ಎಸ್ಪಿ ಸಲ್ವಿಂದರ್ ಸಿಂಗ್ ಉತ್ತರಿಸಬೇಕಾದ ಮೂರು ಪ್ರಶ್ನೆಗಳು
ಬೆಂಗಳೂರು, ಜನವರಿ 06 : ರಾಷ್ಟ್ರೀಯ ತನಿಖಾ ದಳ ಮತ್ತು ಕೇಂದ್ರ ಗುಪ್ತಚರ ಇಲಾಖೆ ಪಠಾಣ್ ಕೋಟ್ ದಾಳಿಯ ಬಗ್ಗೆ ಮತ್ತೊಮ್ಮೆ ಗುರುದಾಸ್ಪುರ ಎಸ್ಪಿ ಸಲ್ವಿಂದರ್ ಸಿಂಗ್ ವಿಚಾರಣೆ ನಡೆಸಲಿವೆ. ಎನ್ಐಎ ಸಿಂಗ್ರಿಂದ ಹಲವು ಪ್ರಶ್ನೆಗಳಿಗೆ ಉತ್ತರ ನಿರೀಕ್ಷಿಸುತ್ತಿದ್ದು, ಅವು ತನಿಖೆಗೆ ಸಹಕಾರಿಯಾಗಲಿವೆ.
ಉಗ್ರರು ಪಠಾಣ್ ಕೋಟ್ ವಾಯುನೆಲೆಗೆ ನುಗ್ಗುವ ಮೊದಲು ಎಸ್ಪಿ ಸಲ್ವಿಂದರ್ ಸಿಂಗ್ ಹಾಗೂ ಅವರ ಸಹಾಯಕ ಮದನ್ ಗೋಪಾಲ್ ಅವರನ್ನು ಅಪಹರಣ ಮಾಡಿದ್ದರು. ಇಬ್ಬರನ್ನು ಕಾಡಿನಲ್ಲಿ ಬಿಟ್ಟು, ಅವರ ಕಾರನ್ನು ಅಪಹರಿಸಿಕೊಂಡು ವಾಯುನೆಲೆ ತಲುಪಿದ್ದರು. [ಟ್ಯಾಕ್ಸಿ ಚಾಲಕನ ಕೊಂದು ಪಾಕಿಸ್ತಾನಕ್ಕೆ ಕರೆ ಮಾಡಿದ ಉಗ್ರರು]

ಸಿಂಗ್ಗೆ ಮೂರು ಪ್ರಶ್ನೆ : ಸಲ್ವಿಂದರ್ ಸಿಂಗ್ ಅವರು ಹಲವು ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗಿದೆ. ಮುಖ್ಯವಾಗಿ ಜಲಂಧರ್ಗೆ ವರ್ಗಾವಣೆಯಾಗಿದ್ದರು ಗುರುದಾಸ್ಪುರದಲ್ಲಿ ಏನು ಮಾಡುತ್ತಿದ್ದರು? ಎಂಬುದಕ್ಕೆ ಉತ್ತರಬೇಕಾಗಿದೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ಉಗ್ರರು ಮುಂಜಾನೆ 3 ಗಂಟೆ ಸುಮಾರಿಗೆ ವಾಯುನೆಲೆಗೆ ನುಗ್ಗಿದರು. ಅದಕ್ಕೂ ಮೊದಲು ಅವರು ಸಿಂಗ್ ಅವರನ್ನು ಅಪಹರಣ ಮಾಡಿದ್ದರು. ತಡರಾತ್ರಿಯಲ್ಲಿ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಸಿಂಗ್ ಏನು ಮಾಡುತ್ತಿದ್ದರು? ಎಂದು ಎನ್ಐಎ ಪ್ರಶ್ನೆ ಮಾಡಲಿದೆ.
ಭಾರತ-ಪಾಕ್ ಗಡಿ ಸೂಕ್ಷ್ಮ ಪ್ರದೇಶವೆಂಬುದು ಎಲ್ಲರಿಗೂ ಗೊತ್ತು. ಆದರೂ, ಎಸ್ಪಿ ಅವರು ಯಾವುದೇ ಭದ್ರತಾ ಸಿಬ್ಬಂದಿ ಇಲ್ಲದೆ ಅಲ್ಲಿಗೆ ಹೋಗಿದ್ದರೆ? ಎಂದು ಎನ್ಐಎ ಪ್ರಶ್ನಿಸಲಿದ್ದು, ಸಿಂಗ್ ಮತ್ತು ಮದನ್ ಗೋಪಾಲ್ ಅವರಿಂದ ವಿವರಣೆ ಪಡೆಯಲಿದೆ.
ಮೂರು ಪ್ರಕರಣಗಳು : ಪಠಾಣ್ ಕೋಟ್ ದಾಳಿಯ ತನಿಖೆ ನಡೆಸುತ್ತಿರುವ ಎನ್ಐಎ ಮೂರು ಪ್ರಕರಣಗಳನ್ನು ದಾಖಲು ಮಾಡಿಕೊಂಡಿದೆ. ಅಪರಿಚಿತರಿಂದ ಟ್ಯಾಕ್ಸಿ ಚಾಲಕ ಇಕಾಗರ್ ಸಿಂಗ್ ಹತ್ಯೆ, ಐಪಿಎಸ್ ಅಧಿಕಾರಿ ಸಲ್ವಿಂದರ್ ಸಿಂಗ್ ಅಪಹರಣ ಮತ್ತು ವಾಯುನೆಲೆ ಮೇಲೆ ಉಗ್ರರ ದಾಳಿಯ ಕುರಿತು ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ.
20 ಮಂದಿ ಎನ್ಐಎ ಅಧಿಕಾರಿಗಳ ತಂಡ ಪಠಾಣ್ಕೋಟ್ನಲ್ಲಿನ ವಾಯುನೆಲೆ ಮೇಲಿನ ದಾಳಿಯ ಬಗ್ಗೆ ಜನವರಿ 2ರಿಂದ ತನಿಖೆ ನಡೆಸುತ್ತಿವೆ. ಎಸ್ಪಿ ದರ್ಜೆಯ ಅಧಿಕಾರಿ ಈ ತನಿಖಾ ತಂಡದ ನೇತೃತ್ವ ವಹಿಸಿದ್ದಾರೆ. [ಪಿಟಿಐ ಚಿತ್ರ]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications