸ್ಥಿಕೆಯನ್ನು ಕೋರಿದೆ. ಜನವರಿ 25 ರಂದು ಚಿತ್ರ ಬಿಡುಗಡೆಯಾಗುವ ಸಂದರ್ಭದಲ್ಲಿ ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ ಮಲ್ಟಿಪ್ಲೆಕ್ಸ್ಗಳು ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಅವರನ್ನು ಒತ್ತಾಯಿಸಿವೆ.
ಅಸೋಸಿಯೇಷನ್ ತನ್ನ ಪತ್ರದಲ್ಲಿ ಕಳೆದ 20 ದಿನಗಳಲ್ಲಿ ಬಹುತೇಕ ಸಿನಿಮಾ ಪ್ರದರ್ಶಕರು ಪಠಾಣ್ ಸಿನಿಮಾವನ್ನು ಪ್ರದರ್ಶಿಸದಂತೆ ಮೌಖಿಕ ಮತ್ತು ಲಿಖಿತ ನೇರ ಮತ್ತು ಪರೋಕ್ಷ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಚಿತ್ರದಲ್ಲಿ ಲೋಪವಿದ್ದರೆ ಅದನ್ನು ಸರಿಪಡಿಸಲು ನೇರಾನೇರ ಮಾತುಕತೆ ನಡೆಸುವುದು ಉತ್ತಮ ಆದರೆ ಈ ರೀತಿ ಬೆದರಿಕೆಗಳು ಸಮಂಜಸವಲ್ಲ ಎಂದು ಮಲ್ಟಿಪ್ಲೆಕ್ಸ್ಗಳು ಹೇಳಿವೆ.

"ಪಠಾಣ್ ಚಲನಚಿತ್ರವನ್ನು ಪ್ರದರ್ಶಿಸಿದರೆ ಸಿಬ್ಬಂದಿ ಮತ್ತು ಚಲನಚಿತ್ರ ಪ್ರೇಕ್ಷಕರ ಸುರಕ್ಷತೆ ಬಗ್ಗೆ ಹಾಗೂ ಚಲನಚಿತ್ರ ಪ್ರದರ್ಶಕರಿಗೆ ಕಾನೂನುಬಾಹಿರವಾಗಿ ಬೆದರಿಕೆ ಹಾಕಲಾಗುತ್ತಿದೆ. ತಮ್ಮ ಅಜೆಂಡಾಗಳ ಆಧಾರದ ಮೇಲೆ ಚಲನಚಿತ್ರ ಪ್ರದರ್ಶಕರನ್ನು ಗುರಿಯಾಗಿಸುವ ಹಲವಾರು ಗುಂಪುಗಳಿವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ. "ಆದ್ದರಿಂದ ನಾವು ನಮ್ಮ ಆಸ್ತಿಗಳು ಮತ್ತು ವ್ಯವಹಾರದ ಆಸಕ್ತಿಯನ್ನು ರಕ್ಷಿಸುವ ಬಗ್ಗೆ ನಿಮ್ಮ ಕಡೆಯಿಂದ ಎಲ್ಲಾ ರೀತಿಯ ಬೆಂಬಲವನ್ನು ಕೋರುತ್ತೇವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಡಿಸೆಂಬರ್ 12 ರಂದು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾದ ಬೇಶರಂ ರಂಗ್ ಹಾಡನ್ನು ಬಿಡುಗಡೆ ಮಾಡಲಾಯಿತು. ಪಠಾಣ್ ಸಿನಿಮಾ ವಿವಾದವನ್ನು ಎದುರಿಸುತ್ತಿದೆ. ಜೊತೆಗೆ ಸಿನಿಮಾವನ್ನು ನಿಷೇಧಕ್ಕೆ ಹಲವಾರು ಕರೆ ಬಂದಿವೆ.

ಕೇಸರಿ ಬಿಕಿನಿಯಲ್ಲಿ ದೀಪಿಕಾಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಇದು "ಹಿಂದೂ ಭಾವನೆಗಳನ್ನು" ಘಾಸಿಗೊಳಿಸಿದೆ ಎಂದು ಆರೋಪಿಸಿ ಭಾರತದಾದ್ಯಂತ ಪ್ರತಿಭಟನೆ ನಡೆದಿವೆ. ಜೊತೆಗೆ ಪಠಾಣ್ ಸಿನಿಮಾ ಪ್ರದರ್ಶಿಸದಂತೆ ಒತ್ತಡಗಳನ್ನು ಹಾಕಲಾಗಿದೆ. ಜಾನ್ ಅಬ್ರಹಾಂ ಸಹ ನಟಿಸಿರುವ ಪಠಾನ್ ಜನವರಿ 25 ರಂದು ಥಿಯೇಟರ್ಗಳಿಗೆ ಬರಲಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications